Menu

Iran- Israel war: “ಆಪರೇಷನ್ ಸಿಂಧು” ಮೂಲಕ ಭಾರತೀಯರು ತವರಿಗೆ

ಇರಾನ್ ಹಾಗೂ ಇಸ್ರೇಲ್ ಸಂಘರ್ಷದಿಂದ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರುವ ಪ್ರಕ್ರಿಯೆ ಆರಂಭಗೊಂಡಿದ್ದು, ಜೂ.19 (ಇಂದು) ಬೆಳಗ್ಗೆ ಇರಾನ್‍ನಿಂದ ಹೊರಟ 110 ವಿದ್ಯಾರ್ಥಿಗಳು ದೆಹಲಿ ತಲುಪಿದ್ದಾರೆ.

ಕೇಂದ್ರ ಸರ್ಕಾರ ಆಪರೇಷನ್ ಸಿಂಧು ಹೆಸರಿನಲ್ಲಿ ಕಾರ್ಯಾಚರಣೆ ಕೈಗೊಂಡು ಇರಾನ್‌ನಲ್ಲಿರುವ ತನ್ನ ವಿದ್ಯಾರ್ಥಿಗಳನ್ನು ತವರಿಗೆ ಕರೆದುಕೊಂಡು ಬರುತ್ತಿದೆ.
ವಿದ್ಯಾರ್ಥಿಗಳು ಇರಾನ್‍ನಿಂದ ಅರ್ಮೇನಿಯಾದ ಮೂಲಕ ಭಾರತಕ್ಕೆ ಹೊರಟಿದ್ದರು. ಉತ್ತರ ಭಾರತದ ಹಲವು ರಾಜ್ಯಗಳ ವಿದ್ಯಾರ್ಥಿಗಳು ದೆಹಲಿಗೆ ಬಂದಿದ್ದಾರೆ. ಆಪರೇಷನ್ ಸಿಂಧು ಭಾಗವಾಗಿ ಎರಡನೇ ವಿಮಾನವೂ ಇರಾನ್‌ನಿಂದ ಹೊರಟಿದ್ದು, ಅದರಲ್ಲಿ ಐದು ಮಂದಿ ಕನ್ನಡಿಗರಿದ್ದಾರೆ.

ಇಸ್ರೇಲ್‍ನಲ್ಲಿ ಸಿಲುಕಿದ್ದ 18 ಕನ್ನಡಿಗರು ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿಗೆ ತಲುಪುವ ಸಾಧ್ಯತೆ ಇದೆ .ಬಿ-ಪ್ಯಾಕ್ ಸದಸ್ಯರ ಕನ್ನಡಿಗರ ತಂಡ ಅಧ್ಯಯನ ಪ್ರವಾಸಕ್ಕೆ ಹೋಗಿತ್ತು. ಇಸ್ರೇಲ್‍ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿ ಅಲ್ಲೇ ಉಳಿದಿದ್ದರು. ಬುಧವಾರ ರಾತ್ರಿ ಕುವೈತ್ ತಲುಪಿ, ಅಲ್ಲಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಂಡ ಬರಲಿದೆ.

Related Posts

Leave a Reply

Your email address will not be published. Required fields are marked *