Menu

IPL 2025 Final: ಐಪಿಎಲ್ ಫೈನಲ್- ಬೆಂಗಳೂರಲ್ಲಿ ಅವಧಿ ಮೀರಿ ಪಬ್‌ ಒಪನ್‌ ಇದ್ರೆ ಎಫ್‌ಐಆರ್‌

ಆರ್‌ಸಿಬಿ ಹಾಗೂ ಪಂಜಾಬ್ ನಡುವೆ ಐಪಿಎಲ್ ಫೈನಲ್ ಪಂದ್ಯ ನಡೆಯುವ ಇಂದು ಅವಧಿಗೂ ಮೀರಿ ಬೆಂಗಳೂರು ನಗರದಲ್ಲಿ ಪಬ್‌ಗಳನ್ನು ಒಪನ್ ಮಾಡಬಾರದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ನಗರದ ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ಹಲವಡೆ ಆರ್‌ಸಿಬಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಈ ಸಂಭ್ರಮ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಇಲಾಖೆ ಈ ಎಚ್ಚರಿಕೆ ನೀಡಿದೆ.

ಅಹಮದಾಬಾದ್‌ನಲ್ಲಿ ಮಳೆ ಇರುವ ಕಾರಣ ಪಂದ್ಯ ತಡವಾಗಿ ಆರಂಭವಾಗಿ ತಡರಾತ್ರಿ ಮುಕ್ತಾಯವಾಗಿತ್ತು. ಇಂದು ನಡೆಯುವ ಆರ್‌ಸಿಬಿ – ಪಂಜಾಬ್ ಫೈನಲ್ ಪಂದ್ಯ ಮಳೆ ಬಂದು ತಡವಾದರೆ ಪಬ್‌ಗಳನ್ನ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ಬಂದ್ ಮಾಡಬೇಕು. ಮ್ಯಾಚ್ ಮುಗಿದಿಲ್ಲ ಎಂದು ತಡರಾತ್ರಿಯ ತನಕ ಪಬ್ ಒಪನ್ ಮಾಡಿಕೊಂಡಿದ್ದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಪೊಲೀಸರ ಸೂಚನೆ ಮೀರಿ ಅವಧಿ ಮುಗಿದರೂ ಪಬ್ ಒಪನ್ ಮಾಡಿಕೊಂಡರೆ ಎಫ್‌ಐಆರ್ ದಾಖಲಿಸಲಾಗುತ್ತದೆ ಎಂದು ಪಬ್ ಮಾಲೀಕರಿಗೆ ತಿಳಿಸಲಾ ಗಿದೆ. ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ನಿರ್ದೇಶನ ನೀಡಲಾಗಿದೆ. ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್​​ ಅಳವಡಿಕೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

 

Related Posts

Leave a Reply

Your email address will not be published. Required fields are marked *