Menu

ಎಫ್‌ಡಿ ಮೇಲೆ ಸಾಲ ಕೊಡಿಸೋದಾಗಿ ಗ್ರಾಹಕರಿಗೆ ಮೂರು ಕೋಟಿ ವಂಚಿಸಿದ ಮ್ಯಾನೇಜರ್‌

ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್ ಮ್ಯಾನೇಜರ್‌ ನಿಗದಿತ ಠೇವಣಿ ಮೇಲೆ ಸಾಲ‌ ಕೊಡಿಸುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಗ್ರಾಹಕರಿಂದ ಮೂರು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಬ್ಯಾಂಕ್​ ಮ್ಯಾನೇಜರ್ ಹೆಚ್​​.ಎಸ್​.ಪೂಜಾ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾಗೆ ದೂರು ನೀಡಲಾಗಿದೆ. ಎಫ್​ಡಿ ಇಡುವಂತೆ ಹೇಳಿ ಕೋಟ್ಯಂತರ ಹಣ ಸಮೇತ ಮ್ಯಾನೇಜರ್​​ ನಾಪತ್ತೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬ್ಯಾಂಕ್​​ನಲ್ಲಿ ಎಫ್ಡಿ ಇಟ್ಟರೆ 25

ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿದ್ದ 18 ಮಂದಿಯ ರಕ್ಷಣೆ

ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿ ದುಡಿಯುತ್ತ ಶೆಡ್‌ನಲ್ಲಿ ಅಕ್ರಮವಾಗಿ ಬಂಧಿತರಾಗಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗ ಈರಣ್ಣನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮವೊಂದಕ್ಕೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ

ಹೆಲ್ಮೆಟ್‌ ಧರಿಸದೆ ಗೆಳತಿಯರ ಬುಲೆಟ್‌ ಜಾಲಿ ರೈಡ್‌: ಹಂಪ್ಸ್‌ನಲ್ಲಿ ಬಿದ್ದು ಒಬ್ಬಾಕೆ ಸಾವು

ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಯುವತಿಯರಿಬ್ಬರು ಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ನಲ್ಲಿ ಜಾಲಿ ರೈಡ್‌ ಮಾಡುತ್ತಿದ್ದಾಗ ಹಂಪ್ಸ್‌ನಲ್ಲಿ ಹಾರಿ ಬಿದ್ದು ಒಬ್ಬಾಕೆ ಮೃತಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೆ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಸತ್ಯಮಂಗಲ

ಹಾಸನ ಕಾರ್ಖಾನೆಯ ಸಂಪ್‌ನಲ್ಲಿ ಉದ್ಯೋಗಿಯ ಮೃತದೇಹ ಪತ್ತೆ

ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಅಲ್ಲಿನ ಉದ್ಯೋಗಿ ಯುವಕನ ಮೃತದೇಹ ಪತ್ತೆಯಾಗಿದೆ. ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಪುನೀತ್ (27) ಮೃತ ಯುವಕ. ಬುಧವಾರ ಸಮವಸ್ತ್ರ ಧರಿಸಿ ಪುನೀತ್‌

ಹಾಸನದಲ್ಲಿ ಎರಡು ಎಕರೆ ಆಸ್ತಿ ವಿವಾದ: ದಾಯಾದಿಗಳಿಂದ ವ್ಯಕ್ತಿ ಕೊಲೆ

ಹಾಸನದ ಆಲೂರು ತಾಲೂಕಿನ ರಾಜನಹಳ್ಳಿ ಸಮೀಪ ಎರಡು ಎಕರೆ ಆಸ್ತಿ ವಿವಾದ ತಾರಕಕ್ಕೆ ಏರಿ, ಕೋರ್ಟ್‌ ಮೆಟ್ಟಿಲೇರಿದ್ದ ವ್ಯಕ್ತಿಯನ್ನು ದಾಯಾದಿಗಳು ಸೇರಿ ಹತ್ಯೆ ಮಾಡಿದ್ದಾರೆ. ಕೆಎಸ್‌ಆರ್‌ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿದ್ದ ವೀರಪ್ಪ (58) ಹತ್ಯೆಯಾದವರು. ಕೋರ್ಟ್‌ ಕೇಸ್ ಮುಗಿಸಿ ಬಂದ ಬಳಿಕ

ಮದುವೆಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆ ಪತಿಯ ಸ್ನೇಹಿತನೊಂದಿಗೆ ಪತ್ತೆ

ಮದುವೆಗೆಂದು ಬಂದಿದ್ದ ಮಹಿಳೆ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಕುಣಿಗಲ್‌ನಲ್ಲಿ ಪುರುಷನೊಬ್ಬನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತಿಯ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಆಧರಿಸಿ

ಮದುವೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಮಹಿಳೆ ಕಣ್ಮರೆ, ರೇಪ್‌ ಅಂಡ್‌ ಮರ್ಡರ್‌ ಶಂಕೆ

ಹಾಸನದಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲೆಂದು ಬಂದಿದ್ದ ಮಹಿಳೆ ಕಣ್ಮರೆಯಾಗಿರುವ ಪ್ರಕರಣ ಬೇಲೂರು ತಾಲೂಕಿನ ಕಲ್ಕೆರೆ ಬಳಿ ನಡೆದಿದೆ. ಸ್ಥಳದಲ್ಲಿ ಆಕೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿರುವುದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನ ಸೃಷ್ಟಿಸಿದೆ. ಈ ಪ್ರಕರಣದಲ್ಲಿ

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳಿಗೆ ಭೂಸ್ವಾಧೀನ: ಡಿಕೆ ಶಿವಕುಮಾರ್

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು ಅವರು ಯಗಚಿ ಜಲಾಶಯದ ಎಡದಂಡೆ ನಾಲೆಗಳ

ಹಾಸನದಲ್ಲಿ ಮಗನ ಚಿಕಿತ್ಸೆಗೆ ಸಾಲ ಪಡೆದಿದ್ದ ವೃದ್ಧ ದಂಪತಿ: ಮರು ಪಾವತಿಸಿಲ್ಲವೆಂದು ಮನೆ, ಕೊಟ್ಟಿಗೆಗೆ ಬೀಗ ಜಡಿದ ಫೈನಾನ್ಸ್‌

ತೆಗೆದುಕೊಂಡಿರುವ ಸಾಲ ಮರು ಪಾವತಿಸಿಲ್ಲವೆಂದು ಖಾಸಗಿ ಫೈನಾನ್ಸ್‌ ಸಿಬ್ಬಂದಿ ಮನೆಗೆ ಬೀಗ ಜಡಿದು ವೃದ್ಧ ದಂಪತಿಯನ್ನು ಹೊರ ಹಾಕಿರುವ ಘಟನೆಯೊಂದು ಹಾಸನದ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ. ಸಾಲ ಕಟ್ಟಿಲ್ಲ ಎಂದು ಸಣ್ಣಯ್ಯ(80), ಜಯಮ್ಮ(75)ಅವರನ್ನು ಫೈನಾನ್ಸ್​​ ಸಿಬಂದಿ ಹೊರಹಾಕಿದ್ದು, ಅವರಿಬ್ಬರೂ

ಅರಸೀಕೆರೆ ಅಂಗಡಿಯಲ್ಲೇ ಕುಸಿದು ವ್ಯಾಪಾರಿ ಸಾವು

ಹಾಸನದ ಅರಸೀಕೆರೆ ಪಟ್ಟಣದ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಅಟೊಮೊಬೈಲ್