Menu

ಕೊಡಗು ಹಾಸ್ಟೆಲ್‌ನಲ್ಲಿ ರಾಯಚೂರು ವಿದ್ಯಾರ್ಥಿನಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೇಜಸ್ವಿನಿ, ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿ ಪ್ರಥಮ ವರ್ಷದ ಎ.ಐ.ಎಂ.ಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಶೈಕ್ಷಣಿಕ ಒತ್ತಡವನ್ನು ತಾಳಲಾರದೆ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಒಂದು ದಿನ ಮೊದಲು ತೇಜಸ್ವಿನಿ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಳು. ಮರುದಿನ ಸಂಜೆ 4 ಗಂಟೆಗೆ ತರಗತಿಗೆ ಆಗಮಿಸಿದ

ಸಂಡೂರಿನಲ್ಲಿ ರಸ್ತೆ ಅಪಘಾತ: ನಾಲ್ವರ ಸಾವು

ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್​ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಮೃತರ ಗುರುತು ಇನ್ನಷ್ಟೇ

ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು

ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು

ಬಳ್ಳಾರಿಯಲ್ಲಿ ತಡರಾತ್ರಿ  ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,

ಬೆಂಗಳೂರಿನಲ್ಲಿ ಗ್ಯಾಸ್‌ ಸೋರಿಕೆಯಾಗಿ ಇಬ್ಬರು ಭಸ್ಮ, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯ

ಡಿಪೋ ವ್ಯವಸ್ಥಾಪಕನ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನ

ಲಿಂಗಸುಗೂರು ಪಟ್ಟಣದ ಬಸ್ ಡಿಪೋ ವ್ಯವಸ್ಥಾಪಕ ರಾಹುಲ್ ಅವರ ಕಾರ್ಯವೈಖರಿಗೆ ಬಸ್ ಚಾಲಕ ಅಬ್ದುಲ್ ಸಾಬ ಬೇಸತ್ತು ಬಸ್ ಡಿಪೋದಲ್ಲೇ  ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪತ್ರಕರ್ತರ ಜೊತೆ ಚಾಲಕ ಮಾತನಾಡಿ,  ನಾನು 18ವರ್ಷದಿಂದ ಚಾಲಕನಾಗಿ  ಕಾರ್ಯ ನಿರ್ವಹಿಸುತ್ತಿದ್ದೇನೆ.  ವ್ಯವಸ್ಥಾಪಕ

ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್‌ ಹೆಸರಿನಲ್ಲಿ ವಂಚನೆ: ಪೊಲೀಸ್‌ ಠಾಣೆ ಮೊರೆ ಹೋದ ಸಂತ್ರಸ್ತರು

ವಾಸವಿ ಸ್ವಗೃಹ ಹೋಮ್ ನೀಡ್ಸ್ ಆ್ಯಂಡ್​ ಕನ್ಸಲ್ಟನ್ಸ್​ ಹೆಸರಲ್ಲಿ ವಿಶ್ವನಾಥ್​ ಎಂಬಾತ ಜನರಿಗೆ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡಿರುವುದಾಗಿ ಬಳ್ಳಾರಿಯ  ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಹಿಂದೆ ವಿಶ್ವನಾಥ ಕಿರಾಣಿ ಅಂಗಡಿ ಆರಂಭಿಸಿ, ಐದು

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಪೊಲೀಸ್‌ ಅತಿಥಿಯಾಗಿದ್ದಾನೆ. ಸಾಹಿಲ್ ಜೈನ್

ಬಾಗಪ್ಪ ಹರಿಜನ ಕೊಲೆಯ ನಾಲ್ವರು ಆರೋಪಿಗಳು ಸೆರೆ

ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಬಾಗಪ್ಪ ಹರಿಜನ ಮಗಳು ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಗಂಗೂಬಾಯಿ ಬಾಗಪ್ಪ ಹರಿಜನ ದೂರು ನೀಡಿದ್ದರು. ವಿಜಯಪುರ ನಗರ ಡಿವೈಎಸ್ಪಿ ಬಸವರಾಜ

ಅಪಘಾತದಲ್ಲಿ ಗಾಯಗೊಂಡಿದ್ದ ಮಂತ್ರಾಲಯ ಮಠದ ವಿದ್ಯಾರ್ಥಿ ಸಾವು

ಕಳೆದ ತಿಂಗಳು ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ. ಜಯಸಿಂಹ (23) ಮೃತ ವಿದ್ಯಾರ್ಥಿ. ಸಿಂಧನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ