Menu

ಚಿಕ್ಕಮಗಳೂರಲ್ಲಿ ಮಗಳು ಸೇರಿ ಮೂವರಿಗೆ ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ಸಮೀಪದ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಕೊಲೆಯಾದವರು. ಮಾಗಲು ಗ್ರಾಮದ ರತ್ನಾಕರ್ ಎಂಬವನು ನಾಡಬಂದೂಕಿನಿಂದ ಮೂವರನ್ನು ಹತ್ಯೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರತ್ನಾಕರ್ ಹೆಂಡತಿ ಬಿಟ್ಟು ಹೋಗಿದ್ದರಿಂದ ಮನನೊಂದಿದ್ದ. ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ

ತೀರದ ವರದಕ್ಷಿಣೆ ದಾಹಕ್ಕೆ ಮಗಳು ಬಲಿ: ಚಿಕ್ಕಮಗಳೂರು ಪೋಷಕರ ಆರೋಪ

ನಾಲ್ಕು ವರ್ಷದ ಹಿಂದೆ 110 ಗ್ರಾಂ ಚಿನ್ನ ನೀಡಿ ಅದ್ಧೂರಿಯಾಗಿ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟರೂ ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರೇ ಮಗಳ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ನಾಟಕವಾಡಿ ಕೊಂದಿರುವುದಾಗಿ ಚಿಕ್ಕಮಗಳೂರಿನ ಪೋಷಕರು ಆರೋಪಿಸಿದ್ದಾರೆ. ಗಂಡನ

ಜೈಲಿನಲ್ಲಿ ಜಾಮರ್‌: ವೈದ್ಯರ ಸಂಪರ್ಕ ಸಿಗದೆ ಸಾವು ಬದುಕಿನ ಹೋರಾಟ ನಡೆಸಿದ ಚಿಕ್ಕಮಗಳೂರು ರೋಗಿ

ಮಂಗಳೂರಿನ ಜೈಲಿನಲ್ಲಿ ನೆಟ್ವರ್ಕ್ ಜಾಮರ್ ಅಳವಡಿಸಿರುವುದರಿಂದ ವೈದ್ಯರ ಸಂಪರ್ಕ ಸಾಧ್ಯವಾಗದೆ ಚಿಕ್ಕಮಗಳೂರಿನ ರೋಗಿ ಸಾವು ಬದುಕಿನ ನಡುವೆ ಹೋರಾಡಬೇಕಾಯಿತು. ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಮಂಗಳೂರಿನ ಹೃದಯ ಭಾಗ ಕೊಡಿಯಾಲಬೈಲ್‌ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ

ಚಿಕ್ಕಮಗಳೂರಿನಲ್ಲಿ ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕುವಾಗ ಬೆನ್ನುಮೂಳೆ ಘಾಸಿಯಾಗಿ ಯುವಕ ಸಾವು

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೊಡಗಿನ ಕುಶಾಲನಗರದಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ಯುವಕ. ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮಹಿಳೆ ಬಲಿ

ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಬಾಧಿತ ಮಹಿಳೆಯೊಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65) ಮೃತ ಮಹಿಳೆ. ಆಕೆ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ಮಠ ಜಾಗ ತೆರವುಗೊಳಿಸಿದ ಮಸೀದಿ ಸದಸ್ಯರು, ಬಿಗುವಿನ ವಾತಾವರಣ, ಪೊಲೀಸ್‌ ಬಂದೋಬಸ್ತ್‌

ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಬಡಾಮಕಾನ್ ಜಾಮೀಯ ಮಸೀದಿ ಕಮಿಟಿಯ ಸದಸ್ಯರು

ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ

ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನಕಾಯಿಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿಯಾಗಿದೆ. ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಈ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎನ್​ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲಿ ಮೂರು ಜನರಲ್ಲಿ ಕೆಎಫ್​ಡಿ ಕಾಣಿಸಿಕೊಂಡಿದ್ದು,

ಚಿಕ್ಕಮಗಳೂರಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್‌ ಘೋಷಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿಯ ಹವಾಮಾನ ವೈಪರೀತ್ಯದಿಂದಲೂ ಜನರ ಆರೋಗ್ಯ ಹದಗೆಡುತ್ತಿರುವ ಮಧ್ಯೆ ಮಂಗನ ಕಾಯಿಲೆ ಜನರ ನಿದ್ದೆಗೆಡಿಸಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ

ದರ್ಗಾ ಜಾಗದಲ್ಲಿ ಕಾಮಗಾರಿಯಿಂದ ಕಾವೇರಿದೆ ಚಿಕ್ಕಮಗಳೂರು

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಖಾಲಿ ಜಾಗದಲ್ಲಿ ನೂತನ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದರ್ಗಾಕ್ಕೆ ದಾನ ನೀಡಿರುವ ಜಾಗದಲ್ಲಿ ನೂತನ ಕಾಮಗಾರಿ ನಡೆಸಬಾರದು ಎಂದು