ಜಿಲ್ಲಾ ಸುದ್ದಿ
ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಒಬ್ಬನ ಸಾವು
ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್ನಲ್ಲಿ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ ಒಂಬತ್ತನೇ ತರಗತಿ ವಿದ್ಯಾರ್ಥಿಯು ರಾಡ್ನಿಂದ ಹಲ್ಲೆ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಡ್ನಿಂದ ಹೊಡೆದಿದ್ದಾಗಿ ಶಾಲಾ ಆಡಳಿತ ಮಂಡಳಿ ಹೇಳುತ್ತಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ವಿದ್ಯಾರ್ಥಿ ಡ್ರಗ್ ಅಡಿಕ್ಟ್ ಆಗಿರುವ ಸಂಶಯವಿದ್ದು,
ಅರಸೀಕೆರೆಯಲ್ಲಿ ವಿಷಯುಕ್ತ ಮೇವು ತಿಂದು ಕುರಿಗಳ ಸಾವು
ಅರಸೀಕೆರೆ ತಾಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ. ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಕುರಿಗಳು ಹೊಲಗಳ ತುಂಬೆಲ್ಲಾ
ಬ್ರಿಮ್ಸ್ ಫೊರೆನ್ಸಿಕ್ ಸೈನ್ಸ್ ಮುಖ್ಯಸ್ಥ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಬೀದರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಫೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುನಿಲ್ ತಾಪ್ಸೆ (58) ವಸತಿಗೃಹದ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ಕಾರಣದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಅವರು ಬರೆದಿದ್ದಾರೆ ಎನ್ನಲಾದ
ಹಾವೇರಿಯಲ್ಲಿ ಮಟ್ಕಾ ದಂಧೆ: ಪಿಎಸ್ಐ ಅಮಾನತು
ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಲಾಗಿದೆ. ಉಪಸಭಾಪತಿ ರುದ್ರಪ್ಪ ಲಮಾಣಿ ಸ್ಥಳೀಯ ಮಹಿಳೆಯರ ದೂರು ಆಲಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು
ಕಡಿಮೆ ಬೆಲೆಗೆ ಚಿನ್ನದ ಆಮಿಷ: ಉದ್ಯಮಿಯಿಂದ 20 ಲಕ್ಷ ರೂ. ದೋಚಿ ಪರಾರಿ
ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ಆಮಿಷವೊಡ್ಡಿ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನು ಕರೆಸಿಕೊಂಡ ಗುಂಪೊಂದು 20 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ನ ಉದ್ಯಮಿ ವಿಶ್ವಪ್ರಸಾದ್ ರೆಡ್ಡಿಯು ಕುಮಾರ್
ಕಾರಿನಲ್ಲಿ ಸಾಗಿಸುತ್ತಿದ್ದ ಹಣ ದೋಚಿದ ಅಪರಿಚಿತರು
ಬಾಗಲಕೋಟೆಯ ಮುಧೋಳ ಸಮೀಪದ ಮಂಟೂರು ಬೈಪಾಸ್ ಬಳಿ ಭಾರೀ ಪ್ರಮಾಣದ ಹಣ ಸಾಗಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆದು ಅರ್ಧದಷ್ಟು ಹಣವನ್ನು ಅಪರಿಚಿತರು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಮಹೀಂದ್ರಾ ಎಸ್ಯುವಿ 700 (MH 43 CC 9820)
ಕಾಲ್, ಮೆಸೇಜ್ಗೆ ಸ್ಪಂದಿಸದ ಪ್ರೇಯಸಿ: ಮಂಗಳೂರಿನ ಯುವಕ ಒಮನ್ನಲ್ಲಿ ಆತ್ಮಹತ್ಯೆ
ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸುತ್ತಿಲ್ಲವೆಂದು ನೊಂದು ಮಂಗಳೂರಿನ ಸೋಮೇಶ್ವರದ ಯುವಕನೊಬ್ಬ ಒಮನ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ಪೂಜಾರಿ (32) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಒಮನ್ನ ಲಿಫ್ಟ್ ಕಂಪನಿಯಲ್ಲಿ ಪುನೀತ್ ಕೆಲಸ
ಹಾಸನದಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕ ಕುಸಿದು ಸಾವು
ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಮುಖ್ಯಶಿಕ್ಷಕರು ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ
ಪ್ರಕರಣದಲ್ಲಿ ಬಿ ರಿಪೋರ್ಟ್ಗಾಗಿ ಲಂಚ: ಪೊಲೀಸರಿಬ್ಬರು ಲೋಕಾಯುಕ್ತ ಬಲೆಗೆ
ಜಮೀನು ವಿವಾದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಬಂಧಿತ ಆರೋಪಿಗಳು. ಮೊಟ್ಲೂರು ಗ್ರಾಮದ ರಘು ಎಂಬವರ ಜಮೀನು ವಿವಾದಕ್ಕೆ ಸಂಬಂಧಿಸಿದ
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಪೋಸ್ಟ್: ಕಿಡಿಗೇಡಿಗಾಗಿ ಪೊಲೀಸ್ ಶೋಧ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ‘ಉಳ್ಳಾಲದ ಮಸೀದಿ ಬಳಿ ಬಾಂಬ್




