ಜಿಲ್ಲಾ ಸುದ್ದಿ
ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಅರೆಸ್ಟ್ ಮಾಡಿ: ಸಚಿವ ಪರಮೇಶ್ವರ್ ಆದೇಶ
ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಚಣವೇ ಬಂಧಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಆದೇಶ ನೀಡಿದ್ದಾರೆ. ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಹಿನ್ನೆಲೆ ಅವರನ್ನು ಬಂಧಿಸುವಂತೆ ಪರಮೇಶ್ವರ್ ಮಂಗಳೂರು ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ಮಾಜಿ ಮುಖ್ಯಮಂತ್ರಿಯೊಬ್ಬರು 28 ಕೊಲೆಗಳನ್ನು ಮಾಡಿ
ಕೆಆರ್ಎಸ್ನಿಂದ ನದಿಗೆ ನೀರು: ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಕೆಆರ್ಎಸ್ ಡ್ಯಾಂನ ಒಳಹರಿವು ಪ್ರಮಾಣ ತೀವ್ರ ಏರಿಕೆಯಾಗಿದೆ. ಹೀಗಾಗಿ ಜಲಾಶಯದಿಂದ ನದಿಗೆ ೮೦ ಸಾವಿರ ಕ್ಯೂಸೆಕ್ನಿಂದ ೧.೨೦ ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗುವುದು. ಇದರಿಂದ ನದಿಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜನ
ಕೆಆರ್ಎಸ್ನಿಂದ 31,550 ಕ್ಯೂಸೆಕ್ ನೀರು ನದಿಗೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಕೆಆರ್ಎಸ್ ಡ್ಯಾಂನ ಒಳಹರಿವು ಏರಿಕೆಯಾಗಿದೆ. ಜಲಾಶಯಕ್ಕೆ 33,052 ಕ್ಯೂಸೆಕ್ ಒಳಹರಿವು ಇದ್ದು, 31,550 ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜನರು ಎಚ್ಚರಿಕೆ ವಹಿಸಬೇಕಾಗಿದೆ. 124.80
ಮೈಸೂರಿನಲ್ಲಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಕೊಲೆ
ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಕುಡಿಯಲು ಹಣ ನೀಡುತ್ತಿಲ್ಲವೆಂದು ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಗಾಯತ್ರಿ ಕೊಲೆಯಾದ ಮಹಿಳೆ, ಪಾಪಣ್ಣ ಕೊಲೆಗೈದ ಪತಿ. ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿ ಕುಡಿತದ ಚಟಕ್ಕೆ ಒಳಗಾಗಿದ್ದಾನೆ. ಹಣಕ್ಕಾಗಿ ಹೆಂಡತಿ, ಮಕ್ಕಳನ್ನು ಪೀಡಿಸುತ್ತಿದ್ದ. ಜಮೀನು
Suicide death- ಬೇರೆ ಯುವತಿ ಜೊತೆ ಪತಿಗೆ ಸಂಬಂಧ: ಶಿರಾದಲ್ಲಿ ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ
ತುಮಕೂರಿನ ಶಿರಾದ ಜ್ಯೋತಿನಗರದಲ್ಲಿ ಮದುವೆಯಾದ ಬಳಿಕವೂ ಬೇರೆ ಯುವತಿಯೊಂದಿಗೆ ಗಂಡ ಸಲುಗೆಯಿಂದ ಇರುವುದಕ್ಕೆ ಬೇಸತ್ತ ಮಹಿಳೆ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೃಥ್ವಿರಾಣಿ (20) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನಾಲ್ಕು ತಿಂಗಳ ಹಿಂದೆ ಶಿರಾ ತಾಲೂಕಿನ ಬುಕಾಪಟ್ಟದ ಪೃಥ್ವಿರಾಣಿ ಕಿಲಾರ್ಧಹಳ್ಳಿಯ
ಹುಬ್ಬಳ್ಳಿಯಲ್ಲಿ ಮದುವೆಯಾಗಿ ನಾಲ್ಕು ತಿಂಗಳಿಗೆ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಹುಬ್ಬಳ್ಳಿ ನಗರದ ನಂದಗೋಕುಲ ಬಡಾವಣೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಜಯಶ್ರೀ ಬಡಿಗೇರ್ (31) ಎಂದು ಗುರುತಿಸಲಾಗಿದೆ. ಜಯಶ್ರೀ ಬಿಎ,ಬಿಇಡಿ ಪದವೀಧರೆಯಾಗಿದ್ದು, ಲೈಬ್ರರಿ ಸೈನ್ಸ್ ಕೋರ್ಸ್ ಮಾಡುತ್ತಿದ್ದರು. ಮದುವೆಯಾದ ನಾಲ್ಕೇ ತಿಂಗಳಿಗೆ ಮೃತಪಟ್ಟಿದ್ದು, ಇದು ಆತ್ಮಹತ್ಯೆಯಲ್ಲ, ಕೊಲೆ ಮಾಡಿ
ಆರ್ಥಿಕ ನಾಯಕತ್ವ ದೇಶವನ್ನು ಮುನ್ನಡೆಸಿದರೆ ಪ್ರಜೆಗಳು ಗ್ರಾಹಕರಾಗುತ್ತಾರೆ
ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಮಂಡ್ಯ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ
Accident Deaths-ಸಿರಗುಪ್ಪದಲ್ಲಿ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಮಂತ್ರಾಲಯದಿಂದ ಬರುತ್ತಿದ್ದ ಇಬ್ಬರ ಸಾವು
ಬಳ್ಳಾರಿ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಶ್ವೇತಾ(38), ಕನಕಪುರದ ಬಾಲ ನಾಯಕ(42) ಮೃತರು. ಘಟನೆಯಲ್ಲಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತರಿಬ್ಬರು ಮಂತ್ರಾಲಯ
ಧಾರಾಕಾರ ಮಳೆ: ಇಂದು ತುಂಗಭದ್ರಾ ಡ್ಯಾಂನಿಂದ 80 ಸಾವಿರ ಕ್ಯುಸೆಕ್ ನೀರು ನದಿಗೆ
ತುಂಗಭದ್ರಾ ಆಡಳಿತ ಮಂಡಳಿ ನದಿ ಪಾತ್ರದ ಎಚ್ಚರಿಕೆ ನೀಡದೆ ನದಿಗೆ ನೀರು ಬಿಟ್ಟಿರುವುದರಿಂದ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ತುಂಗಭದ್ರಾ ಜಲಾಶಯದಿಂದ ಏಕಾಏಕಿ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯದ 7 ಕ್ರಸ್ಟ್ ಗೇಟ್ ಗಳು ಸಮಸ್ಯೆಯಿದ್ದು, ಬೆಂಡ್
ಚಿಕ್ಕನಾಯಕನಹಳ್ಳಿಯಲ್ಲಿ ಕಂಬದಿಂದ ಬಿದ್ದು ಲೈನ್ಮ್ಯಾನ್ ಸಾವು
ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಮನಹಳ್ಳಿ ವಿದ್ಯುತ್ ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ಸವದತ್ತಿ ಮೂಲದ ಮುತ್ತು (25) ವಿದ್ಯುತ್ ಕಂಬದಿಂದ ಬಿದ್ದು ಮೃತಪಟ್ಟಿದ್ದಾರೆ. ಕತ್ರಿಕೆಹಾಳ್ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದಾಗ ಕ್ಲಾಂಪ್ ತುಂಡಾಗಿ ಆಯತಪ್ಪಿ