Menu

ಟ್ರಾಫಿಕ್‌ ರೂಲ್ಸ್‌ ಉಲ್ಲಂಘನೆ: ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ

ಹೆಲ್ಮೆಟ್ ಧರಿಸದೆ ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ ಅಂಡ್‌ ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯವು ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ ವಿಧಿಸಿದೆ. ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್‌ ನು ಸಾಕಷ್ಟು ಸಲ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದ. ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಕ್ಕೆ ಕೋರ್ಟ್ ಹೀಗೆ ಕಮ್ಯುನಿಟಿ ಸರ್ವಿಸ್‌ನ ವಿಭಿನ್ನ ಶಿಕ್ಷೆ ನೀಡಿದೆ. ಮಾ.17ರಂದು

ಮುತ್ತೋಡಿ ಅರಣ್ಯದಲ್ಲಿ ವ್ಯಾಪಿಸುತ್ತಿರುವ ಕಾಡ್ಗಿಚ್ಚು: ಜೀವ ಸಂಕುಲಕ್ಕೆ ಸಂಚಕಾರ

ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಲ್ಲಿನ ಜೀವ ಸಂಕುಲಕ್ಕೆ ಸಂಚಕಾರ ಬಂದಿದೆ. ಅಪರೂಪದ ಅರಣ್ಯ ಸಂಪತ್ತು, ಜೀವರಾಶಿ ಬೆಂಕಿಗೆ ಆಹುತಿಯಾಗುವ ಅಪಾಯ ಎದುರಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು, ಮುತ್ತೋಡಿ ಅರಣ್ಯ

ರಂಭಾಪುರಿ ಮಠದ ಭವನಕ್ಕೆ ಐದು ಕೋಟಿ ರೂಪಾಯಿ: ಡಿಕೆ ಶಿವಕುಮಾರ್

“ರಂಭಾಪುರಿ ಶ್ರೀಗಳು ನಿಂತು ಹೋಗಿದ್ದ ಭವನಕ್ಕೆ ನೀವು ಸಹಾಯ ಮಾಡಬೇಕು ಎಂದು ಹೇಳಿದ್ದರು. ನಾನು ಈ ಹಿಂದೆ ಸ್ವಲ್ಪ ಅಡಚಣೆಗಳಿವೆ ಎಂದು ತಡೆಯಲು ಹೇಳಿದ್ದೆ. ಈಗ ಸಮಯ ಒದಗಿ ಬಂದಿದೆ. ಐದು ಕೋಟಿ ರೂಪಾಯಿ ನೀಡಲಾಗುವುದು‌. ನಾನೇ ಖುದ್ದಾಗಿ ಬಂದು ಅದನ್ನು

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿದೆ. ತೋಟದಲ್ಲಿ ಅವರು ನಡೆದುಕೊಂಡು ಹೋಗುತ್ತಿರುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕಾಡಾನೆಯ ಈ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್

ಟಿವಿ ನೋಡೋದು ಕಮ್ಮಿ ಮಾಡು ಅಂದಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸುಸೈಡ್‌

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಸರಿಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದಲ್ಲಿ ಟಿವಿ ನೋಡೋದನ್ನು ಕಮ್ಮಿ ಮಾಡು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವೇಲ್​ನಿಂದ ನೇಣು ಬಿಗಿದುಕೊಂಡು ಸುಪ್ರಿತಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗುರುತಿಸಲಾಗಿದೆ. ಬಾಲಕಿ

ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಸ್ಥಳೀಯರಿಂದ ಹಲ್ಲೆ

ಚಿಕ್ಕಮಗಳೂರಿನ ಗಾಂಧಿನಗರದಲ್ಲಿ  ಒಂಟಿಯಾಗಿರುವ ವಿವಾಹಿತ ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಶರೀಫ್ ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಮಹಿಳೆಯ ಮನೆಗೆ ರಾಹಿಲ್

ಜಾತಕ ತೋರಿಸಲು ಹೋದರೆ ರೇಪ್‌: ಮೂಡಿಗೆರೆಯಲ್ಲಿ ಅರ್ಚಕನ ಬಂಧನ

ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣರಾವ್

ತರೀಕೆರೆಯಲ್ಲಿ ಮದುವೆಗೆ ಮೊದಲೇ ತಾಯಿಯಾದ ಮೊಮ್ಮಗಳು: ಹುಟ್ಟಿದ ಕೂಡಲೇ ಮಗು ಸಾಯಿಸಿದ ಅಜ್ಜಿ

ಚಿಕ್ಕಮಗಳೂರು ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಸಾಯಿಸಿರುವ ಘಟನೆ ಬಹಿರಂಗಗೊಂಡಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ ಮರ್ಯಾದೆ ಹೋಗುವುದೆಂಬ ಭಯಕ್ಕೆ

ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್‌: ಆರೋಪಿ ಅರೆಸ್ಟ್‌

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಸಕಿಯ ಬಟ್ಟೆ ಬಗ್ಗೆ ನಿರಂತರ ಅಶ್ಲೀಲ ಕಾಮೆಂಟ್‌ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ

ಮೂಡಿಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಮಗನ ಕಡಿದು ಕೊಂದ ತಂದೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಅಪ್ಪನೇ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರದೀಪ್ ಆಚಾರ್ (29) ಕೊಲೆಯಾದವರು. ರಮೇಶ್ ಆಚಾರ್ ಮಗನ ಕೊಲೆಗೈದಿರುವ ತಂದೆ. ಕ್ಷುಲಕ ಕಾರಣಕ್ಕೆ ಕುಡಿದು ಅಪ್ಪ-ಮಗ ಆಗಾಗ ಮನೆಯಲ್ಲಿ