Wednesday, September 02, 2026
Menu

ಧಾರವಾಡದಲ್ಲಿ ಕಾರು ಉರುಳಿ ಮೂವರ ಸಾವು

ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿದೆ. ಮೃತಪಟ್ಟ ಮೂವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ವಿನಾಯಕ ಕೆ.ಯು (25), ಮಂಜುನಾಥ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ. ಗಾಯಗೊಂಡ ಅಭಿಷೇಕ, ಅಜಯ್ ಹಾಗೂ ಬಸನಗೌಡ ಸ್ಥಿತಿ ಕೂಡ ಗಂಭೀರವಾಗಿದೆ. ಸ್ಥಳಕ್ಕೆ ಗರಗ

ಚಿಕನ್‌ ಪೀಸ್‌ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಪಾರ್ಟಿಯಲ್ಲಿ ಚಿಕನ್‌ಪೀಸ್‌ ತಿನ್ನುವ ವಿಚಾರಕ್ಕೆ ಆರಂಭಗೊಂಡ ಕ್ಷುಲ್ಲಕ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ. ಸೀತಾರಾಮ್ ಕೊಲೆಯಾಗಿದ್ದು, ಅರುಣ್‌ಕುಮಾರ್ ಕೊಲೆ ಮಾಡಿದಾತ. ಇವರಿಬ್ಬರೂ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್

ಮೊಬೈಲ್‌ ವಿಚಾರಕ್ಕೆ ಜಗಳ: ಅಣ್ಣನ ಕೊಂದ ತಮ್ಮ

ಮೊಬೈಲ್‌ ವಿಚಾರಕ್ಕೆ ಸೋದರರಿಬ್ಬರು ಜಗಳವಾಡಿ ತಮ್ಮ ಅಣ್ಣನನ್ನು ಕೊಂದಿರುವ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಬಳಿ ನಡೆದಿದೆ. ನಲ್ವತ್ತು ವರ್ಷದ ಅಡಿವಪ್ಪ ಎಂಬವರನ್ನು ತಮ್ಮ ರಾಜು ಎಂಬಾತ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸೋದರರು ಸೇರಿದಂತೆ ಬೆಳಗಾವಿ ಬೈಲಹೊಂಗಲದ ಕುಟುಂಬ

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ವ್ಯಕ್ತಿಯ ಹತ್ಯೆ

ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಶಂಕೆಯಿಂದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕೊಲೆಗೈದ ವ್ಯಕ್ತಿಯ ಪೋಟೊವನ್ನು ತನ್ನ ಸ್ಟೇಟಸ್‌ಗೆ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಕೊಲೆ ಆರೋಪಿ ಪತ್ನಿಯೊಂದಿಗೆ ಸೇರಿ

ಕೋಳಿ ಫಾರ್ಮ್‌ ಹೆಸರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ: ಏಳು ಆರೋಪಿಗಳು ಅರೆಸ್ಟ್‌

ಕೊಲ್ಲಾಪುರದ ಚಂದಗಡ ತಾಲೂಕಿನಲ್ಲಿ ಕೋಳಿ ಫಾರ್ಮ್‌ ಹೆಸರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ನಡೆಸುತ್ತಿದ್ದ ಜಾಲವನ್ನು ಬಯಲಿಗೆಳೆದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇಪ್ಪತ್ತು ಕಿ.ಮೀ ದೂರದ ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರಂ ಹೆಸರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ನಡೆಸುತ್ತಿದ್ದರು.

ಬೆಳಗಾವಿ ಶಿವಂ ಅಸೋಸಿಯೇಟ್ಸ್‌ ವಂಚನೆ ಮೊತ್ತ 2,110 ಕೋಟಿ ರೂ.: ಇಡಿ

ಸಾರ್ವಜನಿಕರಿಗೆ ವಂಚನೆ ಪ್ರಕರಣದಲ್ಲಿ ಸದ್ದು ಮಾಡುತ್ತಿರುವ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ 2,110 ಕೋಟಿ ರೂಪಾಯಿ ವಂಚಿಸಿರುವುದಾಗಿ ಇಡಿ ಪ್ರಕಟಿಸಿದೆ. ತನಿಖೆ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಶಿವಾನಂದ ನೀಲಣ್ಣವರ್ ಒಡೆತನದ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು

ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರುತ್ತಿದ್ದಾತ ಬೆಳಗಾವಿಯಲ್ಲಿ ಅರೆಸ್ಟ್‌

ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಭೋಲು ಪ್ರಜಾಪತಿ ಎಂಬಾತ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಮಾರಾಟ ಮಾಡುತ್ತಿದ್ದ

ಗೋಕಾಕ್‌ನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಗೋಕಾಕ್ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದು ತಂದೆ, ಮಗಳು ಸೇರಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ.  ಸೈಫ್ ಮುಲ್ಲಾ(29), ಪುತ್ರಿ ಸಿಜಾ ಮುಲ್ಲಾ‌(4) ಮತ್ತು ಗೆಳೆಯ ಇಮ್ತಿಯಾಜ್ ಬಡಗಾಂವ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಗು ಸಿಹಾನ್

ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ಯುಟ್ಯೂಬರ್ಸ್‌ ಅರೆಸ್ಟ್‌

ಬೆಳಗಾವಿಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾರು, ಮೊಬೈಲ್ ಫೋನ್‌ಗಳು ಹಾಗೂ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಲಪ್ಪ

ಬೆಳಗಾವಿಯಲ್ಲಿ ಮಗು ಜೊತೆ ತಾಯಿ ಆತ್ಮಹತ್ಯೆ: ಗಂಡನ ಮನೆಯವರ ಕಿರುಕುಳ ಆರೋಪ

ಬೆಳಗಾವಿಯ ಪೀರನವಾಡಿಯಲ್ಲಿ ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತ ತಾಯಿ ತನ್ನ ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿ ಪ್ರೇಮಾ ನಾಗೇಶ ತಳವಾರ (28) ತನ್ನ ಮೂರು ವರ್ಷದ