Thursday, January 15, 2026
Menu

ಕುಂದಗೋಳದಲ್ಲಿ ಚಾಕು ಇರಿದು ಶಾಲಾ ವಿದ್ಯಾರ್ಥಿಯ ಕೊಲೆಗೈದ ಸಹಪಾಠಿಗಳು

ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ಓದುತ್ತಿದ್ದ ಆತನನ್ನು ಅದೇ ಶಾಲೆಯ ಮೂವರು ಬಾಲಕರು ಸೇರಿ ಕೊಲೆ ಮಾಡಿದ್ದಾರೆ. ನಿಂಗರಾಜ್ ಮತ್ತು ಆತನ ಕೆಲ‌ವು ಸ್ನೇಹಿತರಿಗೆ ಎರಡು ದಿನದ ಹಿಂದೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿತ್ತು. ಸಹಪಾಠಿಯೋರ್ವ

ಧಾರವಾಡ ಕೆಸಿಡಿ ಕಾಲೇಜ್‌ ಪ್ರೊಫೆಸರ್‌ ಅಂಡಮಾನ್‌ ಪ್ರವಾಸದಲ್ಲಿ ಹೃದಯಾಘಾತಕ್ಕೆ ಬಲಿ

ಅಂಡಮಾನ್, ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಕೆಸಿಡಿ ಕಾಲೇಜ್‌ನ ಅಸಿಸ್ಟೆಂಟ್ ಪ್ರೊಫೆಸರ್‌ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅರ್ಥಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದ ಎಸ್.ಅನ್ನಪೂರ್ಣ ಮೃತಪಟ್ಟವರು. ಮೂರು ದಿನಗಳ ಹಿಂದೆ ಅನ್ನಪೂರ್ಣ ಅವರು ಕುಟುಂಬದ ಜೊತೆ ಅಂಡಮಾನ್ ನಿಕೋಬಾರ್‌ನ ಫೋರ್ಟ್‍ಬ್ಲೇರ್‌ಗೆ ಹೋಗಿದ್ದರು. ಕಳೆದ

ಮಹಿಳೆ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಸಿಎಂ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಘಟನೆಯ ಕುರಿತು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ

ಹಣಕ್ಕಾಗಿ ಹನಿಟ್ರ್ಯಾಪ್, ದೌರ್ಜನ್ಯ ವೀಡಿಯೊ ವೈರಲ್‌: ವಿವಸ್ತ್ರ ಪ್ರಕರಣದ ಬಿಜೆಪಿ ಕಾರ್ಯಕರ್ತೆಯ ಮತ್ತೊಂದು ಮುಖ

ಇತ್ತೀಚೆಗೆ  ಹುಬ್ಬಳ್ಳಿ  ಪೊಲೀಸರು ಬಂಧಿಸುವಾಗ  ವಿವಸ್ತ್ರಗೊಳಿಸಿರುವ ಆರೋಪ ಪ್ರಕರಣದಲ್ಲಿ ಸುದ್ದಿಯಾಗಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಎಂಬಾಕೆಗೆ ಸಂಬಂಧಿಸಿದ ಹಳೆಯ ವೀಡಿಯೊವೊಂದು ವೈರಲ್‌ ಆಗಿದೆ. ಆಕೆಯ ನಿಜವಾದ ಬಣ್ಣ  ಬಯಲುಗೊಳಿಸುತ್ತಿದೆ. ಸುಜಾತಾ ಹಣಕ್ಕಾಗಿ ಹನಿಟ್ರ್ಯಾಪ್ ಮಾಡುವ ದಂಧೆ ಮಾಡುತ್ತಿದ್ದು, ಸಂತ್ರಸ್ತ ಪುರುಷರ

ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್‌. ಅಶೋಕ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ  ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು  ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಪೊಲೀಸ್

ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್‌ ಲಾಡ್‌

ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ

ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಹುಬ್ಬಳ್ಳಿಯಲ್ಲಿ ದಲಿತನ ಮದುವೆಯಾದ ಸಿಟ್ಟಿಗೆ ಗರ್ಭಿಣಿ ಮಗಳ ಕೊಲೆಗೈದ ತಂದೆ

ಪ್ರೀತಿಸಿ ಮದುವೆಯಾದ ಮಗಳು ಆರು ತಿಂಗಳ ಗರ್ಭಿಣಿಯಾಗಿರುವಾಗಲೇ ತಂದೆ ಕೊಲೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಏಳು ತಿಂಗಳ ಹಿಂದೆ ಮಾನ್ಯ ಪಾಟೀಲ್ ಮತ್ತು ವಿವೇಕಾನಂದ್ ದೊಡ್ಡಮನಿ ಪ್ರೀತಿಸಿ ಮದುವೆಯಾಗಿದ್ದರು. ವಿವೇಕಾನಂದ ದೊಡ್ಡಮನಿ ದಲಿತ ಸಮುದಾಯಕ್ಕೆ ಸೇರಿದ್ದರಿಂದ ಮಾನ್ಯ ಪಾಟೀಲ್ ಕುಟುಂಬಸ್ಥರುಈ ಮದುವೆಯನ್ನು

ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ

ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್‌ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ

ಸಚಿವೆ ಹೆಬ್ಬಾಳ್ಕರ್‌ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್‌ ದುರಂತಕ್ಕೆ ಯುವಕ ಬಲಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ  ಪ್ರಾಣ  ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ