ಜಿಲ್ಲಾ ಸುದ್ದಿ
ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ: ಯಧುವೀರ್ ಒಡೆಯರ್ ಅಭಿಮತ
ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಗುರುವಾರ ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದ ಮೇಲೆ ಭಕ್ತಾಧಿಗಳಿಗೆ ಕಲ್ಪಿಸಿರುವ ವ್ಯವಸ್ಥೆಗಳ ಖುದ್ದು ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು.
ಕೋಲಾರದಲ್ಲಿ ಬೆಳಿಗ್ಗೆ ಮದುವೆ, ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಯುವಕ!
ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕೋಲಾರದಲ್ಲಿ ನಡೆದಿದೆ. ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ಮೂಲದ ಹರೀಶ್ ಬಾಬು (33)
ಅಪಘಾತಕ್ಕೆ ಮಗ ಬಲಿ: ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಸಾವು
ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಅಪಘಾತದಲ್ಲಿ ಮಗ ಮೃತಪಟ್ಟ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಕ್ಷ್ಮಿಕಾಂತ್ ಜೋಶಿ ಅಲಿಯಾಸ್ ಕಾಂತರಾಜು (45) ಮತ್ತು ತಾಯಿ ಶಾರದಾಬಾಯಿ (86) ಮೃತಪಟ್ಟವರು. ಬೀದರ್ನಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿಗೆ ಹೋಗುವ ಮಾರ್ಗದಲ್ಲಿ ಚಾಲಕನ ನಿಯಂತ್ರಣ
Heart attack deaths: ಹಾಸನದಲ್ಲಿ ಕಳೆದ 24 ಗಂಟೆಯಲ್ಲಿ ನಾಲ್ವರು ಹೃದಯಾಘಾತಕ್ಕೆ ಬಲಿ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಸರಣಿ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಹೃದಯಾಘಾತಗೊಂಡು ಮೃತಪಟ್ಟಿದ್ದಾರೆ. ಈ ಬೆಳವಣಿಗೆಯು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಸಂಪತ್ಕುಮಾರ್ (53), ಸಿ.ಬಿ ವಿರೂಪಾಕ್ಷ (70), ಸಂತೋಷ್ (41), ದೇವಮ್ಮ (72) ಮೃತಪಟ್ಟವರು. ಹಾಸನ ನಗರದ
Accident Death: ಇಳಕಲ್ನಲ್ಲಿ ಬೈಕ್ಗೆ ಬಸ್ ಡಿಕ್ಕಿ: ಯುವಕ ಸಾವು
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡಿಸಂಕಾಪುರ ಗ್ರಾಮದ ಬಳಿ ಬೈಕ್ಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಂಬಲದಿನ್ನಿ ಗ್ರಾಮದ ನಿವಾಸಿ ರಾಜು ಬಡಿಗೇರ (27) ಮೃತಪಟ್ಟ ಯುವಕ. ಸ್ಥಳಕ್ಕೆ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ
ಭದ್ರಾ ಬಲದಂಡೆ ನಾಲೆ ಕೊನೆ ಭಾಗದ ರೈತರ ಮನವಿಗೆ ಡಿಕೆ ಶಿವಕುಮಾರ್ ಸ್ಪಂದನೆ
ಭದ್ರಾ ಬಲದಂಡೆ ಕಾಲುವೆಯಿಂದ ಅವೈಜ್ಞಾನಿಕವಾಗಿ ನೀರನ್ನು ಎತ್ತಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೆ ನೀರು ನೀಡಲು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ನಿರ್ಧಾರ ಕೈಬಿಡಬೇಕು ಎಂದು ನಾಲೆಯ ಕೊನೆ ಭಾಗದ ರೈತರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ
ರಾಜ್ಯದ ಹಲವೆಡೆ ಮುಂದುವರಿದಿದೆ ಧಾರಾಕಾರ ಮಳೆ
ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರಿದಿದೆ, ಮಲೆನಾಡಿನ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಒಂದೇ ರಾತ್ರಿಗೆ ತುಂಗಾ ನದಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ. ಶೃಂಗೇರಿಯ ಗಾಂಧಿಮೈದಾನದ ರಸ್ತೆಯಲ್ಲಿ ನೀರು ತುಂಬಿದ್ದು, ಪೊಲೀಸರು ರಸ್ತೆ ಬಂದ್ಗೊಳಿಸಿ ಬ್ಯಾರಿಕೇಡ್ ಹಾಕಿದ್ದಾರೆ. ಶಿವಮೊಗ್ಗದ
ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ಅನುದಾನ: ಡಿಸಿಎಂ
“ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಅಮಾನಿ ಕೆರೆಯಿಂದ ಶಿಡ್ಲಘಟ್ಟದ 45 ಕೆರೆಗಳಿಗೆ, ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ಸೇರಿದಂತೆ ಒಟ್ಟು 164 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ರೂ.237 ಕೋಟಿ ಮೊತ್ತದ ಯೋಜನೆಗೆ
ಸುಳ್ಳು ಹೇಳುವುದರಲ್ಲಿ ನಿಸ್ಸೀಮ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ: ಮುಖ್ಯಮಂತ್ರಿ
ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು
ಚಾಮರಾಜನಗರದಲ್ಲಿ ವಿಷಹಾಕಿ 20 ಕೋತಿಗಳ ಮಾರಣಹೋಮ!
ಚಾಮರಾಜನಗರ: ವಿಷ ಹಾಕಿ 20ಕ್ಕೂ ಹೆಚ್ಚು ಕೋತಿಗಳನ್ನು ಕೊಂದು ಶವಗಳನ್ನು ಮೂಟೆ ಕಟ್ಟಿ ರಸ್ತೆ ಬದಿ ದುಷ್ಕರ್ಮಿಗಳು ಎಸೆದು ಹೋದ ಆಘಾತಕಾರಿ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಕೊಡಸೋಗೆ ರಸ್ತೆ ಬದಿಯಲ್ಲಿ ಎರಡು ಗೋಣಿ ಚೀಲದಲ್ಲಿ ಕೋತಿಗಳ