Menu

ಕೃಷಿ, ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿದ ನಾಯಕ ಹೆಚ್‌. ಹನುಮಂತಪ್ಪ: ಸಿಎಂ 

ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಚಿತ್ರದುರ್ಗದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಮಾಧ್ಯಮಗಳ ಜತೆ ಮಾತನಾಡಿದರು.  1979ರಿಂದ ನಾನು ಹೆಚ್ ಹನುಮಂತಪ್ಪ ಅವರ ಜೊತೆ ಒಡನಾಟ ಇಟ್ಟುಕೊಂಡಿದ್ದೆ. ನಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಅಕ್ಕಪಕ್ಕದ ರೂಮ್ ಗಳಲ್ಲೇ

ಚಿತ್ರದುರ್ಗದ ಮಾಜಿ ಸಂಸದ ಎಚ್. ಹನುಮಂತಪ್ಪ ನಿಧನ

ಚಿತ್ರದುರ್ಗದ ಮಾಜಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರು ಹಾಗೂ ಪರಿಶಿಷ್ಟ ಸಮುದಾಯದ ನಾಯಕ ಎಚ್. ಹನುಮಂತಪ್ಪ ಭಾನುವಾರ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ  ಕಾರಣ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಆರೋಗ್ಯ ಬಿಗಡಾಯಿಸಿದ್ದು,

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಭಾವನ ಕೊಲೆ ಮಾಡಿಸಿದ ನಾದಿನಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಭಾವನನ್ನು ನಾದಿನಿಯೇ ಕೊಲೆ ಮಾಡಿಸಿರುವ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ.  ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿ ಶಿವಮೂರ್ತಿ (49)

ಭದ್ರಾ ಮೇಲ್ದಂಡೆ ಯೋಜನೆ 2028ಕ್ಕೆ ಪೂರ್ಣ, ಆಗಸ್ಟ್‌ನಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ಪ್ರಾಯೋಗಿಕ ಚಾಲನೆ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು

ಚಳ್ಳಕೆರೆ ಮತದಾರರ ಗುರುತಿನ ಚೀಟಿಯಲ್ಲಿ ಪಡಿತರ ಚೀಟಿ ಫೋಟೊ: ಸಾರ್ವಜನಿಕರ ಆಕ್ರೋಶ

  ಚಳ್ಳಕೆರೆಯಲ್ಲಿ  ಮತದಾರರ ಗುರುತಿನ ಚೀಟಿಯಲ್ಲಿ ಮತದಾರನ ಭಾವಚಿತ್ರದ ಬದಲು ಪಡಿತರ ಚೀಟಿಯಲ್ಲಿನ ಕುಟುಂಬದ ಫೋಟೊ ಮುದ್ರಿಸಿದ್ದು,  ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಚಳ್ಹಳಕೆರೆ ಳೇ ಟೌನ್ ನಿವಾಸಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಗುರುತಿನ ಚೀಟಿ ಪಡೆಯುವ

ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು

ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.  ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ

ಚಿತ್ರದುರ್ಗದಲ್ಲಿ ಕಾರು ಟೈರ್‌ ಸ್ಫೋಟಗೊಂಡು ಐವರ ಸಾವು

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್‌ ಮೃತಪಟ್ಟವರು.

ಚುನಾವಣಾ ಲಕ್ಷ್ಮಿಯಾಗಿ ಬದಲಾದ ಗೃಹಲಕ್ಷ್ಮೀ

ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ

ಚಳ್ಳಕೆರೆಯಲ್ಲಿ ಶಿಕ್ಷಕನಿಂದ ಅತ್ಯಾಚಾರ, ಬಾಲಕಿಗೆ ಗರ್ಭಪಾತ: ಶಿಕ್ಷಕ, ವೈದ್ಯೆ ವಿರುದ್ಧ ಪೋಕ್ಸೊ ದಾಖಲು

ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ

ಅಪಪ್ರಚಾರಕ್ಕೆ ನೊಂದು ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಾಧ್ಯಾಪಕರೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ನಡೆಸಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ