ಜಿಲ್ಲಾ ಸುದ್ದಿ
ಶಿವಮೊಗ್ಗದಲ್ಲಿ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ಹಲ್ಲೆ
ಶಿವಮೊಗ್ಗದ ಮಾರ್ನಮಿ ಬೈಲ್ನಲ್ಲಿ ಸ್ಥಳೀಯ ನಿವಾಸಿ ಹರೀಶ್ ಎಂಬವರ ಮೇಲೆ ನೀ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ರಾತ್ರಿ ಮನೆ ಪಕ್ಕದಲ್ಲೇ ವಾಕ್ ಮಾಡುತ್ತಿದ್ದಾಗ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಂದೂ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಹರೀಶ್ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ಹರೀಶ್ ಮೇಲೆ ಹಲ್ಲೆ ನಡೆಸುತ್ತಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಡ ರಾತ್ರಿ ಊಟ
ಯಲಬುರ್ಗಾದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರ ಸಮೀಪ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂತ್ರಸ್ತೆ ನಾಲ್ವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಗಳಲೆ ರೋಗ: ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೇರಿದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವುದಾಗಿ ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ವರದಿ ಬಂದ ಬಳಿಕವೇ ತಿಳಿಯಲಿದೆ. ಮೃತ ಕೃಷ್ಣ ಮೃಗಗಳ ಕಿಡ್ನಿ,
ಸಂಡೂರು ಇನ್ಸ್ಪೆಕ್ಟರ್ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್ ಸೂಚನೆ
ಸಂಡೂರು ತಾಲೂಕು ಇನ್ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇನ್ಸ್ಪೆಕ್ಟರ್ ಮಹೇಶ್ ಗೌಡ ಕ್ಷುಲ್ಲಕ ಕಾರಣಕ್ಕೆ ವಿವೇಕಾನಂದ್ ಎಂಬವರಿಗೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ವಿವೇಕಾನಂದ್ ಹೈಕೋರ್ಟ್ನಲ್ಲಿ ದೂರು ದಾಖಲಿಸಿದ್ದರು. ಆಗಸ್ಟ್ 24
ಕಾರು ಡಿಕ್ಕಿಯಾಗಿ ಉರಿದ ಬೈಕ್: ಕಲಬುರಗಿಯಲ್ಲಿ ಸವಾರರಿಬ್ಬರು ಸಜೀವ ದಹನ
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ಬೈಕ್ಗೆ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ನಲ್ಲಿ ಬೆಂಕಿಹೊತ್ತಿಕೊಂಡು ಅದರಲ್ಲಿದ್ದ ಸವಾರರಿಬ್ಬರು ಸಜೀವ ದಹನಗೊಂಡಿದ್ದಾರೆ. ಸಿರಗಾಪುರ ಗ್ರಾಮದ ಆಕಾಶ ಧನವಂತ (19) ಮತ್ತು ಭೂಸಣಗಿ ಗ್ರಾಮದ ಸುಶೀಲ್ (28) ಬೆಂಕಿಗೆ ಬಲಿಯಾದವರು. ಮಹಾಗಾಂವ್
ಮಡಿಕೇರಿ: ಪತ್ನಿಗೆ ವೀಡಿಯೊ ಕಾಲ್ ಮಾಡಿ ಪತಿ ಲೈವ್ ಸುಸೈಡ್
ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಎಂಬಾತ ಪತ್ನಿಗೆ ವೀಡಿಯೊ ಕಾಲ್ ಮಾಡಿ ಲೈವ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ತವರಿನಲ್ಲಿದ್ದ ಪತ್ನಿ
ಕಾಡಸಿದ್ದೇಶ್ವರ ಶ್ರೀಗೆ ನಿರ್ಬಂಧ ಖಂಡಿಸಿ ಪ್ರತಿಭಟನೆ, ಶಾಸಕ ಸಿಸಿ ಪಾಟೀಲ್ ಭಾಗಿ
ಕನ್ಹೇರಿ ಮಠದ ಅದೃಶ್ಯ ಶ್ರೀ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟಿ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಗದಗದಲ್ಲಿ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪಾದಯಾತ್ರೆ ಮುಳಗುಂದ ನಾಕಾ
ಎಳನೀರು ಮಾರುವ ಮಹಿಳೆಯ ಹನಿಟ್ರಾಪ್ಗೆ ಸಿಲುಕಿದ ಇಂಡಿ ಬ್ಯಾಂಕ್ ಮ್ಯಾನೇಜರ್
ವಿಜಯಪುರದ ಡಿಯ ಡಿವೈಎಸ್ಪಿ ಕಚೇರಿ ಪಕ್ಕ ಹಲವು ವರ್ಷಗಳಿಂದ ಎಳನೀರು ಮಾರಿಕೊಂಡಿದ್ದ ಮಹಿಳೆ ಬ್ಯಾಂಕ್ ಮ್ಯಾನೇಜರ್ನನ್ನು ಹನಿಟ್ರಾಪ್ ಮಾಡಿ ಬೆದರಿಸಿ ಹಣ ಸುಲಿಗೆಗೆ ಯತ್ನಿಸಿ ಅರೆಸ್ಟ್ ಆಗಿದ್ದಾಳೆ. ಪ್ರಕರಣ ಸಂಬಂಧ ಆರೋಪಿ ಮಹಿಳೆ, ಆಕೆಯ ಮಗ ಹಾಗೂ ಯ್ಯೂಟೂಬ್ ಪತ್ರಕರ್ತನನ್ನೂ ಬಂಧಿಸಲಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಉಕ ಸಮಸ್ಯೆ ಬಗ್ಗೆ ಚರ್ಚೆಯಾದ್ರೆ ಸಾಲದು, ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್ ಅಶೋಕ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ
ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದ ಬಿಇ ವಿದ್ಯಾರ್ಥಿ ಸಾವು
ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಬೆಳಗಾವಿ ಮೂಲದ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ಓದುತ್ತಿದ್ದ ವರುಣ್ ದೇಸಾಯಿ




