ಜಿಲ್ಲಾ ಸುದ್ದಿ
ಮುರ್ಡೇಶ್ವರದಲ್ಲಿ ಲಿಫ್ಟ್ ಕುಸಿದು ಕಟ್ಟಡ ಕಾರ್ಮಿಕರಿಬ್ಬರ ಸಾವು
ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಪ್ರಭಾಕರ್ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್ ಕುಸಿದು ಈ ದುರಂತ ಸಂಭವಿಸಿದೆ. ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದ್ದು, ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರ ಬಿದ್ದ
ಸರಗೂರಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್ ಸ್ವಾಮಿ (58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ವ್ಯಕ್ತಿ ಎಂಟು ತಿಂಗಳ ಹಿಂದೆ ಆನೆ
ಭುಜನೋವೆಂದು ಕ್ಲಿನಿಕ್ನಲ್ಲಿ ಇಂಜೆಕ್ಷನ್: ಕೊಡಗಿನಲ್ಲಿ ಯುವಕ ಸಾವು
ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವು ಎಂದು ಖಾಸಗಿ ಕ್ಲಿನಿಕ್ಗೆ ಹೋಗಿ ಇಂಜೆಕ್ಷನ್ ಪಡೆದುಕೊಂಡ ಯುವಕ ಮೃತಪಟ್ಟಿದ್ದಾನೆ. ವಿನೋದ್ (34) ಮೃತಪಟ್ಟ ಯುವಕ. ವಿನೋದ್ ಭುಜ ನೋವು ಬಾಧಿಸುತ್ತಿದೆಯೆಂದು ಸಂಜೆ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್ಗೆ ಹೋಗಿದ್ದರು. ಈ ವೇಳೆ ಅಲ್ಲಿ ವೈದ್ಯರು ಅವರಿಗೆ
ಮುಳಬಾಗಿಲು: ಪತ್ನಿ ಕಾಣೆಯಾಗಿದ್ದಕ್ಕೆ ಮಗುವನ್ನು ಕೊಂದು ಪತಿ ಆತ್ಮಹತ್ಯೆ
ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಪತ್ನಿ ಕಾಣೆಯಾಗಿದ್ದಕ್ಕೆ ಮನನೊಂದ ಪತಿ ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಡಿಯನೂರು ಗ್ರಾಮದ ಲೋಕೇಶ್ (37) ಮಗಳು ನಿಹಾರಿಕಾ(5)ಳನ್ನು ಉಸಿರು ಗಟ್ಟಿಸಿ ಕೊಂದು ದೇಹವನ್ನು ಕಾರಿನಲ್ಲಿಟ್ಟು, ಅದೇ ಸ್ಥಳದಲ್ಲಿದ್ದ ತಾನು ಮರಕ್ಕೆ
ಶಿವಮೊಗ್ಗ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು
ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ನಿಷಾ (21) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿ ನಿಲಯದ ಟೆರೆಸ್ ಮೇಲೆ ವನಿಷಾ ಶವ ನೇಣು
ರೈತ ಮಂಜೇಗೌಡ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ: ಆರ್.ಅಶೋಕ
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ ಎಷ್ಟು ರೈತರು ಸಾಯಬೇಕೆಂದು ಸರ್ಕಾರ ಬಯಸುತ್ತಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ
ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು: ಆರ್ ಅಶೋಕ ಆಗ್ರಹ
ಚಾಮರಾಜನಗರದಲ್ಲಿ ಕೆರೆ ತುಂಬಿಸಲು ಕಾಂಗ್ರೆಸ್ ಸರ್ಕಾರ ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಭೂ ಪರಿಹಾರಕ್ಕೆ ಕಚೇರಿಗಳಿಗೆ ಅಲೆದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದು, ಲಂಚದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ಅವರು ಮನವಿ
ಚಿಕ್ಕಬಳ್ಳಾಪುರ ಅಕ್ರಮ ಸಂಬಂಧ: 38ರ ಮಹಿಳೆಯ ಕಾಟಕ್ಕೆ ಬೇಸತ್ತು 19ರ ಯುವಕ ಆತ್ಮಹತ್ಯೆ
38 ವರ್ಷದ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಕಾಡಿಸುತ್ತಿರುವುದಕ್ಕೆ ಬೇಸತ್ತ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಮಹಿಳೆಯ ಕಾಟ ತಾಳಲಾರದೆ ಆತ
ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಏಳನೇ ದಿನಕ್ಕೆ
ಪ್ರತಿ ಟನ್ ಗೆ 3500 ರೂ. ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಗುರ್ಲಾಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ




