ಚಿಕ್ಕಮಗಳೂರು
ಬ್ಯಾಂಕಲ್ಲಿ ಚಿನ್ನ ಅಡವಿಟ್ಟು ಹಣ ಜಮೆಯಾದ ಕೂಡಲೇ ಎಗರಿಸಿದ ಸೈಬರ್ ವಂಚಕರು
ಚಿನ್ನವನ್ನು ಬ್ಯಾಂಕ್ನಲ್ಲಿ ಅಡವಿಟ್ಟು ಖಾತೆಗೆ ಹಣ ಜಮೆ ಮಾಡಿ ಹೊರ ಬರುವಷ್ಟರಲ್ಲಿ ಸೈಬರ್ ವಂಚಕರು ಆ ಹಣವನ್ನು ಎಗರಿಸಿರುವ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ. ವಕೀಲರೊಬ್ಬರು ಬ್ಯಾಂಕ್ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದು ಬ್ಯಾಂಕ್ನಿಂದ ಹೊರಬರುವ ಮೊದಲೇ ಅವರ ಖಾತೆಯಿಂದ 99,584 ರೂಪಾಯಿಯನ್ನು ಸೈಬರ್ ವಂಚಕರು ಎಗರಿಸಿದ್ದಾರೆ. ಅವರಿಗೆ ಯಾವುದೇ ಒಟಿಪಿ ಬಂದಿಲ್ಲ, ಎಪಿಕೆ ಲಿಂಕ್ ಬಂದಿಲ್ಲ. ಆದರೆ ಹಣವನ್ನು ವಂಚಕರು ಲಪಟಾಯಿಸಿದ್ದಾರೆ. ಅಮೆಜಾನ್
ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು
ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ
ಕಡೂರಿನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಎಸ್ಐ ಪತ್ನಿ ಆತ್ಮಹತ್ಯೆ
ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರಲ್ಲಿ ಕೌಟುಂಬಿಕ ಕಲಹದಿಂದ ನೊಂದು ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್ರವರ ಪತ್ನಿ ಪದ್ಮಾ (34) ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್- ಪದ್ಮಾ ಪ್ರೀತಿಸಿ
ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಆಮಿಷ: ಕಡೂರು ರೈತರಿಗೆ 1.35 ಕೋಟಿ ರೂ. ವಂಚನೆ
ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆಸರ್ಕಾರಿ ಇಲಾಖೆಗಳಿಂದ ರಿಯಾಯಿತಿ ದರದಲ್ಲಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಉಪಕರಣಗಳನ್ನು ಕೊಡಿಸುವುದಾಗಿ ರೈತರನ್ನು ನಂಬಿಸಿ 1,34,98,400 ರೂಪಾಯಿ ಪಡೆದು ವಂಚಿಸಿರುವ ಪ್ರಕರಣ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈ.
ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು
ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು. ಈಗ ನನ್ನ
ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಕೇರಳ ಬಾಲಕಿ ಶ್ರೀನಂದಾ ಮೃತದೇಹ ಪ್ರಪಾತದಲ್ಲಿ ಪತ್ತೆ
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. 40 ಜನರ ಪ್ರವಾಸಿ ತಂಡದಲ್ಲಿ ಕುಟುಂಬದೊಂದಿಗೆ ಚಾರಣಕ್ಕೆ ಬಂದಿದ್ದ ಆಕೆ
ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ: ಮೂಡಿಗೆರೆಯಲ್ಲಿ ಪತಿ ಶವದೊಂದಿಗೆ 10 ದಿನ ಕಳೆದ ಅಸ್ವಸ್ಥ ಪತ್ನಿ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದು, ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿ 10 ದಿನ ಕಳೆದಿದ್ದಾರೆ. ಪತಿ ಸತ್ತಿರುವುದೇ ಪತ್ನಿಗೆ ತಿಳಿದಿಲ್ಲ. 77 ವರ್ಷದ ಸಿರಿಲ್ ಮೋನಿಸ್ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಮಾನಸಿಕ ಅಸ್ವಸ್ಥ ಪತ್ನಿಯು ಪತಿ
ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿನಿ ನಾಪತ್ತೆ
ಚಿಕ್ಕಮಗಳೂರು ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದಾಳೆ. 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನ ನಾಪತ್ತೆಯಾಗಿರುವಾಕೆ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ ಚಂದ್ರದ್ರೋಣ ಸಾಲಿನಲ್ಲಿ ವೀಕ್ಷಣೆಗೆ
ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಹೋಗಿದ್ದ ಟೆಕ್ಕಿ ಭದ್ರಾ ನದಿ ಪಾಲು
ಚಿಕ್ಕಮಗಳೂರು ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ವ್ಯಕ್ತಿ ಅಭಿಷೇಕ್ (27)ಗದಗದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಭಿಷೇಕ್ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಇತರ




