Menu

ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ಮತ್ತೆ ಐವರು ಅರೆಸ್ಟ್‌

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್‍ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್‌ ಪೊಲೀಸರು ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ. ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ ದೋಚಿದ್ದ ಪ್ರಕರಣದ ಬಂಧಿತರನ್ನು ತಮಿಳುನಾಡು ಮೂಲದ ಪಿ.ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಮತ್ತು ವೇಲು ಎಂದು ಗುರುತಿಸಲಾಗಿದೆ. ಇನ್ನೂ ಮೂರ್ನಾಲ್ಕು ಮಂದಿ ಪ್ರಕರಣದಲ್ಲಿ ಭಾಗಿಯಾಗಿದ್ದು ಶೀಘ್ರದಲ್ಲೇ

ದಾಂಡೇಲಿಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳ ಬಂಡಲ್‌ ಪತ್ತೆ

ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ನಂತೆ ಅಂದಾಜು ₹14 ಕೋಟಿ ಮೌಲ್ಯವೆಂದು ಲೆಕ್ಕಕ್ಕೆ ತೆಗೆದುಕೊಳ್ಳಬಹುದಾದ ನಕಲಿ ನೋಟುಗಳು ಸಿಕ್ಕಿವೆ. ಖಚಿತ ಮಾಹಿತಿ ಹಿನ್ನೆಲೆ ಯಲ್ಲಿ ನಗರ ಠಾಣೆಯ

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ

ಬೆಂಗಳೂರಿನಿಂದ  ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್‌ 12 ರಂದು ಬೆಂಗಳೂರಿನಿಂದ

ಮುಳಗುಂದದಲ್ಲಿ ತಂದೆಯಿಂದ ಅತ್ಯಾಚಾರ, ಬಾಲಕಿ ಗರ್ಭಿಣಿ: ಆರೋಪ

ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದಿನಾರು ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ರಮೇಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ

ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್‌ ಹೆಸರಿನಲ್ಲಿ ವಂಚನೆ: ಪೊಲೀಸ್‌ ಠಾಣೆ ಮೊರೆ ಹೋದ ಸಂತ್ರಸ್ತರು

ವಾಸವಿ ಸ್ವಗೃಹ ಹೋಮ್ ನೀಡ್ಸ್ ಆ್ಯಂಡ್​ ಕನ್ಸಲ್ಟನ್ಸ್​ ಹೆಸರಲ್ಲಿ ವಿಶ್ವನಾಥ್​ ಎಂಬಾತ ಜನರಿಗೆ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡಿರುವುದಾಗಿ ಬಳ್ಳಾರಿಯ  ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಹಿಂದೆ ವಿಶ್ವನಾಥ ಕಿರಾಣಿ ಅಂಗಡಿ ಆರಂಭಿಸಿ, ಐದು

ದ್ವಿತೀಯ ಪಿಯುಸಿ ಫಲಿತಾಂಶ: ಮೊದಲ, ಎರಡನೇ ಸ್ಥಾನ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ. ರಾಜ್ಯದಲ್ಲಿ

ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ  ಶಿಕ್ಷಕಿ ಸರಸ್ವತಿ  ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ

ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ ಅರೆಸ್ಟ್‌

ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ, ಕೆಜಿಎಫ್ ಕಾಂಗ್ರೆಸ್ ಮುಖಂಡ ಜಯಪಾಲ್​ ಎಂಬವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನ್ನೈನಿಂದ ಕೆಜಿಎಫ್​ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡವೊಂದು ಏಪ್ರಿಲ್

ಚನ್ನಗಿರಿಯಲ್ಲಿ ಕಳವು ಆರೋಪಿ ಬಾಲಕರ ಕಟ್ಟಿಹಾಕಿ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ

ಕಳ್ಳತನ ಮಾಡಿದ್ದಲ್ಲದೆ ಅಸಭ್ಯ ವರ್ತನೆ ತೋರಿದ್ದಾರೆಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿರುವುದು ಬಹಿರಂಗಗೊಂಡಿದೆ. ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ

ಕಳ್ಳನ ಚಿನ್ನ ಎಗರಿಸಿದ ಸಿಎಂ ಗೋಲ್ಡ್‌ ಮೆಡಲ್‌ ವಿಜೇತ ಪೊಲೀಸ್‌: ಎಸಿಪಿಗೆ ದೂರು

ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪೊಲೀಸ್‌ ಇನ್ಸ್‌ಪೆಕ್ಟರ್‌ ಬಾಲಕೃಷ್ಣ ನಾಯಕ್‌ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್‌ ಚಿನ್ನ ಎಗರಿಸಿದ ಆರೋಪ ಕೇಳಿ ಬಂದಿದೆ. ಕೋಟೆಕಾರ್‌ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ ಭೇದಿಸಿದ ಪೊಲೀಸರ ತಂಡದಲ್ಲಿದ್ದ ಬಾಲಕೃಷ್ಣ ಅವರಿಗೆ ಸಿಎಂ ಚಿನ್ನದ