ಬಳ್ಳಾರಿ
ಬಳ್ಳಾರಿ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನದ ವೀಡಿಯೊ ವೈರಲ್
ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಐಷಾರಾಮಿ ಜೀವನದ ವೀಡಿಯೊ ವೈರಲ್ ಆಗಿದೆ. ಜೈಲಿನಲ್ಲಿ ಕೈದಿಗಳ ಮೊಬೈಲ್ ಬಳಕೆ, ಗಾಂಜಾ ಸೇವನೆ, ನಾನ್ವೆಜ್ ಅಡುಗೆ ತಯಾರಿ, ಆಂಡ್ರಾಯ್ಡ್ ಮೊಬೈಲ್, ಪೋಟೋಗೆ ಕೈದಿಗಳ ಪೋಸ್ ಸೇರಿದಂತೆ ಹಲವು ವೀಡಿಯೊ ವೈರಲ್ ಆಗಿದೆ. ಕೈದಿಗಳು ಜೈಲು ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಕೂಡ ಮಾಡುತ್ತಾರೆ ಎನ್ನಲಾಗಿದೆ. ಜೈಲಿನಲ್ಲಿ ಈ ಹಿಂದಿನ ಕೈದಿಗಳು ಐಷಾರಾಮಿಯಾಗಿ ಜೀವನ ನಡೆಸಿದ್ದ ಪೋಟೊಗಳನ್ನು ವೈರಲ್ ಮಾಡುವುದಾಗಿ ಬೆದರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಐದನೇ ಮಹಿಳಾ ಅಧ್ಯಕ್ಷೆ ಬಾನು ಮುಷ್ತಾಕ್
ಈ ವರ್ಷದ ಡಿಸೆಂಬರ್ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಆಯ್ಕೆಯಾಗುವ ಮೂಲಕ ಈ ಗೌರವವನ್ನು ಪಡೆದ ಐದನೇ ಮಹಿಳೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ನಿರ್ಧಾರವನ್ನು ಬಾನು
ಉತ್ತರಾದಿ ಮಠ-ರಾಘವೇಂದ್ರ ಸ್ವಾಮಿ ಮಠಗಳ ದ್ವೇಷ: ಸುಪ್ರೀಂ ಸಂಧಾನದಲ್ಲಿ ಅಂತ್ಯ
ಬಳ್ಳಾರಿ ನವವೃಂದಾವನ ಗಡ್ಡೆಯ ಶತಮಾನದ ಪ್ರಕರಣ ಸುಪ್ರೀಂಕೋರ್ಟ್ನ ಸಂಧಾನದೊಂದಿಗೆ ಅಂತ್ಯ ಕಂಡಿದೆ. ಎರಡು ಮಠಗಳ ನಡುವೆ ಶತಮಾನಗಳಿಂದ ಇದ್ದ ದ್ವೇಷಕ್ಕೆ ತಿಲಾಂಜಲಿ ಬಿದ್ದಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನ್ಯಾಯಮೂರ್ತಿ ಸಂಜಯ್ ಕೌರ್ ನೇತೃತ್ವದಲ್ಲಿ ಸಂಧಾನ ನಡೆದಿದೆ. ಉಭಯ ಮಠಗಳ ಶ್ರೀಪಾದರ ಜೊತೆ
Illegal mining case: ಅಕ್ರಮ ಗಣಿಗಾರಿಕೆ- ಜನಾರ್ದನ ರೆಡ್ಡಿಗೆ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕ
ED raid: ಚುನಾವಣೆಗೆ ವಾಲ್ಮೀಕಿ ನಿಗಮದ ಹಣ- ಸಂಸದ ತುಕಾರಾಂ ಮನೆ ಸೇರಿ 8 ಕಡೆ ಇಡಿ ದಾಳಿ
ವಾಲ್ಮೀಕಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಸೇರಿದಂತೆ ಕರ್ನಾಟಕದ ಒಟ್ಟು 8 ಕಡೆ ಏಕಕಾಲಕ್ಕೆ ಇಡಿಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪದಡಿ ಇಡಿ ಅಧಿಕಾರಿಗಳು
ಕೊಡಗು ಹಾಸ್ಟೆಲ್ನಲ್ಲಿ ರಾಯಚೂರು ವಿದ್ಯಾರ್ಥಿನಿ ಆತ್ಮಹತ್ಯೆ
ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಹಾಸ್ಟೆಲ್ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೇಜಸ್ವಿನಿ, ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿ ಪ್ರಥಮ ವರ್ಷದ ಎ.ಐ.ಎಂ.ಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್) ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಶೈಕ್ಷಣಿಕ
ಸಂಡೂರಿನಲ್ಲಿ ರಸ್ತೆ ಅಪಘಾತ: ನಾಲ್ವರ ಸಾವು
ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಮೃತರ ಗುರುತು ಇನ್ನಷ್ಟೇ
ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ
ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು
ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ತಡರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,
ಬೆಂಗಳೂರಿನಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಭಸ್ಮ, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯ