ಜಿಲ್ಲಾ ಸುದ್ದಿ
ಹಾವೇರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ವೇಳೆ ಮಗುವಿನ ತಲೆಗೆ ಬ್ಲೇಡ್ ತಾಗಿ ಗಾಯ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಗೆ ಸಿಸೇರಿಯನ್ ಮಾಡುವಾಗ ಮಗುವಿನ ತಲೆಗೆ ಬ್ಲೇಡ್ ತಾಗಿ ರಕ್ತಸ್ರಾವವಾಗಿದೆ. ರಾಣೇಬೆನ್ನೂರಿನ ಮಹಮ್ಮದ್ ಮುಜಾಹೀದ್ ಪತ್ನಿ ಬೀಬಿಅಪ್ಸ್ ಮೊದಲ ಹೆರಿಗೆಗಾಗಿ ಹಾವೇರಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು ಸಿಸೇರಿಯನ್ ಮಾಡುವುದು ಅನಿವಾರ್ಯ ಎಂದು ತಿಳಿಸಿದ್ದು, ಕುಟುಂಬದವರು ಸಮ್ಮತಿಸಿದ್ದರು. ಆಪರೇಷನ್ ಥಿಯೇಟರ್ಗೆ ಕರೆದೊಯ್ದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುವಾಗ ನಿರ್ಲಕ್ಷ್ಯ ತೋರಿದ್ದಾರೆ, ಸಿಸೇರಿಯನ್ ಮಾಡುವಾಗ ಬಳಸುವ ಸರ್ಜಿಕಲ್ ಬ್ಲೇಡ್
ದೆವ್ವದ ಹೆಸರಲ್ಲಿ ಹೊಡೆದು ಮಗನ ಎದುರೇ ಕಲಬುರಗಿ ಮಹಿಳೆಯ ಹತ್ಯೆಗೈದ ಪತಿ ಮನೆಯವರು
ದೆವ್ವ ಹಿಡಿದಿದೆ ಎಂದು ಹೇಳಿಕೊಂಡು ಕಲಬುರಗಿಯ ಮಹಿಳೆಗೆ ಆಕೆಯ ಗಂಡನ ಮನೆಯವರು ಮಗನ ಎದುರಲ್ಲೇ ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ಆಳಂದ
ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್ ಲಾಡ್
ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ
ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಮಂಡ್ಯ ಬಳಿ ಕಲ್ಲು ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ಬಿದ್ದು ಚಾಲಕ ಸಾವು
ಕಲ್ಲು ಗಣಿಗಾರಿಕೆಯ ಕ್ವಾರಿಯಲ್ಲಿ ಪ್ರಪಾತಕ್ಕೆ ಟಿಪ್ಪರ್ ಬಿದ್ದು, ಚಾಲಕ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಜಟಕ ಗೇಟ್ ಬಳಿ ರವಿ ಹಾಗೂ ಕಾಂತ ಎಂಬುವವರು ಸೇರಿ ನಡೆಸುತ್ತಿದ್ದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಣಿಗಾರಿಕೆಯಿಂದ
ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ
ಚಿಕ್ಕಬಳ್ಳಾಪುರ: ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ
ಅಂಜನಾದ್ರಿ ದೇಗುಲದಲ್ಲಿ ಅರ್ಚಕರ ಮಧ್ಯೆ ಜಗಳ
ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಂಜನಾದ್ರಿ
ಹಿರಿಯೂರು ಬಸ್ ದುರಂತ: ಏಪ್ರಿಲ್ನಲ್ಲಿ ಮದುವೆಯಾಗಬೇಕಿದ್ದ ಹಾಸನದ ನವ್ಯಾಳ ಸುಳಿವಿಲ್ಲ, ಆಸ್ಪತ್ರೆಗಳಿಗೆ ತಂದೆ ಅಲೆದಾಟ
ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ನಡೆದು ಹತ್ತಕ್ಕೂ ಹೆಚ್ಚು ಮಂದಿ ಸಜೀವದಹನಗೊಂಡು ಹಲವರು ಗಾಯಗೊಂಡಿರುವ ಘಟನೆಯಲ್ಲಿ ಹಾಸನದ ಇಬ್ಬರು ಯುವತಿಯರ ಸುಳಿವೇ ಸಿಕ್ಕಿಲ್ಲ. ಅವರಲ್ಲಿ ಒಬ್ಬಾಕೆ ನವ್ಯಾಗೆ ಏಪ್ರಿಲ್ನಲ್ಲಿ ಮದುವೆ ನಿಗದಿಯಾಗಿದೆ. ಮಗಳ ಬಗ್ಗೆ ಏನಾದರೂ ಮಾಹಿತಿ ಸಿಗುವುದೇ ಎಂದು ತಂದೆ
ರಾಜ್ಯದ ಬ್ಯಾಂಕ್ಗಳಲ್ಲಿ ಕ್ಲೇಮ್ ಆಗದೆ ಉಳಿದಿರುವ ಹಣ 3,400 ಕೋಟಿ ರೂ.
ಕರ್ನಾಟಕದ ಬ್ಯಾಂಕ್ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು
ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗು ಮಾರಿದ ಹಿರಿಯೂರಿನ ತಾಯಿ
ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದೆ ಎಂದು ತನ್ನ ಎರಡು ವರ್ಷದ ಮಗುವನ್ನು ಕೊಪ್ಪಳ ಮೂಲದವರಿಗೆ ಐವತ್ತು ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಕೆಲವು ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ಚಿತ್ರದುರ್ಗ




