ಹುಬ್ಬಳ್ಳಿ-ಧಾರವಾಡ
ಧಾರವಾಡದಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣ: ಡಿಸಿಗೆ ಎಐಎಮ್ಎಸ್ಎಸ್ ಮನವಿ
ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣಗಳನ್ನು ಖಂಡಿಸಿ ಹಾಗೂ ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿ ಹಣದ ಬಿಡುಗಡೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್ಎಸ್ಎಸ್) ಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ. ಧಾರವಾಡ ಜಿಲ್ಲೆಯಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ಬೆಳಕಿಗೆ ಬಂದಿವೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು 1,691 ಪ್ರಕರಣಗಳು ದಾಖಲಾಗಿವೆ. ಇದು ಜನಸಾಮಾನ್ಯರಲ್ಲಿ ಆಘಾತ ಮತ್ತು ಆತಂಕವನ್ನುಂಟು ಮಾಡಿದೆ. ಹೆಣ್ಣು ಮಕ್ಕಳ
ಧಾರವಾಡ ಪಿಜಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಯಾದಗಿರಿಯ ವಿದ್ಯಾರ್ಥಿ ಧಾರವಾಡದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸ್ ಕಾನ್ಸೆಬಲ್ ಹುದ್ದೆಯ ತಯಾರಿಗೆ ಬಂದಿದ್ದ 19 ವರ್ಷದ ಮಹೇಶ ರಾಥೋಡ ವಿದ್ಯಾರ್ಥಿ ಜಯನಗರದ ಪಿ ಜಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು
ಧಾರವಾಡದಲ್ಲಿ ಅನಸ್ತೇಶಿಯಾ ತಜ್ಞನ ಕೊಲೆಗೈದ ನೇತ್ರ ವೈದ್ಯೆ ಪತ್ನಿ
ಧಾರವಾಡದ ಅಪಾರ್ಟ್ಮೆಂಟ್ನಲ್ಲಿ ಚಿರಾಯು ಆಸ್ಪತ್ರೆಯ ಅನಸ್ತೇಷಿಯಾ ತಜ್ಞ ಡಾ. ಕಿರಣ್ ಅವರನ್ನು ಕೊಲೆ ಮಾಡಲಾಗಿದ್ದು, ನೇತ್ರ ವೈದ್ಯೆಯಾಗಿರುವ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಆತನ ಸ್ಥತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ
ದಪ್ಪಗಿದ್ದಾಳೆ, ಮಗುವಾಗಲ್ಲವೆಂದು ನವಲಗುಂದದಲ್ಲಿ ಪತ್ನಿಯ ಕೊಲೆಗೈದ ಪತಿ
ದಪ್ಪಗಿದ್ದಾಳೆಂಬ ಕಾರಣಕ್ಕೆ ಪತಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ. ಪತಿ ಬಸವರಾಜ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ದಪ್ಪಗಿದ್ದಾಳೆ, ಆಕೆಗೆ ಮಗು ಆಗಲ್ಲ ಎಂದು ದೂಷಿಸುತ್ತಿದ್ದ ಪತಿ ವರದಕ್ಷಿಣೆ
ಗದಗದಲ್ಲಿ ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್ ಬಡ್ಡಿಕೋರರು: ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್
ಗದಗ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ವಾರದ ಬಡ್ಡಿ ಹಣ ನೀಡದಿದ್ದಕ್ಕೆ ಇಬ್ಬರು ಮಹಿಳೆಯರನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಮೀಟರ್ ಬಡ್ಡಿ ದಂಧಕೋರರು ಹಿಗ್ಗಾಮುಗ್ಗಾ ಥಳಿಸಿರುವ ಆರೋಪ ಕೇಳಿಬಂದಿದೆ. ದಂಧೆಕೋರರಿಂದ ತಪ್ಪಿಸಿಕೊಂಡು ಬಂದಿರುವ ಮಹಿಳೆಯರು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ
ಪತ್ನಿಯ ಕಿರುಕುಳ ಆರೋಪ: ಹುಬ್ಬಳ್ಳಿಯಲ್ಲಿ ಪತಿ ಸುಸೈಡ್
ಪತ್ನಿಯಿಂದ ಕಿರುಕುಳವೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಅಳ್ಳೂರು (39) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ಹೋಗಿದ್ದರು, ಆಕೆಯ
ತಮ್ಮ ಅಪಘಾತಕ್ಕೆ ಬಲಿಯಾದ ಸುದ್ದಿ ತಿಳಿದು ಅಕ್ಕ ಹೃದಯಾಘಾತದಿಂದ ಸಾವು
ಅನಾರೋಗ್ಯದಿಂದ ಬಳಲುತ್ತಿದ್ದ ಸೋದರಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟು ಬರುತ್ತಿದ್ದಾಗ ಬೈಕ್ ಅಪಘಾತದಲ್ಲಿ ಸಹೋದರ ಮೃತಪಟ್ಟ ಸುದ್ದಿ ಕೇಳಿದ ಅಕ್ಕ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಗದಗದ ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಹೂವಿನಹಡಗಲಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ
ಪ್ರತ್ಯೇಕ ಧಾರವಾಡ ಪಾಲಿಕೆ ರಚನೆಗೆ ರಾಜ್ಯಪಾಲರು ಅಸ್ತು
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಕೊನೆಗೂ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಯದಾಗಿ ಅದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. ಆದರೆ ರಾಜ್ಯಪಾಲರು ಅದಕ್ಕೆ ಅಂಕಿತ ಹಾಕದೇ ತಮ್ಮ ಬಳಿ
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಅನುಮೋದನೆ ನೀಡಿ: ರಾಜ್ಯಪಾಲರಿಗೆ ಸಚಿವ ಲಾಡ್ ಮನವಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಮನವಿ ಮಾಡಿದ್ದಾರೆ. ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್ ಚಂದ್
ಬಾಲಕರಿಗೆ ಲೈಂಗಿಕ ಕಿರುಕುಳ ದೂರು: ಪೊಲೀಸ್ ವಿಚಾರಣೆ, ಮೆಡಿಕಲ್ ಟೆಸ್ಟ್ಗೆ ಒಳಗಾದ ವಚನಾನಂದಶ್ರೀ
ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮಠದ ಸ್ವಾಮೀಜಿ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಅವರು ಹರಿಹರ ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾದರು. ಬಳಿಕ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಲಕ್ಷ್ಮೀಶ್ವರ ಠಾಣೆಯಲ್ಲಿ ಸಂತ್ರಸ್ತ ಬಾಲಕನ ತಾಯಿ




