Menu

ನಿಸ್ವಾರ್ಥ ಸೇವೆಯೇ ಧರ್ಮ, ನನಗೆ ಸೇವಾ ಚಟುವಟಿಕೆ ಬಿಟ್ಟರೆ ಬೇರೆ ಆಯ್ಕೆ ಇಲ್ಲ: ಸದ್ಗುರು ಶ್ರೀ ಮಧುಸೂದನ ಸಾಯಿ

ಹಸಿದ ಮಗು ಅಮ್ಮನ ಹತ್ತಿರ, ಬದುಕುವ ಆಸೆಯಿರುವ ರೋಗಿ ವೈದ್ಯರ ಹತ್ತಿರ, ಕಲಿಯುವ ಆಸೆಯಿರುವ ವಿದ್ಯಾರ್ಥಿ ಶಿಕ್ಷಕರ ಹತ್ತಿರ ಕೋರಿಕೆ ಇಟ್ಟರೆ ಅವರು ಏನು ಮಾಡಬಹುದು? ಅವರಿಗೆ ಇಲ್ಲ ಎನ್ನುವ ಆಯ್ಕೆ ಇರುತ್ತದೆಯೇ? ಅದೇ ರೀತಿ ನನಗೂ ಸೇವಾ ಚಟುವಟಿಕೆ ಬಿಟ್ಟರೆ ಬೇರೆ ಆಯ್ಕೆ ಇಲ್ಲ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ಚಿಕ್ಕಬಳಾಪುರದಲ್ಲಿ  ನಡೆದ “ದಿವ್ಯ ಸಂಜೆ” ಸಂವಾದ

ಚಿಕ್ಕಬಳ್ಳಾಪುರದಲ್ಲಿ ಕಂಟೇನರ್‌ಗೆ ಬಸ್‌ ಡಿಕ್ಕಿ: ಟೆಕ್ಕಿ ಯುವತಿ ಬಲಿ

ಚಿಕ್ಕಬಳ್ಳಾಪುರದ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಸಮೀಪ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಯುವತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್‌ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಸಂಚರಿಸುತ್ತಿತ್ತು, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌

ಚಿಕ್ಕಬಳ್ಳಾಪುರ ಎಸ್‌ಎಂಎಸ್‌ಐಎಂಎಸ್‌ಆರ್‌ನಲ್ಲಿ ನಾಲ್ಕು ಸೂಪರ್ ಸ್ಪೆಷಾಲಿಟಿ ವಿಭಾಗ ಉದ್ಘಾಟಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ

ತಮ್ಮ 47ನೇ ಜನ್ಮದಿನದ ಅಂಗವಾಗಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು  ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿರುವ   ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ (ಎಸ್‌ಎಂಎಸ್‌ಐಎಂಎಸ್‌ಆರ್) ನಾಲ್ಕು ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಿದರು.

ಪೆರೇಸಂದ್ರ ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟಕ್ಕೆ ಕಾರ್ಮಿಕ ಬಲಿ

ಚಿಕ್ಕಬಳ್ಳಾಪುರದ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಧರ್ಮಾವರಂನ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ

ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್, ದೇಶದಲ್ಲೇ ಮೊದಲ ಪ್ರಯೋಗ: ಸದ್ಗುರು ಶ್ರೀ ಮಧುಸೂದನ ಸಾಯಿ 

ಸಾಂಪ್ರದಾಯಿಕ ಕೃಷಿಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಆಧರಿಸಿ ರಾಜ್ಯದ ರೈತರಿಗೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂಲಕ ಪ್ರಮಾಣಪತ್ರ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ‘ಒಂದು ಜಗತ್ತು ಒಂದು ಕುಟುಂಬ’ ಮಾನವೀಯ ಸೇವಾ ಅಭಿಯಾನದ ಸಂಸ್ಥಾಪಕ

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ

ಚಿಕ್ಕಬಳ್ಳಾಪುರದಲ್ಲಿ ಅಡುಗೆ ಕಲಿ ಎಂದ ಅತ್ತೆ: ವಿಷ ಸೇವಿಸಿ ಸತ್ತ ಸೊಸೆ

ಅತ್ತೆ ಅಡುಗೆ ಕಲಿ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ನೊಂದುಕೊಂಡ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಅತ್ತೆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ 18 ವರ್ಷದ ಯುವತಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡವಳು. ಕೆಲವು ತಿಂಗಳ ಹಿಂದೆಯಷ್ಟೇ

ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಬಾಲಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ

ಪ್ರಕರಣದಲ್ಲಿ ಬಿ ರಿಪೋರ್ಟ್‌ಗಾಗಿ ಲಂಚ: ಪೊಲೀಸರಿಬ್ಬರು ಲೋಕಾಯುಕ್ತ ಬಲೆಗೆ

ಜಮೀನು ವಿವಾದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಬಂಧಿತ ಆರೋಪಿಗಳು. ಮೊಟ್ಲೂರು ಗ್ರಾಮದ ರಘು ಎಂಬವರ ಜಮೀನು ವಿವಾದಕ್ಕೆ ಸಂಬಂಧಿಸಿದ

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಅಕ್ರಮ ಸಂಬಂಧ ಹೊಂದಿರುವ ಪತ್ನಿ ಮೇಲೆ ಶಂಕೆ

ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ