Thursday, November 20, 2025
Menu

ಕೋರ್ಟ್ ಕಲಾಪದ ವೇಳೆ ಮಹಿಳೆ ಕೊಲೆಗೆ ಯತ್ನ!

ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೀನಾಕ್ಷಿ ರಾಮಚಂದ್ರ ಶಿಂಧೆ (50) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋತನಟ್ಟಿ ಗ್ರಾಮದ ಬಾಬಾಸಾಹೇಬ್ ಚೌಹಾನ್ ಎಂಬಾತ ಹಲ್ಲೆ ಮಾಡಿದ್ದ ಆರೋಪಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಬಾಬಾಸಾಹೇಬ್ ಸೋದರತ್ತೆ ಮೀನಾಕ್ಷಿ ಕೋರ್ಟ್ ಮೆಟ್ಟಿಲೇರಿದ್ದಳು. ಇದೇ ವಿಚಾರವಾಗಿ

ಸಂಬಂಧಿಕನಿಂದ ಅತ್ಯಾಚಾರ: ಅಪ್ರಾಪ್ತ ವಯಸ್ಕ ಬಾಲಕಿ ಗರ್ಭಿಣಿ

ಯಾದಗಿರಿ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಸಂಬಂಧಿಯಾಗಿರುವ  ವ್ಯಕ್ತಿ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿರುವ ವಿಚಾರ ಬಹಿರಂಗಗೊಂಡಿದೆ. ಬಾಲಕಿಯನ್ನು ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ಯಾದಗಿರಿ ಜಿಲ್ಲಾ ಆಸ್ಪತ್ರೆಯೊಂದರಲ್ಲಿ

ಶಿವಮೊಗ್ಗ: ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಅನೈತಿಕ ಸಂಬಂಧದಲ್ಲಿದ್ದ ವಿವಾಹಿತ ಜೋಡಿ

ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಜೋಡಿಯೊಂದು ಜಗಳವಾಡಿ ಬೆಂಕಿ ಹಚ್ಚಿಕೊಂಡು ಮೈಕೈ ಸುಟ್ಟುಕೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ನಗರದ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಗೀತಾ ಮತ್ತು ಗಿರೀಶ್ ಬೆಂಕಿಯಿಂದ ಮೈಕೈ ಸುಟ್ಟು ಆಸ್ಪತ್ರೆಗೆ ದಾಖಲಾದವರು. ದಾವಣಗೆರೆಯವರಾದ ವಿವಾಹಿತೆ ಗೀತಾ ಹಾಗೂ

ಬೆಳಗಾವಿ: ಚಳಿಗೆ ಇದ್ದಿಲು ಬೆಂಕಿ ಹಾಕಿ ಮಲಗಿದ್ದ ಮೂವರು ಯುವಕರ ಸಾವು

ಕೊರೆಯುವ ಚಳಿಯಿಂದ ತಪ್ಪಿಸಿಕೊಳ್ಳಲೆಂದು ಯುವಕರು ಕೊಠಡಿಯಲ್ಲಿ ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದವರು ಹೆಣವಾಗಿ ಹೋದ ಹೃದಯವಿದ್ರಾವಕ ಘಟನೆಯೊಂದು ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಕೊರೆಯುವ ಚಳಿ ಹಾಗೂ ಸೊಳ್ಳೆಗಳ ಕಾಟದಿಂದ ಪಾರಾಗಲು ಯುವಕರು ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದರು. ರಾತ್ರಿ ದಟ್ಟ

ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ

ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್​ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ.

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ತುಮಕೂರಿನ  ಬಾಲ ಭವನದಲ್ಲಿ   ನಡೆದ ಸಭೆಯಲ್ಲಿ ಮಾತನಾಡಿದ ಅವರು,

ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು

ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ

ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ.  ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ

ಕೋಲಾರದಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರ ಬಂಧನ

ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು. ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು