Menu

ಅತಿಯಾಗಿ ಮೊಬೈಲ್‌ ಬಳಕೆಗೆ ಆಕ್ಷೇಪಿಸಿದ್ದಕ್ಕೆ ಮನೆ ತೊರೆದ ಹಾವೇರಿ ಬಾಲಕಿಯರು ಪುಣೆಯಲ್ಲಿ ಪತ್ತೆ

ಹಾವೇರಿಯಲ್ಲಿ ಮೊಬೈಲ್‌ ಅತಿಯಾಗಿ ಬಳಸುತ್ತಿರುವುದಕ್ಕೆ ಆಕ್ಷೇಪಿಸಿ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದ ಅಪ್ರಾಪ್ತ ವಯಸ್ಕ ಅಕ್ಕತಂಗಿಯರಿಬ್ಬರು ಮನೆ ಬಿಟ್ಟು ತೆರಳಿದ್ದ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಪುಣೆಯ ರೈಲ್ವೆ ಸ್ಟೇಷನ್‌ನಲ್ಲಿ ಬಾಲಕಿಯರಿಬ್ಬರನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಮನೆಯವರಿಗೆ ಒಪ್ಪಿಸಿದ್ದಾರೆ. ಮುನಿಸಿಕೊಂಡ ಬಾಲಕಿಯರು ಮನೆಯಿಂದ ತೆರಳುವ ತೀರ್ಮಾನಕ್ಕೆ ಬಂದು ಸಹಪಾಠಿಗಳೊಂದಿಗೆ ನಾವು ಹುಬ್ಬಳ್ಳಿಗೆ ಹೋಗುತ್ತೇವೆ ಎಂದು ಹೇಳಿ ಕೇವಲ ಒಂದೆರಡು ಬಟ್ಟೆಗಳನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಮನೆಯಿಂದ ಹೊರಟಿದ್ದರು. ಬಳಿಕ ಹಾವೇರಿಯಿಂದ ದಾದರ್

Heart Attack death: ಹಾವೇರಿಯಲ್ಲಿ ಶಾಲಾ ಬಸ್‌ ಚಾಲನೆ ಮಾಡುತ್ತಿದ್ದಾಗಲೇ ಚಾಲಕ ಹೃದಯಾಘಾತಕ್ಕೆ ಬಲಿ

ಹಾವೇರಿಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ಶಾಲಾ ಬಸ್ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಆದರೆ ಅಂಥ ಸ್ಥಿತಿಯಲ್ಲೂ ಸಮಯಪ್ರಜ್ಞೆ ಮೆರೆದ ಚಾಲಕ ಮಕ್ಕಳನ್ನು ಅಪಾಯದಿಂದ ರಕ್ಷಿಸಿದ್ದಾರೆ. ಪಕ್ಕಿರೇಶ ಮಲ್ಲೇಶಣ್ಣನವರ್ (25) ಮೃತ ಚಾಲಕ. ಖಾಸಗಿ

ಮೈಸೂರಿನಲ್ಲಿ ನಡೆಯಲಿದೆ ಕಾಂಗ್ರೆಸ್‌ ಆಂತರಿಕ ಸಂಘರ್ಷದ ಶಕ್ತಿ ಪ್ರದರ್ಶನ: ಬೊಮ್ಮಾಯಿ

ಮೈಸೂರಿನಲ್ಲಿ  ಕಾಂಗ್ರೆಸ್ ನ ಅಂತರಿಕ ಸಂಘರ್ಷದ ಶಕ್ತಿಪ್ರದರ್ಶನ ಮಾಡಲು ಸಮಾವೇಶ ಮಾಡಲಾಗುತ್ತಿದೆ. ಸಮಾವೇಶ ಮಾಡುವಂಥ ಸಾಧನೆಗಳನ್ನೇನು ಕಾಂಗ್ರೆಸ್ ‌ಮಾಡಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಧನಾ ಸಮಾವೇಶದ ಹೆಸರಿನಲ್ಲಿ ಹಿಂದೆ ಹಾಸನದಲ್ಲಿ ಶಕ್ತಿ

ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ

ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ

ಗದಗದಲ್ಲಿ ಮಾಜಿ ಪ್ರೇಮಿಯಿಂದ ವೀಡಿಯೊ ವೈರಲ್‌ ಬೆದರಿಕೆ: ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್‌

ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ನಿನ್ನ ವೀಡಿಯೊ ವೈರಲ್‌ ಮಾಡುವುದಾಗಿ ಬ್ಲ್ಯಾಕ್​ ಮೇಲ್ ಮಾಡಿದ್ದಕ್ಕೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್​​ನೋಟ್​ ಬರೆದಿಟ್ಟಿದ್ದು, ಮೈಲಾರಿ

ಸೈಕಲ್‌ ಕಳ್ಳರ ಬಂಧಿಸಿದ ಪೊಲೀಸರಿಗೆ ಸಿಂಧನೂರು ಕಮಿಷನರ್‌ ಶ್ಲಾಘನೆ

21 ಮೋಟಾರ್ ಸೈಕಲ್ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿ,ಮಾಲೀಕರಿಗೆ ಮುಟ್ಟಿಸುವ ಕೆಲಸ ಸಿಂಧನೂರಿನ ಪೊಲೀಸರು ಮಾಡುತ್ತಿದ್ದಾರೆ, ಇವರ ಕೆಲಸ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಪುಟ್ಟ ಮಾದಯ್ಯ ಹೇಳಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಬಳಗನೂರ್

ಜಮಖಂಡಿಯಲ್ಲಿ ಗರ್ಭದಲ್ಲೇ ಶಿಶು ಸಾವು: ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬ ಆಕ್ರೋಶ

ಬಾಗಲಕೋಟೆಯ ಜಮಖಂಡಿಯಲ್ಲಿರುವ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭದಲ್ಲೇ ಶಿಶು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಬೇಜವಾಬ್ದಾರಿಯೇ ಕಾರಣವೆಂದು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜಮಖಂಡಿಯ ಚೌಡಯ್ಯ ನಗರದ ನಿವಾಸಿ.ಶಿವಪ್ಪ ರೇವಣಸಿದ್ದಪ್ಪ ಬೋವಿ ಅವರ ಪತ್ನಿ ಇಂದ್ರಾ ಅವರ ಗರ್ಭದಲ್ಲೇ ಮಗು ಮೃತಪಟ್ಟಿದೆ. ಇಂದ್ರಾ ಅವರನ್ನು

ಯಾರಲ್ಲಿ ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರೆಂದು ಕಂಡಕ್ಟರ್‌ಗೆ ಕುಡುಕನಿಂದ ಹಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಯಾರನ್ನು ಕೇಳಿ ಬಸ್ ಟಿಕೆಟ್‌ ದರ ಹೆಚ್ಚಿಸಿದ್ದೀರಿ ಎಂದು ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬವರ

ರೀಲ್ಸ್‌ ವ್ಯಸನದಿಂದ ಗಂಗಾವತಿಯಲ್ಲಿ ನದಿ ಪಾಲಾಗಿದ್ದ ವೈದ್ಯೆಯ ಶವ ಪತ್ತೆ

ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಬುಧವಾರ ಮುಂಜಾನೆ ಕಲ್ಲುಬಂಡೆಗಳ ಮೇಲಿಂದ ನದಿಗೆ ಜಿಗಿದ ಯುವ ವೈದ್ಯೆಯ ಶವ ಪತ್ತೆಯಾಗಿದೆ. ಮೃತ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ, ಎಂಬಿಬಿಎಸ್ ಪದವೀಧರೆ ಅನನ್ಯ ಮೋಹನ್ (26) ಎಂದು ಗುರುತಿಸಲಾಗಿದೆ. ಆಕೆ

ಕುಂಭ ಮೇಳದಿಂದ ಹೊರಟು ಕಾಶಿ ನದಿಯಲ್ಲಿ ಮುಳುಗಿ ಮೃತಪಟ್ಟ ಬಾಗಲಕೋಟೆ ವ್ಯಕ್ತಿ

ಬಾಗಲಕೋಟೆಯ ವ್ಯಕ್ತಿಯೊಬ್ಬರು ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಸತೀಶ್ ಜೋಷಿ (44) ಮೃತರು. ಸತೀಶ್‌ ಜೋಷಿ ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸು ತ್ತಿದ್ದರು. ವಾರದ ಹಿಂದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ