ಜಿಲ್ಲಾ ಸುದ್ದಿ
ಸ್ವ ಉದ್ಯೋಗದ ಆಮಿಷ: ಮಹಿಳೆಯರಿಂದ 10 ಕೋಟಿ ರೂಪಾಯಿ ಪಡೆದು ಪರಾರಿ
ಮನೆಯಲ್ಲೇ ಕುಳಿತು ಸ್ವ ಉದ್ಯೋಗದ ಮೂಲಕ ಕೈತುಂಬಾ ಸಂಪಾದಿಸಿ ಎಂಬ ಜಾಹೀರಾತು ಇದ್ದ ಬದ್ದ ಸ್ವಲ್ಪ ಹಣವನ್ನು ಹೂಡಿಕೆ ಮಾಡಿದ್ದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿ SLV ಮಹಿಳಾ ಮಾರ್ಟ್ ಹೆಸರಿನ ಕಂಪನಿಯು ಸ್ವಯಂ ಉದ್ಯೋಗ ನೀಡುವ ಆಸೆ ತೋರಿಸಿ, ಮಹಿಳೆಯರಿಂದ 5 ರಿಂದ 10 ಕೋಟಿ ರೂಪಾಯಿ ಹಣ ಸಂಗ್ರಹಿಸಿ ರಾತ್ರೋರಾತ್ರಿ ಪರಾರಿಯಾಗಿದೆ.
ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಶಿಕ್ಷಕರ ಕಿರುಕುಳವೆಂದು ಆರೋಪ
ಬೀದರ್ನ ಪ್ರತಾಪ್ ನಗರದ ಬಳಿಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲೆಯ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ
ಮಂಗಳೂರಿನಲ್ಲಿ ಉದ್ಯಮಿಯ ಹನಿಟ್ರ್ಯಾಪ್, ವೀಡಿಯೊ ಮುಂದಿಟ್ಟು ಎರಡುವರೆ ಕೋಟಿ ದೋಚಿದ್ದ ಕೈ ಮುಖಂಡ ಅರೆಸ್ಟ್
ಮಂಗಳೂರಿನ ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಿ ಅಶ್ಲೀಲ ವೀಡಿಯೊ ಮುಂದಿಟ್ಟು ಬ್ಲ್ಯಾಕ್ಮೇಲ್ ಮಾಡಿ 2 ಕೋಟಿ 77 ಲಕ್ಷ ರೂಪಾಯಿ ದೋಚಿರುವ ಪ್ರಕರಣ ಸಂಬಂಧ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಜಿತೇಶ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಉದ್ಯಮಿಯನ್ನು
ಪಂಕ್ಚರ್ ಆಗಿ ನಿಂತಿದ್ದ ಟ್ಯಾಂಕರ್ಗೆ ಲಾರಿ ಡಿಕ್ಕಿ: ಚಾಲಕ ಸಜೀವ ದಹನ
ಪಂಕ್ಚರ್ ಆಗಿ ನಿಂತಿದ್ದ ಟ್ಯಾಂಕರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ತಕ್ಷಣ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್
ಬಳ್ಳಾರಿ ಪಿಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಕೊಲೆಯೆಂದು ಪೋಷಕರ ಆರೋಪ
ಬಳ್ಳಾರಿಯ ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಶ್ವಾಸ್ (24) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ
ಮಂಡ್ಯದಲ್ಲಿ ತಂದೆ, ತಾಯಿ, ಮಗನ ಸಾವು
ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ತಂದೆ ನೇಣಿ ಬಿಗಿದುಕೊಂಡಿದ್ದರೆ, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಭಾಕರ್ (ತಂದೆ), ಜ್ಯೋತಿ (ತಾಯಿ) ಮತ್ತು ಸಂತೋಷ್ (ಪುತ್ರ) ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಅವರ ಪುತ್ರ
ಬೈಕ್ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು
ಬೈಕ್ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ
ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ಗೆ ಸಿಕ್ಕಿ ಬಿದ್ದ ಅಧಿಕಾರಿಗಳು
ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಧಿಕಾರಿಗಳು ಕೆಬಿಜೆಎನ್ಎಲ್ ಕೆನಾಲ್ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಕೆಬಿಜೆಎನ್ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ
ಸರ್ಕಾರಿ ವಸತಿ ನಿಲಯದಲ್ಲಿ ಊಟ, ನೀರಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಪ್ರತಿಭಟನೆ ಆರಂಭಿಸಿದ್ದಾರೆ. ಹಸಿವಿನಿಂದ ಕಂಗೆಟ್ಟ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು
5% ಬಡ್ಡಿಯ ಆಮಿಷ, ಕೋಟ್ಯಂತರ ರೂ.ವಂಚನೆ: ಆದಿತ್ಯರಾಜ್ ಕ್ಯಾಪಿಟಲ್ ಮೇಲೆ ಪೊಲೀಸ್ ದಾಳಿ
ಹೆಚ್ಚಿನ ಬಡ್ಡಿಯ ಆಮಿಷ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹಿಸಿ ವಂಚಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ, ಬೆಳಗಾವಿಯ ಭಾಗ್ಯನಗರದಲ್ಲಿರುವ ‘ಆದಿತ್ಯರಾಜ್ ಕ್ಯಾಪಿಟಲ್ ಸಂಸ್ಥೆಯ ಕಚೇರಿಯ ಮೇಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ತಂಡ ದಾಳಿ ನಡೆಸಿದೆ. ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ




