Menu

ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ

ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಮಗುವಿನ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಚಂದ್ರಶೇಖರ್ ಚಾಮರಾಜನಗರದವನು, ಕ್ರಷರ್​​ನಲ್ಲಿ ಲಾರಿ ಚಾಲಕ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳ್ಳೂರು ಕ್ರಾಸ್​ನ ಕಾವ್ಯಾ

ತುಮಕೂರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್‌

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು ಐದು ವರ್ಷದ ಮಗು ಮೃತಪಟ್ಟಿದೆ. ಮನೆಯ ಮುಂದೆ ಮಗು ವರುಣ್ ಆಟವಾಡುತ್ತಿದ್ದಾಗ ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ ಬಂದು ಮಗುವಿನ ಮೇಲೆ ಹಾದು ಹೋಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್‌

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್‌ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ

ಜೈಲಿನಲ್ಲಿ ಜಾಮರ್‌: ವೈದ್ಯರ ಸಂಪರ್ಕ ಸಿಗದೆ ಸಾವು ಬದುಕಿನ ಹೋರಾಟ ನಡೆಸಿದ ಚಿಕ್ಕಮಗಳೂರು ರೋಗಿ

ಮಂಗಳೂರಿನ ಜೈಲಿನಲ್ಲಿ ನೆಟ್ವರ್ಕ್ ಜಾಮರ್ ಅಳವಡಿಸಿರುವುದರಿಂದ ವೈದ್ಯರ ಸಂಪರ್ಕ ಸಾಧ್ಯವಾಗದೆ ಚಿಕ್ಕಮಗಳೂರಿನ ರೋಗಿ ಸಾವು ಬದುಕಿನ ನಡುವೆ ಹೋರಾಡಬೇಕಾಯಿತು. ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಮಂಗಳೂರಿನ ಹೃದಯ ಭಾಗ ಕೊಡಿಯಾಲಬೈಲ್‌ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ

ದಾವಣಗೆರೆಯಲ್ಲಿ ಕಾರು ಚಲಾಯಿಸುತ್ತಿದ್ದಾಗಲೇ ಮೃತಪಟ್ಟ ಗುತ್ತಿಗೆದಾರ

ದಾವಣಗೆರೆ ನಗರದ ಬಿಐಇಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡುವಾಗ ಚಾಲಕ ಹೃದಯಸ್ತಂಭನಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಕಾಏಕಿ ಹೃದಯಸ್ತಂಭನಗೊಂಡ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ

ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ

ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.

ಮಸ್ಕಿ ಪುರಸಭೆಯಲ್ಲಿ ಅವ್ಯವಹಾರ: ಮುಖ್ಯಾಧಿಕಾರಿ ಅಮಾನತು

ರಾಯಚೂರಿನ ಮಸ್ಕಿ ಪುರಸಭೆಯಲ್ಲಿ ಪೀಠೋಪಕರಣ ಖರೀದಿಯಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ತಪ್ಪಿತಸ್ಥ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕ್ರಮ ಕೈಗೊಂಡು ಕರ್ತವ್ಯಲೋಪ, ಹಣ ದುರ್ಬಳಕೆ ಆರೋಪದಡಿ ಅಮಾನತುಗೊಳಿಸಿದ್ದಾರೆ. ರೆಡ್ಡಿರಾಯನಗೌಡ ಅಮಾನತುಗೊಂಡ ಹಿಂದಿನ ಮಸ್ಕಿ ಪುರಸಭೆ ಮುಖ್ಯ ಅಧಿಕಾರಿ. ಪ್ರಸ್ತುತ

ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು

ಕಲಬುರಗಿ ಆಸ್ಪತ್ರೆಯಲ್ಲಿ ಬಾಣಂತಿ, ಶಿಶು ಸಾವು: ಕುಟುಂಬದ ದಾಂಧಲೆ

ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಮೃತಪಟ್ಟಿದ್ದಾರೆ. ಹೆರಿಗೆಗೂ ಮುನ್ನ ಗರ್ಭದಲ್ಲಿಯೇ ಮಗು ಸತ್ತಿರುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದು, ಲೋ ಬಿಪಿಯಿಂದ ತಾಯಿಯೂ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಕಲಬುರಗಿ ನಗರದ ಎಂಎಸ್‌ಕೆ ಮಿಲ್ ಬಡಾವಣೆಯಲ್ಲಿರುವ

ವಿಜಯಪುರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ತಂದೆ ಅಪಘಾತಕ್ಕೆ ಬಲಿ

ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ 52ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ತಂದೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವೆಂಕು ಚವ್ಹಾಣ (43). ಮೃತ ಬೈಕ್ ಸವಾರ. ಈ ಅಪಘಾತದಲ್ಲಿ ಪುತ್ರಿಯರಾದ