ಬೆಳಗಾವಿ
ಬೆಳಗಾವಿ ಅಧಿವೇಶನದಲ್ಲಿ ಉಕ ಸಮಸ್ಯೆ ಬಗ್ಗೆ ಚರ್ಚೆಯಾದ್ರೆ ಸಾಲದು, ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್ ಅಶೋಕ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಸರ್ಕಾರ ಕೇವಲ ಉತ್ತರ ನೀಡಿದರೆ ಸಾಲದು, ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಸಮಗ್ರವಾಗಿ ಚರ್ಚೆಯಾಗಿ, ಸಲಹೆ ಸೂಚನೆಗಳು ದೊರೆಯಬೇಕು ಎಂದರು.
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ
ಆಕಸ್ಮಿಕ ಸಾವಲ್ಲ, ಕೊಲೆಯೆಂದು ಆರು ಗಂಟೆಯೊಳಗೆ ದೃಢಪಡಿಸಿದ ಯಮಕನಮರಡಿ ಪೊಲೀಸ್
ಕಬ್ಬು ಕಡಿಯುವಾಗ ಕುಡುಗೋಲು ತಾಗಿ ಸಾವು ಎಂದು ಬಿಂಬಿತವಾಗಿದ್ದ ಪ್ರಕರಣವನ್ನು ಆರು ಗಂಟೆಯೊಳಗೆ ಬೇಧಿಸಿದ ಪೊಲೀಸರು ಅದೊಂದು ಕೊಲೆ ಎಂಬುದನ್ನು ದೃಢಪಡಿಸಿ ಆರೋಪಿಗಳಾದ ಸಹೋದರ ಮತ್ತು ಸಂಬಂಧಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಳಗಾವಿಯ ಯಮಕನಮರಡಿಯ ಲ್ಲಿ ನಡೆದಿದೆ. ಯಮಕನಮರಡಿ ಪೊಲೀಸ್ ಇನ್ಸ್ಪೆಕ್ಟರ್
ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಏಳನೇ ದಿನಕ್ಕೆ
ಪ್ರತಿ ಟನ್ ಗೆ 3500 ರೂ. ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಗುರ್ಲಾಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ
ಬೆಳಗಾವಿಯಲ್ಲಿ ಎರಡು ಸಾವಿರ ರೂ. ವಾಪಸ್ ಕೊಡದ್ದಕ್ಕೆ ಸ್ನೇಹಿತನ ಕೊಲೆ
ಬೆಳಗಾವಿ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಗಿರಿಯಾಲ್ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದವ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಸಾಲ ಪಡೆದಿದ್ದ
ಬೆಳಗಾವಿಯಲ್ಲಿ ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಹೆಸರಲ್ಲಿ 12 ಕೋಟಿ ರೂ. ವಂಚನೆ
ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಬೆಳಗಾವಿಯಲ್ಲಿ ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ನೀಡುವುದಾಗಿ ನಂಬಿಸಿ ಸಾವಿರಾರು ಮಹಿಳೆಯರನ್ನು ವಂಚಿಸಿದ್ದು, ಎಂಟು ಸಾವಿರ ಮಹಿಳೆಯರಿಂದ 12 ಕೋಟಿ ರೂ. ದೋಚಿ ಪರಾರಿಯಾಗಿದ್ದಾನೆ. ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ.
ಚಿಕ್ಕೋಡಿಯಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಗೆ ರಸ್ತೆಯಲ್ಲೇ ಒದ್ದು ಹಲ್ಲೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಂಬಲವಾಡ ಗ್ರಾಮದಲ್ಲಿ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಸಾರ್ವಜನಿಕವಾಗಿ ಒದ್ದು ಪತಿ ಹಲ್ಲೆ ಮಾಡುತ್ತಿದ್ದು, ತಡೆಯಲು ಬಂದ ಆಕೆಯ ತಾಯಿ ಮೇಲೂ ದೌರ್ಜನ್ಯ ನಡೆಸುತ್ತಿದ್ದರೂ ಗ್ರಾಮಸ್ಥರು ಮೂಕ ಪ್ರೇಕ್ಷಕರಾಗಿ ನಿಂತಿದ್ದ ಘಟನೆ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ
ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ
ಅಕ್ರಮ ಸಂಬಂಧ: ಜಾತ್ರೆಗೆ ಕರೆದೊಯ್ದು ಖಾನಾಪುರದ ಶಿಕ್ಷಕಿಯ ಕೊಲೆ
ಬೆಳಗಾವಿ ಖಾನಾಪುರ ತಾಲೂಕಿನ ನಂದಗಡದ ಅಂಗನವಾಡಿ ಶಿಕ್ಷಕಿ ಅಶ್ವಿನಿ ಪಾಟೀಲ್ (50) ಹತ್ಯೆ ಪ್ರಕರಣದ ಆರೋಪಿ ಶಂಕರ್ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಾಟೀಲ್ ಮತ್ತು ಆರೋಪಿ ಅಕ್ರಮ ಸಂಬಂಧ ಹೊಂದಿದ್ದರು. ಆಕೆ ಶಂಕರ್ ಪಾಟೀಲ್ಗೆ ನೀಡಿದ್ದ ಐದು ಲಕ್ಷ
ಮೂಡಲಗಿಯಲ್ಲಿ ಐದು ತಿಂಗಳ ಹಿಂದೆ ಮದುವೆ: ಪತ್ನಿಯ ಕೊಲೆಗೈದು ಪತಿ ಪರಾರಿ
ಐದು ತಿಂಗಳ ಹಿಂದೆ ಮದುವೆಯಾಗಿರುವ ವ್ಯಕ್ತಿ ಪತ್ನಿಯನ್ನು ಕೊಲೆ ಮಾಡಿ ಶವವನ್ನು ಬೆಡ್ ಕೆಳಗೆ ಅಡಗಿಸಿಟ್ಟು ಪರಾರಿಯಾಗಿರುವ ದಾರುಣ ಘಟನೆಯೊಂದು ಬೆಳಗಾವಿಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಸಾಕ್ಷಿ ಕಂಬಾರ (20) ಕೊಲೆಯಾದವರು, ಪತಿ ಆಕಾಶ್ ಕಂಬಾರ ಕೊಲೆ




