Wednesday, December 03, 2025
Menu

ಸಂಕೀರ್ತನಾ ಯಾತ್ರೆಯಲ್ಲಿ ಹೈಡ್ರಾಮಾ: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಗೆ ನುಗ್ಗಲು ಮಾಲಾಧಿಕಾರಿಗಳ ಯತ್ನ!

ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ ವೇಳೆ ಮಾಲಾಧಾರಿಗಳು ಜಾಮೀಯ ಮಸೀದಿಗೆ ನುಗ್ಗಲು ಯತ್ನಿಸಿದ್ದರಿಂದ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು. ಹನುಮ ಧ್ವಜ  ಹಿಡಿದ ಸಾವಿರಾರು ಭಕ್ತರು ಗಂಜಾಂನ ಹಜರತ್ ಸೈಯದ್ ಜವಾರ್ ದರ್ಗಾದ ಮುಂದೆ ಹನುಮ ಮಾಲಾಧಾರಿಗಳ ಯಾತ್ರೆ ಸಾಗಿಬಂದು ಜಾಮೀಯಾ ಮಸೀದಿ ತಲುಪಿತ್ತು. ಕಳೆದ ವರ್ಷ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಜಾಮೀಯ ಮಸೀದಿ ಬಳಿ ಬ್ಯಾರಿಕೇಡ್

ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು

ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ

ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ

ಶಿಕಾರಿಪುರ ರಸ್ತೆಯಲ್ಲಿದ್ದ ನಾಡ ಬಾಂಬ್‌ ಕೆಎಸ್ಸಾರ್ಟಿಸಿ ಬಸ್‌ ಟೈರ್‌ಗೆ ಸಿಲುಕಿ ಸ್ಫೋಟ: ತಪ್ಪಿದ ದುರಂತ

ಶಿವಮೊಗ್ಗ ಶಿಕಾರಿಪುರದ ರಸ್ತೆಯಲ್ಲಿ ಬಿದ್ದಿದ್ದ ನಾಡಬಾಂಬ್ ಮೇಲೆ ಕೆಎಸ್ಆರ್‌ಟಿಸಿ ಬಸ್ ಸಂಚರಿಸಿದ್ದು, ಹಿಂಬದಿಯ ಟೈರ್‌ಗೆ ಸಿಲುಕಿ ಸ್ಫೋಟಗೊಂಡಿದೆ. ಅದೃಷ್ಟವಷಾತ್‌ ಯಾವುದೇ ಅಪಾಯ ಸಂಭವಿಸಿಲ್ಲ. ಶಿಕಾರಿಪುರ ತಾಲೂಕಿನ ಹಿರೇಕವಲತ್ತಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಬಸ್‌ ಮುಡುಬಾ ಸಿದ್ಧಾಪುರದಿಂದ ಶಿಕಾರಿಪುರಕ್ಕೆ ಸಂಚರಿಸುತ್ತಿತ್ತು. ನಾಡಬಾಂಬ್ ಸ್ಫೋಟದ

ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್​ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ

ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ

ಅಣ್ಣ ಚೆನ್ನಾಗಿ ಓದು ಎಂದಿದ್ದೇ ತಪ್ಪಾಯ್ತಾ?: ಗದಗದಲ್ಲಿ ಕರೆಗೆ ಹಾರಿದ ತಂಗಿ

ಗದಗದಲ್ಲಿ ಅಣ್ಣೊಬ್ಬ ತಂಗಿಗೆ ಚೆನ್ನಾಗಿ ಓದು ಎಂದು ಬುದ್ದಿ ಹೇಳಿದ್ದೇ ತಪ್ಪಾಗಿ ಹೋಯ್ತಾ ಎಂಬಂತೆ ತಂಗಿ ಕೆರೆಗೆ ಹಾರಿ ಆತ್ಮಹತ್ಯ ಮಾಡಿಕೊಂಡಿದ್ದಾಳೆ. ಗದಗದ ಭೀಷ್ಮ ಕೆರೆಗೆ ಹಾರಿ ಚಂದ್ರಿಕಾ ನಡುವಿನಮನಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಕೋಟೆಯ ಶಿರೂರಿನ ಚಂದ್ರಿಕಾ ನಡುವಿನಮನಿ ಗದಗ

ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್‌ ಲಾಡ್‌

ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ  ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ

ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್​ನೋಟ್​​ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ

ಸಿಂಧನೂರಿನಲ್ಲಿ ಮಗನ ಮದುವೆ ಸಂಭ್ರಮದಲ್ಲಿದ್ದಾಗಲೇ ತಂದೆಯ ಸಾವು

ಸಿಂಧನೂರು ನಗರದ ವಾರ್ಡ್ ನಂಬರ್ 14ರ ನಿವಾಸಿ, ವೀರಶೈವ ಸಮಾಜದ ಮುಖಂಡ ಶರಣಯ್ಯ ಸ್ವಾಮಿ ಶಾಸ್ತ್ರಿ ಮಠ ಕಂದಗಲ್ (47) ಮಗನ ಮದುವೆ ದಿನದಂದೇ ಹೃದಯಘಾತದಿಂದ ಭಾನುವಾರ (ಇಂದು) ಮೃತಪಟ್ಟಿದ್ದಾರೆ. ಶರಣಯ್ಯ ಸ್ವಾಮಿ ಕಳೆದ ತಿಂಗಳಿನಿಂದ ಮಗನ ಮದುವೆ ಸಂಭ್ರಮದಲ್ಲಿ ಇದ್ದು,