Menu

ವಿಧಾನ ಪರಿಷತ್ತಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಅನುಮೋದನೆ

ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರ ರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2025ಕ್ಕೆ (2ನೇ ತಿದ್ದುಪಡಿ) ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್  ವಿಧಾನ ಪರಿಷತ್ತಿನಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ. ಆದರೆ ಮುಖ್ಯ ಕಾರ್ಯದರ್ಶಿಗಳನ್ನು ಈ ಸಮಿತಿಯಲ್ಲಿ ಸೇರಿಸಿರಲಿಲ್ಲ. ನಗರಾಭಿವೃದ್ಧಿ ಸಚಿವರ ಜೊತೆಗೆ ನಗರಾಭಿವೃದ್ಧಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳನ್ನು

“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ

ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ

ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್‌ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ

ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,

“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್‌

“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ,  ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ನಡೆಯುತತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. 2026ರ

ಸಚಿವೆ ಹೆಬ್ಬಾಳ್ಕರ್‌ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್‌ ದುರಂತಕ್ಕೆ ಯುವಕ ಬಲಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ  ಪ್ರಾಣ  ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ

ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್‌ ಲಾಡ್‌

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌  ಭರವಸೆ ನೀಡಿದರು.  ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ