ಜಿಲ್ಲಾ ಸುದ್ದಿ
ಶಿವಮೊಗ್ಗ ಹಾಸ್ಟೆಲ್ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಸಾವು
ಶಿವಮೊಗ್ಗದ ಹಾಸ್ಟೆಲ್ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್ನಲ್ಲಿ ವಾಸವಾಗಿದ್ದ. ಶುಕ್ರವಾರ (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು ಬಿದ್ದಿದ್ದ. ಆತನನ್ನು ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ
ಮಹಿಳೆ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಸಿಎಂ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಘಟನೆಯ ಕುರಿತು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ
ಹಣಕ್ಕಾಗಿ ಹನಿಟ್ರ್ಯಾಪ್, ದೌರ್ಜನ್ಯ ವೀಡಿಯೊ ವೈರಲ್: ವಿವಸ್ತ್ರ ಪ್ರಕರಣದ ಬಿಜೆಪಿ ಕಾರ್ಯಕರ್ತೆಯ ಮತ್ತೊಂದು ಮುಖ
ಇತ್ತೀಚೆಗೆ ಹುಬ್ಬಳ್ಳಿ ಪೊಲೀಸರು ಬಂಧಿಸುವಾಗ ವಿವಸ್ತ್ರಗೊಳಿಸಿರುವ ಆರೋಪ ಪ್ರಕರಣದಲ್ಲಿ ಸುದ್ದಿಯಾಗಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಎಂಬಾಕೆಗೆ ಸಂಬಂಧಿಸಿದ ಹಳೆಯ ವೀಡಿಯೊವೊಂದು ವೈರಲ್ ಆಗಿದೆ. ಆಕೆಯ ನಿಜವಾದ ಬಣ್ಣ ಬಯಲುಗೊಳಿಸುತ್ತಿದೆ. ಸುಜಾತಾ ಹಣಕ್ಕಾಗಿ ಹನಿಟ್ರ್ಯಾಪ್ ಮಾಡುವ ದಂಧೆ ಮಾಡುತ್ತಿದ್ದು, ಸಂತ್ರಸ್ತ ಪುರುಷರ
ಶಬರಿಮಲೆಯಿಂದ ವಾಪಸಾಗುತ್ತಿದ್ದ ಕೊಪ್ಪಳದ ಮಾಲಾಧಾರಿಗಳು ತುಮಕೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ
ತುಮಕೂರು ಕೋರಾ ಸಮೀಪ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕ್ರೂಸರ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು,
ಬೈಲಹೊಂಗಲ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮುರಗೋಡ ಪೊಲೀಸ್ ಠಾಣಾ
ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್. ಅಶೋಕ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಪೊಲೀಸ್
ಗುಬ್ಬಿಯಲ್ಲಿ ಮಹಿಳೆ ಆತ್ಮಹತ್ಯೆ: ಸೊಸೆಯ ಕಾಟವೆಂಬ ಆರೋಪ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಸೊಸೆ ಕಾಟಕ್ಕೆ ಬೇಸತ್ತು ಅತ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆಯೊಂದು ನಡೆದಿದೆ. ಅತ್ತೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಭ್ರಮರಾಂಭಿಕೆ (60) ಆತ್ಮಹತ್ಯೆ ಮಾಡಿಕೊಂಡವರು. ಅನುಮಾನಾಸ್ಪದ ಸ್ಥಿತಿಯಲ್ಲಿ
ಮದುವೆ ಮಾಡಲಿಲ್ಲವೆಂದು ಹೊಸದುರ್ಗದಲ್ಲಿ ತಂದೆಯನ್ನೇ ಕೊಂದ ಮಗ
ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆ. ಪುತ್ರ ಲಿಂಗರಾಜ್ ತಂದೆಯನ್ನೇ ಕೊಲೆಗೈದ ಆರೋಪಿ. ಮನೆಯಲ್ಲಿ ಲಿಂಗರಾಜ್ ಮದುವೆ ವಿಚಾರಕ್ಕೆ ಜಗಳ
ಬಳ್ಳಾರಿ ಬ್ಯಾನರ್ ಗಲಭೆ: ಬಂಧನ ಭಯಕ್ಕೆ ಬಳ್ಳಾರಿ ತೊರೆದ ಯುವಕರು
ಬಳ್ಳಾರಿಯಲ್ಲಿ ಕೆಲವು ದಿನಗಳ ಹಿಂದೆ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 26
ಬೇರೆ ಜಾತಿಯವನೊಂದಿಗೆ ಮಗಳ ಮದುವೆ: ಚಾಮರಾಜನಗರದಲ್ಲಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
ಬೇರೆ ಜಾತಿ ಯುವನೊಂದಿಗೆ ಮಗಳ ಮದುವೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು ಎಂಬವರ ಕುಟುಂಬನ್ನು ಬಹಿಷ್ಕರಿಸಲಾಗಿದೆ. ಈ ಬಹಿಷ್ಕಾರ ತೆರವಾಗಬೇಕಾದರೆ 5 ಲಕ್ಷ ರೂ. ತಪ್ಪು ಕಾಣಿಕೆ ಕೊಡಬೇಕು ಎಂದು ಹೇಳಲಾಗಿದೆ.




