Menu

ಮದುವೆ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ: ವಧುವೇ ಸೂತ್ರಧಾರಿ

ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದ ವರನ ಅಡ್ಡಗಟ್ಟಿ ಚಾಕು ಇರಿದು ಗುಂಪು ಪರಾರಿಯಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಈ ಕೃತ್ಯದ ರೂವಾರಿ ಆತನನ್ನು ಮದುವೆಯಾಗಬೇಕಿದ್ದ ವಧು ಎಂಬ ಸತ್ಯವನ್ನು ಬಯಲಿಗೆಳೆದಿದ್ದಾರೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್‌ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಮತ್ತೊಂದು ಕಾರಿನಲ್ಲಿ ಬಂದ ಗುಂಪು

ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ: ಸಮಗ್ರ ರಕ್ಷಣಾ ವ್ಯವಸ್ಥೆಗೆ ಡಿಕೆ ಶಿವಕುಮಾರ್ ಆದೇಶ

-ಹೇಮಂತ್ ಗೌಡ, ಕನಕಪುರ ಮಲೈ ಮಹದೇಶ್ವರ ಬೆಟ್ಟ—ಭಕ್ತಿಭಾವ, ತ್ಯಾಗ ಮತ್ತು ನಂಬಿಕೆಯ ಸಂಕೇತ. ಪ್ರತಿವರ್ಷ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು  ಪಾದಯಾತ್ರೆಯ ಮೂಲಕ ಈ ಪವಿತ್ರ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಾರೆ. ಆದರೆ ಈ ಭಕ್ತಿಪೂರ್ಣ ಪಯಣದ ನಡುವೆ ಆಗಾಗ  ಸಂಭವಿಸುವ

ಗುಂಡ್ಲುಪೇಟೆಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ರಾಜಶೇಖರಪ್ಪ ಚಿರತೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಗಾಯಗಳಾಗಿವೆ. ಧೈರ್ಯದಿಂದ ಚಿರತೆ ದಾಳಿಯನ್ನು ಎದುರಿಸಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಳ್ವಾಡಿ ವಿಷಪ್ರಸಾದ ಆರೋಪಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಪ್ರವೇಶವಿಲ್ಲ

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಲೆ ಮಹದೇಶ್ವರ ಬೆಟ್ಟ ಪ್ರವೇಶಿಸುವುದನ್ನು ನಿಷೇಧಿಸಿ ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವು ಇಂದಿನಿಂದ ಮುಂದಿನ

ಬೇರೆ ಜಾತಿಯವನೊಂದಿಗೆ ಮಗಳ ಮದುವೆ: ಚಾಮರಾಜನಗರದಲ್ಲಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಬೇರೆ ಜಾತಿ ಯುವನೊಂದಿಗೆ ಮಗಳ ಮದುವೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು ಎಂಬವರ ಕುಟುಂಬನ್ನು ಬಹಿಷ್ಕರಿಸಲಾಗಿದೆ. ಈ ಬಹಿಷ್ಕಾರ ತೆರವಾಗಬೇಕಾದರೆ 5 ಲಕ್ಷ ರೂ. ತಪ್ಪು ಕಾಣಿಕೆ ಕೊಡಬೇಕು ಎಂದು ಹೇಳಲಾಗಿದೆ.

ಕರ್ತವ್ಯ ಮುಗಿಸಿ ಮನೆಗೆ ಹೋದ ಎಎಸ್‌ಐ ಕುಸಿದು ಸಾವು

ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಬಂದ ಎಎಸ್‌ಐವೊಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟವರು. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಚಾಮರಾಜ ನಗರದ ಪೊಲೀಸ್ ಗೃಹಕ್ಕೆ ಬೆಳಗ್ಗೆ

ಕುತೂಹಲಕ್ಕಾಗಿ ಚಿರತೆ ಬೋನಿನೊಳಗೆ ಹೋಗಿದ್ದ ರೈತ ಮೂರು ಗಂಟೆ ಲಾಕ್‌

ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ರೈತರೊಬ್ಬರು ಕುತೂಹಲದಿಂದ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದು, ಮೂರು ಗಂಟೆ ಅದರೊಳಗೆ ಲಾಕ್‌ ಆಗಿದ್ದಾರೆ. ಗ್ರಾಮದ ಕಿಟ್ಟಿ ಎಂಬವರು ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನೊಳಗೆ ಹೋಗಿ ಸಿಕ್ಕಿಹಾಕಿಕೊಂಡು ಮೂರು ಗಂಟೆ ಅದರೊಳಗೆ ಪರದಾಡಿದ್ದಾರೆ.

ಚಾಮರಾಜನಗರದಲ್ಲಿ ಒಂದೇ ಕಡೆ 5 ಹುಲಿಗಳು ಪತ್ತೆ: ನಿಷೇಧಾಜ್ಞೆ ಜಾರಿ

ಚಾಮರಾಜನಗರದ ನಂಜೇದೇವನಪುರ ಗ್ರಾಮದ ಬಳಿ 5 ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನು ಗಳಲ್ಲಿ ಹುಲಿಗಳು ಓಡಾಡುತ್ತಿರುವುದು ಡ್ರೋನ್‌ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಸ್ಥಳೀಯರಲ್ಲಿ ಭೀತಿ ಆವರಿಸಿಕೊಂಡಿದೆ. ಹೀಗಾಗಿ ಈ

ಬಂಡೀಪುರದಲ್ಲಿ ಕೇರಳ ಆಭರಣ ತಯಾರಕನನ ಅಡ್ಡಗಟ್ಟಿ ಕಾರು ಸಮೇತ ಚಿನ್ನ ದರೋಡೆ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶವಾಗಿರುವ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ಆಭರಣ ತಯಾರಕ ವಿನು ಅವರ 1.3 ಕೆಜಿಗೂ ಹೆಚ್ಚು ಚಿನ್ನವನ್ನು ದರೋಡೆ ಮಾಡಿ ಕಾರು ಸಹಿತ ಆರೋಪಿಗಳು ಪರಾರಿಯಾಗಿದ್ದಾರೆ. ಕೇರಳದ ಗ್ಯಾಂಗ್​ವೊಂದು ಪೂರ್ವನಿಯೋಜಿತ ಕೃತ್ಯ ಎಸಗಿರುವ

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಘೋಷಣೆ

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು, ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿದ ಸಿಎಂ  ಮಾತನಾಡಿ,  ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ