Thursday, January 08, 2026
Menu

ಬೈಲಹೊಂಗಲ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಘಟನೆಗೆ ಸ್ಪಂದಿಸದ ಸರ್ಕಾರ ಹಾಗೂ ಕಾರ್ಖಾನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ಅರವಳ್ಳಿ

ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್‌. ಅಶೋಕ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ  ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು  ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಪೊಲೀಸ್

ಗುಬ್ಬಿಯಲ್ಲಿ ಮಹಿಳೆ ಆತ್ಮಹತ್ಯೆ: ಸೊಸೆಯ ಕಾಟವೆಂಬ ಆರೋಪ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಸೊಸೆ ಕಾಟಕ್ಕೆ ಬೇಸತ್ತು ಅತ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆಯೊಂದು ನಡೆದಿದೆ. ಅತ್ತೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭ್ರಮರಾಂಭಿಕೆ (60) ಆತ್ಮಹತ್ಯೆ ಮಾಡಿಕೊಂಡವರು. ಅನುಮಾನಾಸ್ಪದ ಸ್ಥಿತಿಯಲ್ಲಿ

ಮದುವೆ ಮಾಡಲಿಲ್ಲವೆಂದು ಹೊಸದುರ್ಗದಲ್ಲಿ ತಂದೆಯನ್ನೇ ಕೊಂದ ಮಗ

ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆ. ಪುತ್ರ ಲಿಂಗರಾಜ್ ತಂದೆಯನ್ನೇ ಕೊಲೆಗೈದ ಆರೋಪಿ. ಮನೆಯಲ್ಲಿ ಲಿಂಗರಾಜ್‌ ಮದುವೆ ವಿಚಾರಕ್ಕೆ ಜಗಳ

ಬಳ್ಳಾರಿ ಬ್ಯಾನರ್ ಗಲಭೆ: ಬಂಧನ ಭಯಕ್ಕೆ ಬಳ್ಳಾರಿ ತೊರೆದ ಯುವಕರು

ಬಳ್ಳಾರಿಯಲ್ಲಿ ಕೆಲವು ದಿನಗಳ ಹಿಂದೆ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 26

ಬೇರೆ ಜಾತಿಯವನೊಂದಿಗೆ ಮಗಳ ಮದುವೆ: ಚಾಮರಾಜನಗರದಲ್ಲಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಬೇರೆ ಜಾತಿ ಯುವನೊಂದಿಗೆ ಮಗಳ ಮದುವೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು ಎಂಬವರ ಕುಟುಂಬನ್ನು ಬಹಿಷ್ಕರಿಸಲಾಗಿದೆ. ಈ ಬಹಿಷ್ಕಾರ ತೆರವಾಗಬೇಕಾದರೆ 5 ಲಕ್ಷ ರೂ. ತಪ್ಪು ಕಾಣಿಕೆ ಕೊಡಬೇಕು ಎಂದು ಹೇಳಲಾಗಿದೆ.

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಶಿವಮೊಗ್ಗ ಕಾನ್‌ಸ್ಟೆಬಲ್‌

ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್‌ ಹೆಡ್‌  ಕಾನ್‌ಸ್ಟೆಬಲ್‌  ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55)  ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ  ರಜೆ

ಶಿವಮೊಗ್ಗ ಹಾಸ್ಟೆಲ್ ಕೊಠಡಿಯಲ್ಲಿಯೇ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ (ಸಿಮ್ಸ್) ಹಾಸ್ಟೆಲ್ ಕೊಠಡಿಯಲ್ಲಿ ನಡೆದಿದೆ. ಮೆಡಿಕಲ್ ಕಾಲೇಜ್ ನಲ್ಲಿ ಎಂಡಿ ರೇಡಿಯಾಲಜಿ ಅಭ್ಯಾಸ ಮಾಡುತ್ತಿದ್ದ  ಮಧುಗಿರಿ ಮೂಲದ ಸಂದೀಪ್ ರಾಜ್ (28) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ .

ನೀರಿನ ತೊಟ್ಟಿಗೆ ಬಿದ್ದು ತಾಯಿ- ಇಬ್ಬರು ಮಕ್ಕಳ ಸಾವು

ತುಮಕೂರು; ಹಿರೇಹಳ್ಳಿ ಸಮೀಪದ ಸಿಂಗನಹಳ್ಳಿ ಕಾಲೊನಿಯಲ್ಲಿ ತಾಯಿ ಮತ್ತು  ಮಕ್ಕಳಿಬ್ಬರು ಮನೆಯಲ್ಲಿನ ನೀರಿನತೊಟ್ಟಿಗೆ(ಸಂಪ್) ಬಿದ್ದು ಸಾವನ್ನಪ್ಪಿದ್ದಾರೆ. ತಾಯಿ ವಿಜಯಲಕ್ಷ್ಮಿ (26) ಮತ್ತು ಐದು ವರ್ಷದ ಅವಳಿ ಮಕ್ಕಳಾದ  ಚೇತನ  ಮತ್ತು ಚೈತನ್ಯ  ಮೃತರಾದವರು. ಮಂಗಳವಾರ  ಸಂಜೆ 4.14ರ ಸುಮಾರಿನಲ್ಲಿ ಮಾಹಿತಿ ದೊರೆತ

ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣ: ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ

ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮಾರ್ಚ್ 23ಕ್ಕೆ ಮುಂದೂಡಿದೆ. ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ