ಬಳ್ಳಾರಿ
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸ್ ಬ್ರೇಕ್
ಬಳ್ಳಾರಿಯಲ್ಲಿ ಕಂಪ್ಲಿ ಶಾಸಕರ ಆಪ್ತರಿಂದ ನಡೆಯುತ್ತಿದೆ ಎನ್ನಲಾಗಿರುವ ಅಕ್ರಮ ಗ್ರಾವೆಲ್ ಸಾಗಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಅಕ್ರಮ ಅದಿರು, ಅಕ್ರಮ ಮರಳು ಸಾಗಾಟದ ಬಳಿಕ ಬಳ್ಳಾರಿಯಲ್ಲಿ ಗ್ರಾವೆಲ್ ಸಾಗಾಟ ದಂಧೆ ಗರಿಗೆದರಿದೆ. ಬಳ್ಳಾರಿಯ ಮೋಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಂಪ್ಲಿ ಶಾಸಕರ ಆಪ್ತರು ಎನ್ನಲಾದವರು ಅಕ್ರಮ ಗ್ರಾವಲ್ ಸಾಗಾಟ ದಂಧೆ ಆರಂಭಿಸಿದ್ದು, ಪೊಲೀಸರು ತಡೆ ಹಿಡಿದಿದ್ದಾರೆ. ಆಂಧ್ರದ ಗೂಳ್ಯಂ, ಕರ್ನಾಟಕದ ಬಳ್ಳಾರಿ ತಾಲೂಕಿನ ಮೂಲಕ ಬಸರಕೋಡು ಗ್ರಾಮದ ಮೂಲಕ ಹಡ್ಲಿಗಿ
ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು
ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ
ಬಳ್ಳಾರಿಯಲ್ಲಿ ಜೀನ್ಸ್ಪಾರ್ಕ್ ಎಲ್ಲಿ: ರಾಹುಲ್ ಗಾಂಧಿಗೆ ಆರ್ ಅಶೋಕ ಪ್ರಶ್ನೆ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ “ಜೀನ್ಸ್ ಪಾರ್ಕ್” ಮಾಡುತ್ತೇವೆ, ಬಳ್ಳಾರಿಯನ್ನು “ಜೀನ್ಸ್ ರಾಜಧಾನಿ” ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದ @INCKarnataka ಪಕ್ಷ ಈಗ ಸರಿಯಾದ ಮೂಲಸೌಕರ್ಯವಿಲ್ಲದೆ 36 ಜೀನ್ಸ್ ತಯಾರಿಕಾ ಘಟಕಗಳು ಮುಚ್ಚುವ ಪರಿಸ್ಥಿತಿ ತಂದಿಟ್ಟಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು
ಯಲಬುರ್ಗಾದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರ ಸಮೀಪ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂತ್ರಸ್ತೆ ನಾಲ್ವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಹಣದಾಸೆಗೆ ಹಾವು ಹಿಡಿಯಲು ಹೋಗಿ ಕಡಿತಕ್ಕೆ ಬಾಲಕ ಬಲಿ
ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹಿಡಿಯಲು ಹೋದ ಹುಡುಗನನ್ನು ನಾಗರ ಹಾವು ಕಡಿದು ಆತ ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರಜಾಕ್ (17) ಹಾವು ಕಡಿತದಿಂದ ಮೃತಪಟ್ಟ ಹುಡುಗ. ಹಾವು ಕಚ್ಚಿರುವ ವೀಡಿಯೊ
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ
ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ
ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್
ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹೊಸಪೇಟೆ
ಇನ್ಸುರೆನ್ಸ್ ಹಣ ಪಡೆಯಲು ಸಂಚು: ಹೊಸಪೇಟೆಯ ವೃದ್ಧನ ಕೊಲೆಗೈದ ಗ್ಯಾಂಗ್ ಅರೆಸ್ಟ್
ಹೊಸಪೇಟೆ ಹೊರವಲಯದಲ್ಲಿ ವಂಚಕರ ಗ್ಯಾಂಗೊಂದು 5.20 ಕೋಟಿ ರೂ. ಇನ್ಶೂರೆನ್ಸ್ ಹಣವನ್ನು ಪಡೆದುಕೊಳ್ಳುವ ಸಂಚು ರೂಪಿಸಿ ಅದಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿದ ಘಟನೆ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಹೊಸಪೇಟೆ ಕೌಲ್ ಪೇಟೆಯ ನಿವಾಸಿ ಗಂಗಾಧರ ಕೊಲೆಯಾಗಿರುವ
ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ
ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು. ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ
ತುಂಗಾಭದ್ರಾ ಡ್ಯಾಂನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ




