ಬೆಳಗಾವಿ
ದಿನದಲ್ಲಿ ಎರಡು ಗಂಟೆ ಡಿಜಿಟಲ್ ಆಫ್: ಗಮನ ಸೆಳೆದ ಹಲಗಾ ಗ್ರಾಮ
ಮಕ್ಕಳು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ಬೆಳಗಾವಿ ತಾಲೂಕಿನ ಹಲಗಾ ಗ್ರಾಮಸ್ಥರು ಒಂದು ಕ್ರಾಂತಿಕಾರಿ ಮತ್ತು ಮಾದರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದೇ ‘ಡಿಜಿಟಲ್ ಆಫ್’ ಪ್ರಯೋಗ. ಎಲ್ಲರೂ ಮೊಬೈಲ್ ಮತ್ತು ಟಿವಿ ಸೇರಿದಂತೆ ಡಿಜಿಟಲ್ ವ್ಯಸನಕ್ಕೆ ಒಳಗಾಗಿದ್ದು, ಮಕ್ಕಳ ಓದಿನ ಮೇಲೆ ಮತ್ತು ಕೌಟುಂಬಿಕ ಸಂಬಂಧಗಳ ಮೇಲೆ ಗಂಭೀರವಾದ ಕೆಟ್ಟ ಪರಿಣಾಮ ಬೀರುತ್ತಿದೆ ಎಂಬುದನ್ನು ಮನಗಂಡ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಸಣ್ಣ ಮಟ್ಟಿನ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ. ಮಹಾರಾಷ್ಟ್ರದ ಹಳ್ಳಿಯೊಂದರ ಮಾದರಿಯನ್ನು ಅನುಸರಿಸಿ
ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ರೈತರಿಗೆ ಗಾಯವಾಗಿದೆ. ವಿಶ್ವ ರೈತ ಸಮಾವೇಶದಲ್ಲಿ ಭಾಗಿಯಾಗಲು ಮೈಸೂರಿನತ್ತ ತೆರಳುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಬೈಲಹೊಂಗಲ
ದ್ವೇಷ ಭಾಷಣ ನಿಯಂತ್ರಣ ಮಸೂದೆ ಚರ್ಚೆಯಿದು, ಬಿಲ್ ಬಗ್ಗೆ ಮಾತನಾಡಿ ಸಿಟಿ ರವಿಗೆ ಲಾಡ್ ಕೌಂಟರ್
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ವಿಧಾನಪರಿಷತ್ ಕಲಾಪದ ವೇಳೆ ದ್ವೇಷ ಭಾಷಣ ನಿಯಂತ್ರಣ ಮಸೂದೆ ಕುರಿತು ಚರ್ಚೆ ನಡೆಯುತ್ತಿರುವಾಗ ಎಂಎಲ್ಸಿ ಸಿಟಿ ರವಿ ಅವರ ಮಾತುಗಳಿಗೆ ಆಕ್ರೋಶಗೊಂಡ ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದರು. ಜಿಹಾದ್, ಕಾಫೀರ್ ಅರ್ಥವನ್ನು ಗೂಗಲ್ನಲ್ಲಿ ಪಡೆಯಬಹುದು
ಕಲ್ಯಾಣಕರ್ನಾಟಕದಲ್ಲಿ 371ಜೆ ಜಾರಿ ಸಾಧ್ಯವಿಲ್ಲ ಎಂದವರು ನೀವು, ಜಾರಿಗೊಳಿಸಿದವರು ನಾವು: ಬಿಜೆಪಿಗೆ ಕುಟುಕಿದ ಸಿಎಂ ಸಿದ್ದರಾಮಯ್ಯ
371 ಜೆ ಜಾರಿ ಮಾಡಲು ಹೋರಾಡಿದ್ದು-ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ, ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಯ ವೇಗಕ್ಕೆ 371ಜೆ ಮೂಲಕ ಚಾಲನೆ ನೀಡಿದ್ದು ನಾವು, ನೀವೇನು ಮಾಡಿದ್ದೀರಿ ದಾಖಲೆ ಕೊಡಿ. ಅಡ್ವಾನಿ ಮತ್ತು ವಾಜಪೇಯಿ ಇಬ್ಬರೂ ಕೇಂದ್ರದಲ್ಲಿ ಸರ್ಕಾರ ನಡೆಸುವಾಗ
ಔಟ್ಗೋಯಿಂಗ್ ಮತ್ತು ಇನ್ಕಮಿಂಗ್ ಪಾಲಿಟಿಕ್ಸ್ನಲ್ಲಿ ಜನ ಹೈರಾಣ: ಛಲವಾದಿ
ರಾಜ್ಯದಲ್ಲಿ ಔಟ್ಗೋಯಿಂಗ್ ಮತ್ತು ಇನ್ಕಮಿಂಗ್ ಪಾಲಿಟಿಕ್ಸ್ನಲ್ಲಿ ಜನರ ಮಾರಣಹೋಮವಾಗುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ. ಬರೀ ಲೂಟಿ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ
ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ
ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ. ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ. ನಾವು ಈ ಭಾಗದ
ನನಗೆ ಭ್ರಷ್ಟಾಚಾರದ ಪಿತಾಮಹ ಎಂದ ವಿಜಯೇಂದ್ರಗೆ ಕಾಲವೇ ಉತ್ತರಿಸಲಿದೆ: ಡಿಕೆ ಶಿವಕುಮಾರ್
“ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು.
ಮುಂದಿನ ಜೂನ್ ಒಳಗೆ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ: ಡಿಕೆ ಶಿವಕುಮಾರ್
“2026ರ ಜೂನ್ ತಿಂಗಳ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್ ಗಳನ್ನು ಬದಲಾವಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ವಿಧಾನ ಪರಿಷತ್
ಬಿಜೆಪಿ ವಿರೋಧದ ನಡುವೆಯೇ ದ್ವೇಷ ಭಾಷಣ ಅಪರಾಧಗಳ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಪ್ರತಿಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ ಅಂಗೀಕಾರಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಡನೆಯಾಗಿದ್ದ ವಿಧೇಯಕ ಕುರಿತು
ವಿಧಾನ ಪರಿಷತ್ತಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಅನುಮೋದನೆ
ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರ ರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2025ಕ್ಕೆ (2ನೇ ತಿದ್ದುಪಡಿ) ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ)




