ಜಿಲ್ಲಾ ಸುದ್ದಿ
ಪತ್ನಿಯ ಕೊಲೆ ಆರೋಪದಡಿ ಧಾರವಾಡ ಜೈಲಿನಲ್ಲಿದ್ದ ಕೈದಿ ಆತ್ಮಹತ್ಯೆ
ಪತ್ನಿಯ ಕೊಲೆ ಆರೋಪದಡಿ 14 ವರ್ಷಗಳ ಶಿಕ್ಷೆಗೆ ಒಳಗಾಗಿ ಧಾರವಾಡ ಜೈಲಿನಲ್ಲಿದ್ದ ಕೈದಿಯೊಬ್ಬರು ಕಾರಾಗೃಹದ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲಿನ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೈದಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಸಾಪುರದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ. ಏಳು ವರ್ಷಗಳ ಹಿಂದೆ ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಕಾಲ ಜೈಲಿನಲ್ಲೇ ಕಳೆದಿದ್ದ ಈಶ್ವರಪ್ಪ ಜೈಲಿನಲ್ಲೇ
ಮದುವೆಗೆ ಐದು ದಿನ ಬಾಕಿ: ಮಂಡ್ಯದಲ್ಲಿ ಆಸ್ತಿಗಾಗಿ ತಮ್ಮನ ಕೊಲೆಗೈದ ಅಣ್ಣ
ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣನೊಬ್ಬ ಸದ್ಯದಲ್ಲೇ ಮದುವೆಯಾಗಲಿದ್ದ ತಮ್ಮನನ್ನು ಇರಿದು ಕೊಂದಿರುವ ಘಟನೆ ನಡೆದಿದೆ. ಯೋಗೇಶ್ (30) ಅಣ್ಣ ಮತ್ತು ಆತನ ಮಕ್ಕಳಿಂದ ಕೊಲೆಯಾದವರು. ಯೋಗೇಶ್ಗೆ ಇದೇ ತಿಂಗಳು 21 ರಂದು ಮದುವೆ ನಿಶ್ಚಯವಾಗಿತ್ತು. ಮನೆಯಲ್ಲಿ ಮದುವೆಯ ಸಂಭ್ರಮವಿತ್ತು. ಸಂಬಂಧಿಕರಿಗೆಲ್ಲ
ತುಮಕೂರಿನಲ್ಲಿ ಬಾಲಕಿ ಎದುರೇ ತಂದೆಯ ಕೊಲೆಗೈದಿದ್ದ ಕಳ್ಳರು ಅರೆಸ್ಟ್
ತುಮಕೂರಿನಲ್ಲಿ ಮಗಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿಯನ್ನು ಅಪರಿಚಿತ ಮುಸುಕುಧಾರಿಗಳು ಕೊಲೆಗೈದು ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು 48 ಗಂಟೆಗಳಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ಸತೀಶ, ಕೇಶವನ್, ಕವಿತೇಶ್ವರನ್ ಹಾಗೂ ಅರುಣ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನ
ರಾಸಾಯನಿಕ ಬೆರಸಿ ನಕಲಿ ಹಾಲು ತಯಾರಿ: ಐವರ ಬಂಧನ
ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತರು ಎಂದು ಗುರುತಿಸಲಾಗಿದೆ. ಈ ಗ್ಯಾಂಗ್ ಕೆಜಿಎಫ್ ತಾಲೂಕಿನ
ಅನ್ಯ ಧರ್ಮದ ಯುವಕನ ಸಂಬಂಧ: ಹೊಸಪೇಟೆಯಲ್ಲಿ ಕೊಲೆಯಾದ ಮೂರು ಮಕ್ಕಳ ತಾಯಿ
ಎಂಟು ವರ್ಷಗಳಿಂದ ಗಂಡನಿಂದ ದೂರವಾಗಿ ಮೂರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಮಹಿಳೆ ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಬೆಳೆಸಿ, ಆತನಿಂದಲೇ ಕೊಲೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಚಾಪಲಗಡ್ಡದಲ್ಲಿ ನಡೆದಿದೆ. ಗಂಡನಿಂದ ದೂರವಾಗಿದ್ದ ಉಮಾ (32) ಎಂಬಾಕೆ ರೈಲ್ವೆ ಸ್ಟೇಷನ್ನಲ್ಲಿ
ಬೆಳಗಾವಿಯಲ್ಲಿ ವಾಲ್ಮೀಕಿ ಭವನ ವಿವಾದ: ಎರಡು ಗುಂಪುಗಳ ನಡುವೆ ಕಲ್ಲು ತೂರಾಟ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ
ಅಕ್ಕಿ ತುಂಬಿದ ಲಾರಿ ಪಲ್ಟಿ: ಇಬ್ಬರು ಸಾವು
ಮಂಡ್ಯ:ಮಳವಳ್ಳಿ ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು ಮಾರ್ಗದಲ್ಲಿ
ರಬಕವಿಬನಹಟ್ಟಿಯಲ್ಲಿ ಆಸ್ತಿಗಾಗಿ ಅಣ್ಣನ ಮಕ್ಕಳಿಂದ ದಾನಕ್ಕೆ ಹೆಸರಾದ ದಾನಜ್ಜಿಯ ಕೊಲೆ
ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ 80 ವರ್ಷದ ದಾನಜ್ಜಿ (ಚಂದ್ರವ್ವ ನೀಲಗಿ) ಅವರನ್ನು 11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ದಾನಜ್ಜಿ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಬಾಗಿಲು ದಾನ ಮಾಡಿದ್ದರು. ಇವರ ಕೊಲೆಗೆ ಸ್ಥಳೀಯರು
ಕುಂದಗೋಳದಲ್ಲಿ ಚಾಕು ಇರಿದು ಶಾಲಾ ವಿದ್ಯಾರ್ಥಿಯ ಕೊಲೆಗೈದ ಸಹಪಾಠಿಗಳು
ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ
ಪ್ರೀತಿ ಹೆಸರಲ್ಲಿ ಸೆಕ್ಸ್, ಮದುವೆ ನಿರಾಕರಣೆ: ಡೆತ್ನೋಟ್ ಬರೆದಿಟ್ಟು ಯುವತಿ ಸುಸೈಡ್ ಯತ್ನ
ಯುವಕನೊಬ್ಬ ಪ್ರೀತಿ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ವಿವಾಹವಾಗಲು ನಿರಾಕರಿಸಿದ್ದರಿಂದ ನೊಂದ ಯುವತಿ ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪ ಘಟನೆ ನಡೆದ ಕಾರಣ ಸಮಯಕ್ಕೆ




