ಚಿಕ್ಕಬಳ್ಳಾಪುರ
ಪೆರೇಸಂದ್ರ ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟಕ್ಕೆ ಕಾರ್ಮಿಕ ಬಲಿ
ಚಿಕ್ಕಬಳ್ಳಾಪುರದ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಧರ್ಮಾವರಂನ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್, ದೇಶದಲ್ಲೇ ಮೊದಲ ಪ್ರಯೋಗ: ಸದ್ಗುರು ಶ್ರೀ ಮಧುಸೂದನ ಸಾಯಿ
ಸಾಂಪ್ರದಾಯಿಕ ಕೃಷಿಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಆಧರಿಸಿ ರಾಜ್ಯದ ರೈತರಿಗೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂಲಕ ಪ್ರಮಾಣಪತ್ರ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ‘ಒಂದು ಜಗತ್ತು ಒಂದು ಕುಟುಂಬ’ ಮಾನವೀಯ ಸೇವಾ ಅಭಿಯಾನದ ಸಂಸ್ಥಾಪಕ
ಪತ್ನಿಗೆ ಡಿವೋರ್ಸ್ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್ನ ಕೊಲೆಗೈದು ವ್ಯಕ್ತಿ ಸುಸೈಡ್
ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ
ಚಿಕ್ಕಬಳ್ಳಾಪುರದಲ್ಲಿ ಅಡುಗೆ ಕಲಿ ಎಂದ ಅತ್ತೆ: ವಿಷ ಸೇವಿಸಿ ಸತ್ತ ಸೊಸೆ
ಅತ್ತೆ ಅಡುಗೆ ಕಲಿ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ನೊಂದುಕೊಂಡ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಅತ್ತೆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ 18 ವರ್ಷದ ಯುವತಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡವಳು. ಕೆಲವು ತಿಂಗಳ ಹಿಂದೆಯಷ್ಟೇ
ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್ಗೆ ಡಿಕ್ಕಿ: ಬಾಲಕಿ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ
ಪ್ರಕರಣದಲ್ಲಿ ಬಿ ರಿಪೋರ್ಟ್ಗಾಗಿ ಲಂಚ: ಪೊಲೀಸರಿಬ್ಬರು ಲೋಕಾಯುಕ್ತ ಬಲೆಗೆ
ಜಮೀನು ವಿವಾದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಬಂಧಿತ ಆರೋಪಿಗಳು. ಮೊಟ್ಲೂರು ಗ್ರಾಮದ ರಘು ಎಂಬವರ ಜಮೀನು ವಿವಾದಕ್ಕೆ ಸಂಬಂಧಿಸಿದ
ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಅಕ್ರಮ ಸಂಬಂಧ ಹೊಂದಿರುವ ಪತ್ನಿ ಮೇಲೆ ಶಂಕೆ
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ
ವಿವಾಹೇತರ ಸಂಬಂಧ: ಮಹಿಳೆಯ ಕೊಲೆಗೈದ ಯುವಕ, ಅನಾಥವಾದ ಮಕ್ಕಳು
ಚಿಕ್ಕಬಳ್ಳಾಪುರದಲ್ಲಿ ಯುವಕನೊಬ್ಬ ವಿವಾಹಿತ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ, ಆಕೆಯ ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ತೇಜಸ್ವಿನಿ ಎಂಬಾಕೆ ಗಂಡನಿಂದ ದೂರವಾಗಿ ಇನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದರು. ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡು ಹೋಟೆಲ್ನವರೇ ಕೊಟ್ಟಿದ್ದ ಒಂದು ರೂಂನಲ್ಲಿ
ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ
ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆಗ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆ ಅವರ ಆಯ್ಕೆ ರದ್ದುಗೊಂಡಿತ್ತು.
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶ
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್.ಎನ್. ಸುಬ್ಬಾರೆಡ್ಡಿ




