ಚಿತ್ರದುರ್ಗ
ಚಳ್ಳಕೆರೆಯಲ್ಲಿ ಶಿಕ್ಷಕನಿಂದ ಅತ್ಯಾಚಾರ, ಬಾಲಕಿಗೆ ಗರ್ಭಪಾತ: ಶಿಕ್ಷಕ, ವೈದ್ಯೆ ವಿರುದ್ಧ ಪೋಕ್ಸೊ ದಾಖಲು
ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಶಿಕ್ಷಕ ಹೆಚ್.ಒ. ರಾಜಣ್ಣ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕಿ ಗರ್ಭ ಧರಿಸಿದ
ಅಪಪ್ರಚಾರಕ್ಕೆ ನೊಂದು ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಿತ್ರದುರ್ಗ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಾಧ್ಯಾಪಕರೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ನಡೆಸಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್ನ ಮನೆಯಲ್ಲಿ
ಬೆಸ್ಕಾಂ ಚಿತ್ರದುರ್ಗ ವ್ಯಾಪ್ತಿಯಲ್ಲಿ ನಾಳೆಯಿಂದ ಮಾರ್ಚ್ 25ರ ವರೆಗೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ವ್ಯಾಪ್ತಿಯ ಚಿತ್ರದುರ್ಗ ಮತ್ತು ಕೋಲಾರ ಸೇರಿ ಹಲವೆಡೆ ನಾಳೆಯಿಂದ ಮಾರ್ಚ್ 25ರ ವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಕಡಿತಗೊಳ್ಳುತ್ತಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ನಿರ್ವಹಣಾ ಕಾಮಗಾರಿಗಳು ಮತ್ತು ಹೆಚ್ಟಿ ರೀಕಂಡಕ್ಟರಿಂಗ್ ಕಾರಣ
ಗಂಡ ಹೆಂಡತಿ ಜಗಳ ಬಿಡಿಸಲು ಹೋದಾತ ಮಚ್ಚಿನೇಟಿಗೆ ಬಲಿ
ಕೌಟುಂಬಿಕ ಕಲಹದ ಹಿನ್ನೆಲೆ ಗಂಡ ಹೆಂಡತಿಯ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಮಚ್ಚಿನೇಟು ಬಿದ್ದು ಪ್ರಾಣ ಹೋಗಿರುವ ಘಟನೆ ಚಿತ್ರದುರ್ಗದ ಬುದ್ಧ ವೃತ್ತದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸ್ಟೇಡಿಯಂ ರಸ್ತೆಯಲ್ಲಿನ ಬುದ್ಧ ವೃತ್ತದಲ್ಲಿ ಸಾಧಿಕ್ವುಲ್ಲಾ ಎಂಬಾತ ಪತ್ನಿಯೊಂದಿಗೆ ನಡುರಸ್ತೆಯಲ್ಲಿ ಜಗಳವಾಡುತ್ತಿದ್ದ.
ಡಿಸಿ ಡಿಜಿಟಲ್ ಸಹಿ ದುರುಪಯೋಗ, ನಕಲಿ ಬಿಲ್: ಚಿತ್ರದುರ್ಗದಲ್ಲಿ ಐವರ ಬಂಧನ
ಜಿಲ್ಲಾಧಿಕಾರಿ ಮತ್ತು ಎಡಿಸಿ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಡಿ ಚಿತ್ರದುರ್ಗ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು,
ಮಂತ್ರಾಲಯದಿಂದ ವಾಪಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ: ಮೂವರ ಸಾವು
ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್ನ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು ಕುಣಿಗಲ್ಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ
ಚಳ್ಳಕೆರೆ ಪ್ರವಾಸಿ ಮಂದಿರ ಸರ್ಕಾರಿ ಅಧಿಕಾರಿಗಳ ಖಾಯಂ ನಿವಾಸ ಆಯ್ತಾ?
*ರಘುನಾಗ್. ಎಂ – ಉದಯಕಾಲ ವಿಶೇಷ ಚಳ್ಳಕೆರೆ ತಾಲೂಕಿನ ಪ್ರವಾಸಿ ಮಂದಿರವನ್ನು ಇತ್ತೀಚೆಗೆ ಕೆಲವು ಸರ್ಕಾರಿ ಅಧಿಕಾರಿಗಳು ಸ್ವಂತ ಮನೆಯಂತೆ ಮಾಡಿಕೊಂಡು, ಅಧಿಕಾರ ವಹಿಸಿಕೊಂಡ ನಂತರವೂ ಬಿಟ್ಟು ಕದಲದೆ ವಾಸಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ
ಚಿತ್ರದುರ್ಗದ ಶಾಲೆಯಲ್ಲಿ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗದ ಭರಮಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸತಿ ಶಾಲೆಯ ಎಸ್ಎಲ್ಎಲ್ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡವ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿಯವನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆತ 3ನೇ ಮಹಡಿಯಿಂದ
ಸಿರಿಗೆರೆ ಮಠದ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧ ಪ್ರಕರಣ
ಚಿತ್ರದುರ್ಗ: ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಅಧೀನದಲ್ಲಿರುವ ಸಿರಿಗೆರೆಯ ಶ್ರೀ ನೀಲಾಂಬಿಕಾ ಬಾಲಿಕಾ ಪ್ರೌಢಶಾಲೆಯ ಆರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಎಂ. ರಂಗಣ್ಣ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆರೋಪಿ ಎಂ.ರಂಗಣ್ಣ ಸಿರಿಗೆರೆಯ
ಶ್ರೀ ಮಾದಾರ ಚನ್ನಯ್ಯ ಗುರುಪೀಠ ಆವರಣದಲ್ಲಿ ಶ್ರೀ ಮಾತಂಗೇಶ್ವರಿ ದೇಗುಲಕ್ಕೆ ಭೂಮಿ ಪೂಜೆ
ಚಿತ್ರದುರ್ಗನಗರ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುವ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇಗುಲದ ಭೂಮಿ ಪೂಜೆಯನ್ನು ಸಂಸದರಾದ ಮೈಸೂರಿನ ಯದುವೀರ ಕೃಷ್ಣದತ್ತ ಒಡೆಯರ್ ನೆರವೇರಿಸಿದರು. ಬಳಿಕ ಮಾತನಾಡಿದ ಯದುವೀರ್, ಮಠದ ಆಶ್ರಯದಲ್ಲಿ ದೇವಾಲಯ ನಿರ್ಮಾಣ ಮಾಡುತ್ತಿರುವುದು




