Menu

ಸಾಲ ವಾಪಸ್‌ ಬರದೆ ಸಂಕಷ್ಟ, ನ್ಯಾಯ ಕೇಳಿದ್ರೆ ಪೊಲೀಸರಿಂದ ಬೆದರಿಕೆ: ಡಿವೈಎಸ್‌ಪಿ, ಪಿಎಸ್‌ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಕೊಟ್ಟ ಸಾಲದ ಹಣ ವಾಪಸ್ ಬಾರದೆ ಸಂಕಷ್ಟ ಒಂದೆಡೆಯಾದರೆ, ಅತ್ತ ನ್ಯಾಯ ಕೇಳಲು ಹೋದಾಗ ಪೊಲೀಸರಿಂದಲೇ ಬೆದರಿಕೆ ಎದುರಿಸಿ ಮನನೊಂದ ವ್ಯಕ್ತಿಯೊಬ್ಬರು ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ ಹಾಗೂ ಪಿಎಸ್‌ಐ ಹೆಸರನ್ನುಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ  ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದ ನಿವಾಸಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡವರು. ಈ ಸಾವು ಹಾಗೂ ಡೆತ್‌ನೋಟ್‌ನಲ್ಲಿರುವ ಅಂಶಗಳು ಜಿಲ್ಲೆಯಾದ್ಯಂತ  ಸಂಚಲನ ಮೂಡಿಸಿವೆ. ಮೃತ ರವೀಂದ್ರ ಗ್ರಾಮದ ಲಕ್ಷ್ಮಣ್ ಚಂದರಗಿ ಮತ್ತು

ವೈದ್ಯ ದಂಪತಿ ಮನೆಯಲ್ಲಿ ಚಿನ್ನ, ಹಣ ಕಳವು: ಕೇರ್‌ಟೇಕರ್‌ ಸೇರಿ ಇಬ್ಬರ ಬಂಧನ

ಬೆಳಗಾವಿ ನಗರದ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರ್‌ ಟೇಕರ್‌ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಸತೀಶ್ ಕಾಂಬ್ಳೆ ಮತ್ತು ಬಾಬಾಸಾಬ್ ಈರಪ್ಪ ಕಟಗೇರಿ ಬಂಧಿತ ಆರೋಪಿಗಳು. ಪೊಲೀಸರು

ಎಸ್‌ಡಿಆರ್‌ಎಫ್‌ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್‌ ಸಿಪಿಐ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡವರು. ಬೆಳಗಾವಿಯ ಚನ್ನಮ್ಮ ನಗರದ ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚೌಗಲೆ ಪತ್ನಿ ಘಟನೆ ಸಂಬಂಧ ಎಸ್‌ಡಿಆರ್‌ಎಫ್‌ ಸಿಬ್ಬಂದಿಗೆ ಮಾಹಿತಿ

ರಾಯಬಾಗದಲ್ಲಿ ಆಟೊ-ಬೈಕ್‌ ಡಿಕ್ಕಿ: ಒಂದೇ ಕುಟುಂಬದ ಮೂವರು ಬಲಿ

ಬೆಳಗಾವಿಯ ರಾಯಬಾಗ ರೈಲು ನಿಲ್ದಾಣದ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಪತ್ನಿ ಸಾಕ್ಷಿ ಮಾನೆ

ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು

ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ

ಪ್ರೀತಿಸಿದವನ ಮದುವೆಯಾಗಲು ಕುಟುಂಬ ವಿರೋಧ: ಕುಂದಗೋಳದಲ್ಲಿ ಯುವತಿ ಆತ್ಮಹತ್ಯೆ

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಪ್ರೀತಿಸಿದವನ ಮದುವೆಯಾಗಲು ಕುಟುಂಬಸ್ಥರು ವಿರೋಧಿಸಿದ್ದಕ್ಕೆ ನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್

ನದಿಯಲ್ಲಿ ಮುಳುಗುತ್ತಿದ್ದ ಮಗುವನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ನದಿಯಲ್ಲಿ ಮುಳುಗುತ್ತಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿ ಕೂಡ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ನಡೆದಿದೆ. ತಾಯಿಯ ಮೃತದೇಹ ಪತ್ತೆಯಾಗಿದ್ದು, ಮಗನ ಮೃತದೇಹಕ್ಕಾಗಿ ಶೋಧ ಮುಂದುವರಿಸಲಾಗಿದೆ.27 ವರ್ಷದ ಲಕ್ಷ್ಮಿ ಕುಠೋಳಿ ಹಾಗೂ 10 ವರ್ಷದ ಸುಪ್ರೀತ್

ನೈಟಿ ಧರಿಸುತ್ತಾಳೆಂದು ಖಾನಾಪುರದಲ್ಲಿ ಪತ್ನಿಗೆ ಬೆಂಕಿ ಹಚ್ಚಿದ ಪತಿ

ನೈಟಿ ಧರಿಸುತ್ತಾಳೆ ಎಂಬ ಕಾರಣಕ್ಕೆ ಗಂಡನೊಬ್ಬ ಹೆಂಡತಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ್ದು, ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 80% ಸುಟ್ಟ

ಬೆಳಗಾವಿಯಲ್ಲಿ ಟ್ರಕ್‌ಗೆ ಗೂಡ್ಸ್‌ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಾರು ಕೋಳಿಗಳು ಕೂಡ ಸತ್ತು ಹೋಗಿವೆ. ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿ ರಾಷ್ಟ್ರೀಯ

ಹುಕ್ಕೇರಿಯಲ್ಲಿ ಪತಿಯ ತೊರೆದು ಪ್ರಿಯಕರನ ಜೊತೆ ಹೋದ ತಂಗಿಗೆ ವಿಷವಿಕ್ಕಿ ಹತ್ಯೆ

ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ತೆರಳಿದ್ದ ಯುವತಿಗೆ ಸೋದರ ಸೇರಿದಂತೆ ಕುಟುಂಬದವರು ವಿಷವಿಕ್ಕಿ ಸಾಯಿಸಿ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಬೆಳಗಾವಿಯ ಹುಕ್ಕೇರಿ ನದಿಗುಡಿ ಪ್ರದೇಶದಲ್ಲಿ ನಡೆದಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ