Menu

ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್​ನೋಟ್​​ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆ ಪೆಟಲ್ಸ್‌ ಗರ್ಲ್ಸ್‌ ಪಿಜಿಯಲ್ಲಿ ವಾಸವಿದ್ದಳು. ಪಿಜಿಯ 3ನೇ ಮಹಡಿಯಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡ್ಕೊಂಡಿದ್ದಾಳೆ. “ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ ಅಪ್ಪ. ನೀವು

ತಂಗಿಯ ಆರತಕ್ಷತೆ ಸಂಭ್ರಮದಲ್ಲಿದ್ದ ಯುವಕರಿಬ್ಬರು ಬೇಲೂರಿನಲ್ಲಿ ಅಪಘಾತಕ್ಕೆ ಬಲಿ

ಬೇಲೂರು ತಾಲೂಕಿನ ಮುತ್ತಗನ್ನೆ ಗ್ರಾಮದ ಬಳಿ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಬೇಲೂರು ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25),‌ ಚಿಕ್ಕಮಗಳೂರು ಮೇನಹಳ್ಳಿ ಗ್ರಾಮದ ಕಿರಣ್ (32) ಮೃತಪಟ್ಟ ಯುವಕರು. ಗುರುವಾರ (ಇಂದು) ಲೋಕೇಶ್ ತಂಗಿ

ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

ಹಾಸನ:ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಂಬಿಹಳ್ಳಿಯ ಗೋಪಾಲ್ (27), ದೀಪು (24) ಎಂದು ಮೃತಪಟ್ಟ ದಂಪತಿಯನ್ನು ಗುರುತಿಸಲಾಗಿದೆ ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು.

ಬೇಲೂರಿನ ಮನೆಯೊಂದರಲ್ಲಿ ಮಹಿಳೆಯ ನಗ್ನ ಶವ ಪತ್ತೆ

ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ಮಹಿಳೆಯ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ. ಈ ಮಹಿಳೆ ಪತಿಯಿಂದ ದೂರಾಗಿ ಎಂಟು ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು

ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ

ಅರಕಲಗೂಡಿನಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಸಾವು

ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ

ಹಾಲುಮತದವರು ಅವರಾಗಿಯೇ ಪದತ್ಯಾಗ ಮಾಡಬೇಕು, ಬಲವಂತ ಸಾಧ್ಯವಿಲ್ಲ ಎಂದ ಕೋಡಿಮಠದ ಶ್ರೀ

ಹೋದ ಸಲ ಐದು ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವವಿದೆ, ಅಧಿಕಾರ ಬಂದರೆ, ವಾಪಸ್ ತೆಗೆದುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ

ಹಾಸನಾಂಬೆ ದರ್ಶನ ಪಡೆದು ವಾಪಸಾಗುತ್ತಿದ್ದ ಮೂವರು ಅಪಘಾತಕ್ಕೆ ಬಲಿ

ಹಾಸನಾಂಬೆಯ ದರ್ಶನ ಪಡೆದುಕೊಂಡು ವಾಪಸಾಗುತ್ತಿದ್ದ ಎರಡು ಬೈಕ್‌ಗಳಿಗೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಅಸು ನೀಗಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ

ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ: ನಾಳೆಯಿಂದ ಮೂರು ದಿನಗಳ ಕಾರ್ಯಕ್ರಮ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್‌ 21,

ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ  ಅಕ್ಟೋಬರ್‌ 18,