Menu

ಇಸ್ರೇಲ್‌-ಇರಾನ್‌ ಬಿಕ್ಕಟ್ಟು ತೀವ್ರ: ಭಾರತೀಯರ ಸ್ಥಳಾಂತರಕ್ಕೆ ವಾಯುನೆಲೆ ತೆರೆದ ಇರಾನ್‌

ಇಸ್ರೇಲ್‌ ಮತ್ತು ಇರಾನ್‌ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಂಡಿದೆ, ಈ ನಡುವೆ ಮುಚ್ಚಿದ್ದ ತನ್ನ ವಾಯು ನೆಲೆಯನ್ನು ಭಾರತೀಯರ ರಕ್ಷಣೆಗಾಗಿ ಇರಾನ್‌ ತೆರೆದಿದೆ.

ಭಾರತೀಯರನ್ನು ಸ್ಥಳಾಂತರಿಸುವ ವಿಮಾನಗಳಿಗಾಗಿ ಇರಾನ್‌ ಈ ವಾಯುನೆಲೆಯನ್ನು ತೆರೆದಿದೆ. ಇರಾನ್‌ನಲ್ಲಿ ಸಿಲುಕಿರುವ ಸಿಲುಕಿರುವ ಕನಿಷ್ಠ 1,000 ಭಾರತೀಯ ವಿದ್ಯಾರ್ಥಿಗಳನ್ನು ‘ಆಪರೇಷನ್‌ ಸಿಂಧು’ ಹೆಸರಲ್ಲಿ ಸರ್ಕಾರ ವಿಮಾನಗಳ ಮೂಲಕ ಸ್ಥಳಾಂತರಿಸಲು ಕ್ರಮ ಕೈಗೊಂಡಿದೆ.

ಇಸ್ರೇಲ್‌ ಮತ್ತು ಇರಾನ್‌ ಪರಸ್ಪರ ಮೇಲೆ ಕ್ಷಿಪಣಿ, ಡ್ರೋನ್‌ ದಾಳಿಗಳನ್ನು ನಡೆಸುತ್ತಿರುವುದರಿಂದ ಇರಾನ್‌ ವಾಯುಪ್ರದೇಶವು ಹೆಚ್ಚಿನ ಅಂತರರಾಷ್ಟ್ರೀಯ ವಿಮಾನಗಳಿಗೆ ಈ ವಾಯುನೆಲೆಯನ್ನು ಮುಚ್ಚಿವೆ. ಭಾರತವು ತನ್ನ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಇರಾನ್ ವಿಶೇಷ ಕಾರಿಡಾರ್ ನೀಡಿದೆ.

ಇಸ್ರೇಲ್ ಜೊತೆಗಿನ ಇರಾನ್‌ ಬಿಕ್ಕಟ್ಟು ನಿಲ್ಲುವ ಯಾವುದೇ ಲಕ್ಷಣ ಕಂಡುಬರುತ್ತಿಲ್ಲ. ಇರಾನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ‘ಆಪರೇಷನ್ ಸಿಂಧು’ ಕಾರ್ಯಾಚರಣೆ ಘೋಷಿಸಿದೆ. ದೆಹಲಿಯಲ್ಲಿರುವ ಇರಾನ್ ವಿದೇಶಾಂಗ ಸಚಿವಾಲಯವು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

 

Related Posts

Leave a Reply

Your email address will not be published. Required fields are marked *