Thursday, December 18, 2025
Menu

ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್‌ ಲಾಡ್‌

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌  ಭರವಸೆ ನೀಡಿದರು.  ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು ಆದರೆ ೨೦೧೫ ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ

ರಾಜ್ಯದಲ್ಲಿ  ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್‌, ಡ್ರಗ್ಸ್‌: ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್‌ ಬಂದಿದೆ. ಡ್ರಗ್ಸ್‌ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ   ವಿಧಾನಸಭೆಯಲ್ಲಿ  ಕಾನೂನು ಸುವ್ಯವಸ್ಥೆ ಕುರಿತು

ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿ ಬಿಜೆಪಿ ಬೇರೆ ರಾಜ್ಯಗಳಲ್ಲಿ ಗೆಲ್ಲುತ್ತಿದೆ: ಡಿಕೆ ಶಿವಕುಮಾರ್‌

ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಯೇ ಎನ್ ಡಿಎ ಇಡೀ ದೇಶದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಗೆದ್ದು ಅಧಿಕಾರ ಪಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಇಲ್ಲವಾಗಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ 

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಜನಪದ ಗಾಯಕ ಮೈಲಾರಿ ಅರೆಸ್ಟ್‌

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎನ್ನಲಾಗಿರುವ ಮೈಲಾರಿ ಎಂಬಾತನನ್ನು ಬಾಗಲಕೋಟೆಯ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಮೈಲಾರಿಹಾಗೂ ಆತನ ಐವರು ಸಹಚರರ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಘಟನೆ ಅಕ್ಟೋಬರ್‌ 24 ರಂದು

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ನಮಗೆ ನ್ಯಾಯ ಸಿಕ್ಕಿದೆ: ಡಿಕೆ ಶಿವಕುಮಾರ್‌

ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ,

ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ED ದುರುಪಯೋಗ ಖಂಡಿಸಿ ಕೇಂದ್ರದ ವಿರುದ್ಧ‌ ಕಾಂಗ್ರೆಸ್‌ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಇಡಿಯನ್ನು ದುರುಪಯೋಗ

ಬೆಂಗಳೂರಿನ ಮಾದರಿಯಲ್ಲಿ ಅಭಿವೃದ್ಧಿ ಪಥದತ್ತ ಕುಂದಾನಗರಿ ದಾಪುಗಾಲು: ಬೈರತಿ ಸುರೇಶ್

ಕುಂದಾನಗರಿ ಬೆಳಗಾವಿ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆ

ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯವಿದೆ: ಡಿಸಿಎಂ

“ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಚಾಲನೆ ನೀಡಿ ಮಾತಾಡಿದರು. “ನಮ್ಮೆಲ್ಲರಿಗೂ

ಸೂಕ್ತ ತರಬೇತಿ ಪಡೆದ ತಜ್ಞ ಶಿಕ್ಷಕರ ಕೊರತೆ, ಅಸಮರ್ಪಕ ಬೋಧನಾ ವಿಧಾನಗಳಿಂದ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಕುಸಿತ

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿಕ್ಷಣ ತಜ್ಞರ ಸಮಿತಿಯು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ  ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು.