Menu

ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್‌ ಲಾಡ್‌

ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ  ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಹೇಳಿದ್ದಾರೆ. ಬೀದರ್ ನ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ಮರಾಠಾ ಸಮಾಜದ ಬಂಧುಗಳು

ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್​ನೋಟ್​​ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ

ಸಿಂಧನೂರಿನಲ್ಲಿ ಮಗನ ಮದುವೆ ಸಂಭ್ರಮದಲ್ಲಿದ್ದಾಗಲೇ ತಂದೆಯ ಸಾವು

ಸಿಂಧನೂರು ನಗರದ ವಾರ್ಡ್ ನಂಬರ್ 14ರ ನಿವಾಸಿ, ವೀರಶೈವ ಸಮಾಜದ ಮುಖಂಡ ಶರಣಯ್ಯ ಸ್ವಾಮಿ ಶಾಸ್ತ್ರಿ ಮಠ ಕಂದಗಲ್ (47) ಮಗನ ಮದುವೆ ದಿನದಂದೇ ಹೃದಯಘಾತದಿಂದ ಭಾನುವಾರ (ಇಂದು) ಮೃತಪಟ್ಟಿದ್ದಾರೆ. ಶರಣಯ್ಯ ಸ್ವಾಮಿ ಕಳೆದ ತಿಂಗಳಿನಿಂದ ಮಗನ ಮದುವೆ ಸಂಭ್ರಮದಲ್ಲಿ ಇದ್ದು,

ಹುಣಸೂರಿನಲ್ಲಿ ಮೂರು ಹುಲಿ ಮರಿ ಸೆರೆ

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಗೌಡನಕಟ್ಟೆ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿ ಮೂರು ಮರಿಗಳನ್ನು ಹಿಡಿದಿದ್ದಾರೆ. ಗೌಡನಕಟ್ಟೆ ಗ್ರಾಮದ ಹೊರವಲಯದಲ್ಲಿ ಅಡಗಿದ್ದ ಮೂರು ಹುಲಿ ಮರಿಗಳಿಗೆ ಅರವಳಿಕೆ ನೀಡಿ

ನಾಯಕನಹಟ್ಟಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ: ಚಿಕಿತ್ಸೆಗೆ ಬಂದ ರೋಗಿ ಸಾವು

ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಚಿಕಿತ್ಸೆಗೆ ಬಂದ ರೋಗಿ ಮೃತಪಟ್ಟಿರುವ ಘಟನೆ ನಡೆದಿದೆ.  ಆಸ್ಪತ್ರೆ ವೈಧ್ಯಾಧಿಕಾರಿಗಳ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಾಜಪ್ಪ (50) ಮೃತಪಟ್ಟವರು. ನಾಯಕನಹಟ್ಟಿ ಪಟ್ಟಣದ ಅಂಬೇಡ್ಕರ್ ಕಾಲೊನಿ

ಮಂಡ್ಯದಲ್ಲಿ ರೌಡಿ ಶೀಟರ್ ಹತ್ಯೆ

ಮಂಡ್ಯದ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ರೌಡಿ ಈಟರ್‌ವೊಬ್ಬನ ಬರ್ಬರ ಹತ್ಯೆಯಾಗಿದೆ.  ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ತಡರಾತ್ರಿ ಜಕ್ಕನಹಳ್ಳಿ ಬಾರ್ ಬಳಿ ಯುವಕರ

ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್‌

ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ

ಕೋಲಾರದಲ್ಲಿ ಭೀಕರ ಅಪಘಾತ: ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿ ಸಾವು

ಬಂಗಾರಪೇಟೆ:  ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ

ಮೈಸೂರಿನಲ್ಲಿ ರಾತ್ರಿ ಹುಲಿ ಸೆರೆ: ಮರಿಗಳಿಗಾಗಿ ಶೋಧ

ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ

ಷೇರ್‌ ಮಾರ್ಕೆಟ್‌ ಹೆಸರಲ್ಲಿ ಶೃಂಗೇರಿಯ ವ್ಯಕ್ತಿಗೆ 3.27 ಕೋಟಿ ರೂ. ನಾಮ

ಶೃಂಗೇರಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೆಸರಲ್ಲಿ ಆನ್​​ಲೈನ್​ ವಂಚಕರು 3 ಕೋಟಿ 27 ಲಕ್ಷ ರೂ.ಲೂಟಿ ಹೊಡೆದಿರುವುದು ಬಹಿರಂಗಗೊಂಡಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದು ಶೃಂಗೇರಿಯ ನಟರಾಜನ್ ಎಂಬರ ಹಣ ದೋಚಿರುವ ವಂಚಕರ ವಿರುದ್ಧ ಚಿಕ್ಕಮಗಳೂರು