ಬಳ್ಳಾರಿ
ಅಂಜನಾದ್ರಿ ದೇಗುಲದಲ್ಲಿ ಅರ್ಚಕರ ಮಧ್ಯೆ ಜಗಳ
ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಂಜನಾದ್ರಿ ದೇವಸ್ಥಾನದ ಆವರಣದ ಒಳಭಾಗದಲ್ಲೇ ಆಂಜನೇಯ ಸ್ವಾಮಿಯ ಗರ್ಭಗುಡಿಯ ಸಮೀಪ ಗಲಾಟೆ ನಡೆದಿದ್ದು, ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ವಿದ್ಯಾದಾಸಬಾಬಾ ಆರೋಪಿಸಿ ದ್ದಾರೆ. ಹಂಪಿಯ ಗೋವಿಂದನಾಂದ ಸರಸ್ವತಿ ಸ್ವಾಮೀಜಿ
ಬಳ್ಳಾರಿಯಲ್ಲಿ ಕಿರು ಸೇತುವೆಗೆ ಕಾರು ಡಿಕ್ಕಿ: ದೇವಸ್ಥಾನದಿಂದ ವಾಪಸಾಗುತ್ತಿದ್ದ ಮೂವರ ಸಾವು
ಬಳ್ಳಾರಿಯಲ್ಲಿ ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ಕಾರಿನಲ್ಲಿ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ಅಪಘಾತ
ಗಾಂಧಾರಿ ವಿದ್ಯೆ ಚಮತ್ಕಾರ: ಬಳ್ಳಾರಿಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆದ ವಿದ್ಯಾರ್ಥಿನಿ
ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಪ್ರಾಚೀನ ಕಲೆ “ಗಾಂಧಾರಿ” ವಿದ್ಯೆಯನ್ನು ಕರಗತ ಮಾಡಿಕೊಂಡಿರುವ ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ವಿದ್ಯಾರ್ಥಿನಿ ಹಿಮಾಬಿಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 8ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ತಮ್ಮ ಸೇಹಿತರು,
ಗಂಗಾವತಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೊಶೂಟ್ ಮುಗಿಸಿ ವಾಪಸಾಗುತ್ತಿದ್ದ ಜೋಡಿ ಅಪಘಾತಕ್ಕೆ ಬಲಿ
ಮದುವೆಗೆ ಎರಡು ವಾರವಿದ್ದು, ಸಿದ್ಧತೆಯಲ್ಲಿದ್ದ ಜೋಡಿ, ಸಂಭ್ರಮದಿಂದ ಪ್ರೀ ವೆಡ್ಡಿಂಗ್ ಫೋಟೊಶೂಟ್ ಮಾಡಿಸಿಕೊಂಡು ಮನೆಗೆ ವಾಪಸ್ ಆಗುವಾಗ ರಸ್ತೆ ಅಪಘಾತ ಸಂಭವಿಸಿ ಮೃತಪಟ್ಟಿರುವ ಘಟನೆ ಕೊಪ್ಪಳದ ಗಂಗಾವತಿ ಬಳಿ ನಡೆದಿದೆ. ಬೈಕ್ಗೆ ಲಾರಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಕರಿಯಪ್ಪ ಮಡಿವಾಳ
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸ್ ಬ್ರೇಕ್
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ನಡೆಯುತ್ತಿದೆ ಎನ್ನಲಾಗಿರುವ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಅಕ್ರಮ ಅದಿರು, ಅಕ್ರಮ ಮರಳು ಸಾಗಾಟದ ಬಳಿಕ ಬಳ್ಳಾರಿಯಲ್ಲಿ ಗ್ರಾವೆಲ್ ಸಾಗಾಟ ದಂಧೆ ಗರಿಗೆದರಿದೆ. ಬಳ್ಳಾರಿಯ ಮೋಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಂಪ್ಲಿ ಶಾಸಕರ
ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು
ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ
ಬಳ್ಳಾರಿಯಲ್ಲಿ ಜೀನ್ಸ್ಪಾರ್ಕ್ ಎಲ್ಲಿ: ರಾಹುಲ್ ಗಾಂಧಿಗೆ ಆರ್ ಅಶೋಕ ಪ್ರಶ್ನೆ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ “ಜೀನ್ಸ್ ಪಾರ್ಕ್” ಮಾಡುತ್ತೇವೆ, ಬಳ್ಳಾರಿಯನ್ನು “ಜೀನ್ಸ್ ರಾಜಧಾನಿ” ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದ @INCKarnataka ಪಕ್ಷ ಈಗ ಸರಿಯಾದ ಮೂಲಸೌಕರ್ಯವಿಲ್ಲದೆ 36 ಜೀನ್ಸ್ ತಯಾರಿಕಾ ಘಟಕಗಳು ಮುಚ್ಚುವ ಪರಿಸ್ಥಿತಿ ತಂದಿಟ್ಟಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು
ಯಲಬುರ್ಗಾದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರ ಸಮೀಪ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂತ್ರಸ್ತೆ ನಾಲ್ವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಹಣದಾಸೆಗೆ ಹಾವು ಹಿಡಿಯಲು ಹೋಗಿ ಕಡಿತಕ್ಕೆ ಬಾಲಕ ಬಲಿ
ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹಿಡಿಯಲು ಹೋದ ಹುಡುಗನನ್ನು ನಾಗರ ಹಾವು ಕಡಿದು ಆತ ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರಜಾಕ್ (17) ಹಾವು ಕಡಿತದಿಂದ ಮೃತಪಟ್ಟ ಹುಡುಗ. ಹಾವು ಕಚ್ಚಿರುವ ವೀಡಿಯೊ
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ
ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ




