Menu

ಹಾಸನ ಚನ್ನಕೇಶವನ ಹುಂಡಿ ಎಣಿಕೆ: ಹಣ ಕದ್ದ ವೀಡಿಯೊಗ್ರಾಫರ್‌

ಹಾಸನದಲ್ಲಿ ಚನ್ನಕೇಶವ ದೇವಾಲಯದ ಹುಂಡಿ‌ ಎಣಿಕೆ ವೇಳೆ ಹಣ ಕಳವು ಮಾಡಿರುವ ಆರೋಪದಡಿ ಪೊಲೀಸರು ವಿಡಿಯೋಗ್ರಾಫರ್ ನೀಲಕಂಠ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹುಂಡಿಕ ಎಣಿಕೆ ವೇಳೆ ವಿಡಿಯೋಗ್ರಾಫರ್ ಹಣ ಕದ್ದ ಆರೋಪವಿದ್ದು, ಇದರ ಹಿಂದೆ ಅಧಿಕಾರಿಗಳ ಪಾತ್ರ ಇದೆಯಾ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್‌ ಶ್ರೀಧರ್ ಕಂಕನವಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಳ್ಳತನ ಆಗಿರುವುದು ಪತ್ತೆಯಾಗಿದೆ. ಪ್ರವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಆರೋಪಿ

ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ (79) ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಕಾರ್ಲೆ ಎಂಬ ಊರಿನವರಾದ ಶಿವಪ್ರಸಾದ್, ಉದ್ಯಮಿ ಎಲ್. ಟಿ. ಕಾರ್ಲೆ

ಯುವತಿ ವಿಚಾರಕ್ಕೆ ಕಿರುಕುಳ: ಆಡಿಯೊ ರೆಕಾರ್ಡ್‌ ಮಾಡಿಟ್ಟು ಹಾಸನ ಯುವಕ ಸುಸೈಡ್‌

ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ. ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಗ್ರಾಮದ ಶಂಕರ, ದರ್ಶನ್,

ಮೆದುಳಿನಲ್ಲಿ ರಕ್ತಸ್ರಾವ: ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಹಾಸನದ 25 ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿ ಶ್ವೇತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಮಗಳು ಶ್ವೇತಾ(25) ಮೃತಪಟ್ಟವರು. ಆಕೆ ಹಾಸನದ ಮ್ಯಾಗ್ನಾ ಕಂಪನಿಯಲ್ಲಿ

ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು

ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ

ಗಂಡ, ಮಗು ತೊರೆದು ಕಾರಲ್ಲಿ ಪ್ರಿಯಕರನ ಮದುವೆಯಾದ ಹಾಸನದ ಮಹಿಳೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಪತಿ ಹಾಗೂ ಚಿಕ್ಕ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಪರಾರಿಯಾಗಿ ಕಾರಿನಲ್ಲೇ ಮದುವೆಯಾಗಿರುವ  ಪ್ರಕರಣ ನಡೆದಿದೆ. ಎಂಟು ವರ್ಷಗಳ ದಾಂಪತ್ಯ, ಏಳು ವರ್ಷದ ಮಗನನ್ನು ತೊರೆದು ಹರ್ಷಿತಾ ಎಂಬಾಕೆ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲೇ ಮದುವೆಯಾಗಿದ್ದಾಳೆ. ಹರ್ಷಿತಾಗೆ

ದಾರಿಗಾಗಿ ಜಗಳ: ಮಹಿಳೆಯ ಬಟ್ಟೆ ಕಳಚಿ ಹಲ್ಲೆಗೆ ಯತ್ನ

ಹಾಸನದ ಬೇಲೂರು ತಾಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ

ಮದುವೆ ಮಾಡಿಸಿಲ್ಲವೆಂದು ಹಾಸನದಲ್ಲಿ ತಾಯಿಯ ಕೊಲೆಗೈದ ಮಗ

ನಲ್ವತ್ತು ವರ್ಷ ಆಗಿದ್ದರೂ ಮದುವೆ ಮಾಡಿಸಿಲ್ಲವೆಂದು ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ, ಉಮಾಶಂಕರ್‌ (40) ತಾಯಿಯನ್ನು ಕೊಲೆ ಮಾಡಿದ ಮಗ. ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್

ಅರಸೀಕೆರೆಯಲ್ಲಿ ಜೂಜು ಅಡ್ಡೆಗೆ ಪೊಲೀಸ್‌ ದಾಳಿ: ತಪ್ಪಿಸಿಕೊಳ್ಳುವಾಗ ಬಿದ್ದು ವ್ಯಕ್ತಿ ಸಾವು

ಹಾಸನದ ಅರಸೀಕೆರೆಯ ಅರೆಕೆರೆ ಗ್ರಾಮದಲ್ಲಿ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಪ್ರವೀಣ್ (34) ಮೃತಪಟ್ಟ ವ್ಯಕ್ತಿ. ಯುಗಾದಿ ಹಬ್ಬದ ಸಂಭ್ರಮದಲ್ಲಿ ತಾವರೆಹಳ್ಳಿ ನಿರ್ಜನ ಪ್ರದೇಶದಲ್ಲಿ ಯುವಕರ

ಅರಸೀಕೆರೆಯಲ್ಲಿ ವಿಷಯುಕ್ತ ಮೇವು ತಿಂದು ಕುರಿಗಳ ಸಾವು

ಅರಸೀಕೆರೆ ತಾಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ.  ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಕುರಿಗಳು ಹೊಲಗಳ ತುಂಬೆಲ್ಲಾ