Menu

ಚಿಕ್ಕಬಳ್ಳಾಪುರ ಎಸ್‌ಎಂಎಸ್‌ಐಎಂಎಸ್‌ಆರ್‌ನಲ್ಲಿ ನಾಲ್ಕು ಸೂಪರ್ ಸ್ಪೆಷಾಲಿಟಿ ವಿಭಾಗ ಉದ್ಘಾಟಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ

ತಮ್ಮ 47ನೇ ಜನ್ಮದಿನದ ಅಂಗವಾಗಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು  ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿರುವ   ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ (ಎಸ್‌ಎಂಎಸ್‌ಐಎಂಎಸ್‌ಆರ್) ನಾಲ್ಕು ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ‘ಮೈ ಹ್ಯಾಪಿ ಹೆಲ್ತ್ ಮೊಬೈಲ್ ಆ್ಯಪ್‌ ಲೋಕಾರ್ಪಣೆ ಮಾಡಲಾಯಿತು. ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ನೂತನ ವೆಬ್‌ಸೈಟ್,

ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ಯುಟ್ಯೂಬರ್ಸ್‌ ಅರೆಸ್ಟ್‌

ಬೆಳಗಾವಿಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾರು, ಮೊಬೈಲ್ ಫೋನ್‌ಗಳು ಹಾಗೂ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಲಪ್ಪ

ದಾವಣಗೆರೆ ದುರ್ಗಾಂಬಿಕಾ ದೇಗುಲದ ಚಿನ್ನ ಕದ್ದ ಅರ್ಚಕ

ದಾವಣಗೆರೆ ನಗರದ ಗ್ರಾಮ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ದೇವಿಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೇವಸ್ಥಾನದ ಪೂಜಾರಿ ಕದ್ದು ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನದ ಅರ್ಚಕರಲ್ಲಿ ಒಬ್ಬನಾದ ಆಕಾಶ್ ದೇವಿಯ ಮೈಮೇಲಿದ್ದ ಹಾಗೂ ಭಕ್ತರು ನೀಡಿದ್ದ ಲಕ್ಷಾಂತರ

ಹಂದಿಗಾಗಿ ಹಾಕಿದ್ದ ವಿದ್ಯುತ್‌ಬಲೆಗೆ ಸಿಲುಕಿ ವ್ಯಕ್ತಿ ಸಾವು: ಶವ ಗುಟ್ಟಾಗಿ ಹೂಳಿದ ಆರೋಪಿಗಳು

ಚಿಕ್ಕಮಗಳೂರಿನ ಕಡೂರು ತಾಲೂಕಿನಲ್ಲಿ ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಬೇಟೆಗಾರರು ಶವವನ್ನು ಗುಟ್ಟಾಗಿ ಹೂತುಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಯಗಟಿ ಸಮೀಪದ ದೊಣ್ಣೆಕೋರನಹಳ್ಳಿ ಗ್ರಾಮದ ಕರಿಯಪ್ಪ (52) ವಿದ್ಯುತ್ ತಂತಿ ತಗುಲಿ ಮೃತಪಟ್ಟವರು.  ಜಮೀನಿನಲ್ಲಿ

ಹಿರಿಯೂರಿನ 14 ಕೆರೆಗಳಿಗೆ ನೀರು ತುಂಬಿಸಲು 244 ಕೋಟಿ ರೂ. ಯೋಜನೆ: ಸಿಎಂ ಡಿಕೆ ಶಿವಕುಮಾರ್‌

ಹಿರಿಯೂರಿನ  14 ಕೆರೆಗಳಿಗೆ ನೀರು ತುಂಬಿಸಬೇಕು ಎನ್ನುವುದು  ಮಾಜಿ ಸಚಿವ ದಿವಂಗತ ಡಿ. ಸುಧಾಕರ ಅವರ  ಕನಸಾಗಿತ್ತು. ಈ ಯೋಜನೆ ಮಾಡಲು ನನ್ನ ಬಳಿ ಅವರು ಕೊನೆಯದಾಗಿ ಮಾತು ತೆಗೆದುಕೊಂಡಿದ್ದರು. ಆ ಮಾತನ್ನು ಉಳಿಸಿಕೊಳ್ಳಲು  ಸಚಿವ ಸಂಪುಟದಲ್ಲಿ 244 ಕೋಟಿ ರೂ.

ರಾಜ್ಯದಲ್ಲಿ ಬರ, ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಪರಮೇಶ್ವರ್‌

ಬರದಿಂದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಇದೆ. ರಾಷ್ತ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು. ಚಿತ್ರದುರ್ಗ  ನಗರದ ಹೊರ ವಲಯದ ಮುರುಘಾ ಮಠದ ಸಭಾಂಗಣದಲ್ಲಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದರು.

ಧಾರವಾಡದಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣ: ಡಿಸಿಗೆ ಎಐಎಮ್‌ಎಸ್‌ಎಸ್ ಮನವಿ

ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣಗಳನ್ನು ಖಂಡಿಸಿ ಹಾಗೂ ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿ ಹಣದ ಬಿಡುಗಡೆಗೆ ಆಗ್ರಹಿಸಿ  ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್‌ಎಸ್‌ಎಸ್) ಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ. ಧಾರವಾಡ ಜಿಲ್ಲೆಯಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಬಾಲಗರ್ಭಿಣಿ

ಬರದಿಂದ ರೈತರ ಬದುಕಿಗೆ ತೊಂದರೆ ಆಗದಂತೆ ಕ್ರಮ ನಮ್ಮ ಹೊಣೆ: ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ

ದೇಗುಲಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರದ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್‌ ಬಳಿ ಕ್ಯಾಂಟರ್ ವಾಹನ ಹಾಗೂ ಬೈಕ್‌ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ. ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತಪಟ್ಟವರು. ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದಾಗ ಈ

ಸೌಜನ್ಯ ಕೇಸ್‌ ತನಿಖೆಯಲ್ಲಿ ಏನು ಮಾಡಿದ್ದೀರಿ: ಸಿಬಿಐಗೆ ಸುಪ್ರೀಂ ತರಾಟೆ

ಸೌಜನ್ಯ ಕೇಸ್‌ಗೆ ಸಂಬಂಧಿಸಿದಂತೆ ಸಿಐಡಿ ವರದಿ ಟ್ರಾನ್ಸ್‌ಲೇಟ್‌ ಬಿಟ್ಟು ಮತ್ತೇನು ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್‌ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶ