ಬೆಳಗಾವಿ
ರಾಯಬಾಗದಲ್ಲಿ ಲಾರಿ ಪಲ್ಟಿ: ವಿದ್ಯಾರ್ಥಿ ಬಲಿ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಉರುಳಿದ ಪರಿಣಾಮವಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವಿನಲ್ಲಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಉರುಳಿದೆ. ಐದನೇ ತರಗತಿ ವಿದ್ಯಾರ್ಥಿ ಅಮಿತ್ ಕಾಂಬಳೆ(11) ಸ್ಥಳದಲ್ಲೇ ಅಸು ನೀಗಿದ್ದಾನೆ. ಅಂಜಲಿ ಕಾಂಬಳೆ(15), ಅವಿನಾಶ ಕಾಂಬಳೆ(14) ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಅಗ್ನಿಶಾಮಕ
ಚಿಕ್ಕೋಡಿಯಲ್ಲಿ ನೇಣು ಬಿಗಿದುಕೊಂಡ ಪತ್ನಿ, ವಿಷ ಸೇವಿಸಿದ ಪತಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನ ನೊಂದ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಳ ಗ್ರಾಮದ 24 ವರ್ಷದ ಉಮಾಶ್ರೀ
ಬಾರ್ಗೆ ಕರೆದೊಯ್ದು ಮೊಮ್ಮಗನಿಗೆ ಮದಿರೆ ರುಚಿ ಹತ್ತಿಸಿದ ಅಜ್ಜನಿಗೆ ಸ್ಥಳೀಯರ ತರಾಟೆ
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ಮುದ್ದಾದ ಮೊಮ್ಮಗನಿಗೆ ಅಜ್ಜ ಸಾರಾಯಿ ಕುಡಿಸಿರುವುದು ಎಲ್ಲೆಡೆ ಸುದ್ದಿಯಾಗಿದೆ. ತಿದ್ದಿ ತೀಡಿ ಬುದ್ಧಿ ಹೇಳಬೇಕಾದ ಅಜ್ಜನಿಂದಲೇ ಈ ಕೃತ್ಯ ನಡೆದಿದೆ. ತಾನು ಕುಡಿಯುವುದಲ್ಲದೆ ಮೂರು ವಷರದ ಮಗುವಿಗೆ ಕುಡಿಸಿ ಹಾಳು ದಾರಿಗೆ ಅಜ್ಜ
ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಕಿಡಿಗೇಡಿಗಳು ಸಾಂತಾ ಕ್ಲಾಸ್ ಟೋಪಿ ಹಾಕಿ ಮೂಲಕ ಅಪಮಾನ ಮಾಡಿದ್ದು, ಕೃತ್ಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಿಂಡಲಗಾ ರಸ್ತೆಯ ಕ್ಯಾಂಪ್ ಪ್ರದೇಶದ ಬಳಿ
ದಿನದಲ್ಲಿ ಎರಡು ಗಂಟೆ ಡಿಜಿಟಲ್ ಆಫ್: ಗಮನ ಸೆಳೆದ ಹಲಗಾ ಗ್ರಾಮ
ಮಕ್ಕಳು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ಬೆಳಗಾವಿ ತಾಲೂಕಿನ ಹಲಗಾ ಗ್ರಾಮಸ್ಥರು ಒಂದು ಕ್ರಾಂತಿಕಾರಿ ಮತ್ತು ಮಾದರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದೇ ‘ಡಿಜಿಟಲ್ ಆಫ್’ ಪ್ರಯೋಗ. ಎಲ್ಲರೂ ಮೊಬೈಲ್ ಮತ್ತು ಟಿವಿ ಸೇರಿದಂತೆ ಡಿಜಿಟಲ್ ವ್ಯಸನಕ್ಕೆ ಒಳಗಾಗಿದ್ದು, ಮಕ್ಕಳ ಓದಿನ ಮೇಲೆ ಮತ್ತು
ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ರೈತರಿಗೆ ಗಾಯವಾಗಿದೆ. ವಿಶ್ವ ರೈತ ಸಮಾವೇಶದಲ್ಲಿ ಭಾಗಿಯಾಗಲು ಮೈಸೂರಿನತ್ತ ತೆರಳುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಬೈಲಹೊಂಗಲ
ದ್ವೇಷ ಭಾಷಣ ನಿಯಂತ್ರಣ ಮಸೂದೆ ಚರ್ಚೆಯಿದು, ಬಿಲ್ ಬಗ್ಗೆ ಮಾತನಾಡಿ ಸಿಟಿ ರವಿಗೆ ಲಾಡ್ ಕೌಂಟರ್
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ವಿಧಾನಪರಿಷತ್ ಕಲಾಪದ ವೇಳೆ ದ್ವೇಷ ಭಾಷಣ ನಿಯಂತ್ರಣ ಮಸೂದೆ ಕುರಿತು ಚರ್ಚೆ ನಡೆಯುತ್ತಿರುವಾಗ ಎಂಎಲ್ಸಿ ಸಿಟಿ ರವಿ ಅವರ ಮಾತುಗಳಿಗೆ ಆಕ್ರೋಶಗೊಂಡ ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದರು. ಜಿಹಾದ್, ಕಾಫೀರ್ ಅರ್ಥವನ್ನು ಗೂಗಲ್ನಲ್ಲಿ ಪಡೆಯಬಹುದು
ಕಲ್ಯಾಣಕರ್ನಾಟಕದಲ್ಲಿ 371ಜೆ ಜಾರಿ ಸಾಧ್ಯವಿಲ್ಲ ಎಂದವರು ನೀವು, ಜಾರಿಗೊಳಿಸಿದವರು ನಾವು: ಬಿಜೆಪಿಗೆ ಕುಟುಕಿದ ಸಿಎಂ ಸಿದ್ದರಾಮಯ್ಯ
371 ಜೆ ಜಾರಿ ಮಾಡಲು ಹೋರಾಡಿದ್ದು-ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ, ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಯ ವೇಗಕ್ಕೆ 371ಜೆ ಮೂಲಕ ಚಾಲನೆ ನೀಡಿದ್ದು ನಾವು, ನೀವೇನು ಮಾಡಿದ್ದೀರಿ ದಾಖಲೆ ಕೊಡಿ. ಅಡ್ವಾನಿ ಮತ್ತು ವಾಜಪೇಯಿ ಇಬ್ಬರೂ ಕೇಂದ್ರದಲ್ಲಿ ಸರ್ಕಾರ ನಡೆಸುವಾಗ
ಔಟ್ಗೋಯಿಂಗ್ ಮತ್ತು ಇನ್ಕಮಿಂಗ್ ಪಾಲಿಟಿಕ್ಸ್ನಲ್ಲಿ ಜನ ಹೈರಾಣ: ಛಲವಾದಿ
ರಾಜ್ಯದಲ್ಲಿ ಔಟ್ಗೋಯಿಂಗ್ ಮತ್ತು ಇನ್ಕಮಿಂಗ್ ಪಾಲಿಟಿಕ್ಸ್ನಲ್ಲಿ ಜನರ ಮಾರಣಹೋಮವಾಗುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ. ಬರೀ ಲೂಟಿ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ
ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ
ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ. ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ. ನಾವು ಈ ಭಾಗದ




