ಹಾಸನ
Heart Attack: ಹಾಸನದಲ್ಲಿ ಪದವಿ ವಿದ್ಯಾರ್ಥಿನಿ ಕುಸಿದು ಸಾವು
ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಮೃತ ಯುವತಿ ೨೧ ವರ್ಷದ ಕವನ ಅಂತಿಮ ವರ್ಷದ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ರಾಜ್ಯದಲ್ಲಿ ಇತ್ತೀಚೆಗೆ ಯುವ ಸಮೂಹದಲ್ಲಿ ಹೃದಯಾಘಾತದಿಂದ ಸಾವಿನ ಸಂಖ್ಯೆ ವರದಿಯಾಗುತ್ತಲೇ ಇದೆ. ನಿಂತಲ್ಲ, ಕುಳಿತಲ್ಲಿ, ಕರ್ತವ್ಯದಲ್ಲಿ, ನೃತ್ಯದಲ್ಲಿ ತೊಡಗಿರವಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಸುದ್ದಿಗಳು ಆತಂಕ ಹುಟ್ಟಿಸುತ್ತವೆ. ಈ ಪಟ್ಟಿಗೆ ಹಾಸನದ ಪದವಿ ಓದುತ್ತಿರುವ ಯುವತಿ ಕೂಡ ಸೇರಿದ್ದಾಳೆ.
ಸಕಲೇಶಪುರದಲ್ಲಿ ಮಳೆಯಿಂದ ರಸ್ತೆ ಕಾಣದೆ ಡಿವೈಡರ್ಗೆ ಕಾರು ಡಿಕ್ಕಿ: ಯುವಕರಿಬ್ಬರ ಸಾವು
ಹಾಸನ ಜಿಲ್ಲೆಯ ಸಕಲೇಶಪುರದ ಬಾಗೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ರಸ್ತೆ ಕಾಣದೆ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಅಸು ನೀಗಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಶರತ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ
ಹಾಸನದಲ್ಲಿ ವರ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆಯೇ ಪ್ರಿಯಕರನ ಕರೆ, ಹೊರ ನಡೆದ ವಧು
ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಜೋಡಿಯೊಂದರ ಮದುವೆಗೆ ತಯಾರಿ ನಡೆದಿದ್ದು, ವಧು, ವರರ ಕುಟುಂಬಗಳು ಮದುವೆಗೆ ಎಲ್ಲ ಸಿದ್ಧತೆ ನಡೆಸಿವೆ, ಸಾವಿರಕ್ಕೂ ಹೆಚ್ಚು ಆಪ್ತರು, ಕುಟುಂಬಸ್ಥರು ಆಗಮಿಸಿದ್ದರು. ಆದರೆ ಕೊನೆಯ ಘಳಿಗೆಯಲ್ಲಿ ಮದುವೆ ನಿಂತು ಹೋಗಿದೆ. ಹಾಸನ ತಾಲೂಕಿನ
ಬೆಂಗಳೂರಿನಲ್ಲಿ ಯುವಕ, ಹಾಸನದಲ್ಲಿ ಯುವತಿ ಕುಸಿದು ಬಿದ್ದು ಸಾವು
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡಿನ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಹತ್ತೊಂಬತ್ತು ವರ್ಷದ ಯುವಕ ಅಭಿಷೇಕ್ ಮೃತಪಟ್ಟವ ಎಂದು ಗುರುತಿಸಲಾಗಿದೆ. ಗ್ರಾಮದ ಅನಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರನಾದ
ಚನ್ನರಾಯಪಟ್ಟಣದಲ್ಲಿ 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಒತ್ತುವರಿ ತೆರವು
ಅರಣ್ಯಾಧಿಕಾರಿಗಳು ಹಾಸನದ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15
ಬೈಕ್ಗೆ ಲಾರಿ ಡಿಕ್ಕಿ: ಪೊಲೀಸ್ ಕಾನ್ಸ್ಟೇಬಲ್ ಸಾವು
ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ಚಲಿಸುತ್ತಿದ್ದ ಬೈಕ್ಗೆ ಲಾರಿ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕಾಶ್ (38) ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್. ಅವರು 1ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಕಾಶ್ ಹಾಸನ
ಹಾಸನ ನಗರಸಭೆಯಲ್ಲಿ ಅವಿಶ್ವಾಸ ನಿರ್ಣಯ: ಜೆಡಿಎಸ್ ಮುಖಭಂಗ, ಚಂದ್ರೇಗೌಡರ ಅಧ್ಯಕ್ಷಗಿರಿ ಅಭಾದಿತ
ಹಾಸನ ನಗರಸಭೆಯ ಅಧ್ಯಕ್ಷರ ಬದಲಾವಣೆಗೆ ಮುಂದಾಗಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದ್ದ ಜೆಡಿಎಸ್ ಮುಖಭಂಗ ಅನುಭವಿಸಿದೆ. ಜೆಡಿಎಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದು ಹಾಲಿ ಅಧ್ಯಕ್ಷ ಎಂ.ಚಂದ್ರೇಗೌಡ ಮತ್ತೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ. ಈ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ
ಹಾಸನದಲ್ಲಿ ಫೋಟೋಶೂಟ್ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವು
ಹಾಸನ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಫೋಟೋಶೂಟ್ ಮಾಡುತ್ತಿದ್ದ ವೇಳೆ ಯುವಕನೊಬ್ಬ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಾಗೇಂದ್ರ (19) ಮೃತ ಯುವಕ. ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಮಂಜುನಾಥ್ ಮುಗಿಸಿ ಹಾಲುವಾಗಿಲು ಬಳಿ
ಹಾಸನದಲ್ಲಿ ಹಾವನ್ನು ಕೊಂದು ಮಾಲೀಕನ ಜೀವವುಳಿಸಿ ಪ್ರಾಣ ತೆತ್ತ ನಾಯಿ
ಹಾಸನ ತಾಲೂಕಿನ ಕಟ್ಟಾಯ ಗ್ರಾಮದಲ್ಲಿ ಸಾಕು ನಾಯಿಯೊಂದು ಮನೆ ಮಾಲೀಕರು ಹಾಗೂ ಕೆಲಸಗಾರರ ಜೀವ ಉಳಿಸಲು ಪ್ರಾಣವನ್ನೇ ಪಣಕಿಟ್ಟು ಅಸು ನೀಗಿದೆ. ಸರ್ಪದ ಜತೆ ಕಾದಾಡಿದ ಪಿಟ್ಬುಲ್ ನಾಯಿಯ ಮುಖಕ್ಕೆ ಸರ್ಪ ಕಚ್ಚಿದ್ದರಿಂದ ಪ್ರಾಣ ಕಳೆದುಕೊಂಡಿದೆ. ಶಮಂತ್ ಎಂಬವರು ತೋಟದಲ್ಲಿ ಪಿಟ್ಬುಲ್
ಬೇಲೂರಿನ 3 ಕಡೆ ಆನೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ