ಹುಬ್ಬಳ್ಳಿ-ಧಾರವಾಡ
ಧಾರವಾಡದಲ್ಲಿ ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರ ಸುಸೈಡ್
ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಬಳಿಕ ಪ್ರಿಯಕರನೂ ಆತದ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ. ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಕರ ತರುಣ್ ಸಾಗರ್ ಕುರಕುರಿ(21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಾಚ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ತರುಣ್ ಸಾಗರ್ ದಾನೇಶ್ವರಿ ನಗರದ ಪಿಜಿಯೊಂದರಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ ಮೇಘಾ ಆತ್ಮಹತ್ಯೆ ಮಾಡಿಕೊಂಡಿದ್ದಳು
ರೀಲ್ಸ್ ನೋಡಬೇಡವೆಂದು ಬುದ್ಧಿ ಹೇಳಿದ ತಾಯಿ: ವಿದ್ಯಾರ್ಥಿನಿ ಆತ್ಮಹತ್ಯೆ
ಹೆಚ್ಚು ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ. ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ (20) ಆತ್ಮಹತ್ಯೆ ಮಾಡಿಕೊಂಡವಳು.ಮೇಘಾ
ವಿಮೆ ಸೇರಿ ರೈತರಿಗೆ ಎಲ್ಲ ಪರಿಹಾರ ನೀಡಲು ಪ್ರಯತ್ನ: ಬೆಳೆ ಹಾನಿ ಪರಿಶೀಲನೆ ಬಳಿಕ ಸಚಿವ ಲಾಡ್ ಭರವಸೆ
ಧಾರವಾಡ ಜಿಲ್ಲೆಯ ರೈತರು ಈ ಬಾರಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು,ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ.96ರಷ್ಟು, ಅಂದರೆ 2.80 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಡೆದಿದೆ. 45 ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಹೆಸರು ಹಾಗೂ ಉದ್ದು,
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು
ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. ಐದು ಲಕ್ಷ ರೂ. ಬಾಂಡ್ ಹಾಗೂ
ಧಾರವಾಡದಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣ: ಡಿಸಿಗೆ ಎಐಎಮ್ಎಸ್ಎಸ್ ಮನವಿ
ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣಗಳನ್ನು ಖಂಡಿಸಿ ಹಾಗೂ ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿ ಹಣದ ಬಿಡುಗಡೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್ಎಸ್ಎಸ್) ಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ. ಧಾರವಾಡ ಜಿಲ್ಲೆಯಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಬಾಲಗರ್ಭಿಣಿ
ಧಾರವಾಡ ಪಿಜಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಯಾದಗಿರಿಯ ವಿದ್ಯಾರ್ಥಿ ಧಾರವಾಡದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸ್ ಕಾನ್ಸೆಬಲ್ ಹುದ್ದೆಯ ತಯಾರಿಗೆ ಬಂದಿದ್ದ 19 ವರ್ಷದ ಮಹೇಶ ರಾಥೋಡ ವಿದ್ಯಾರ್ಥಿ ಜಯನಗರದ ಪಿ ಜಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು
ಧಾರವಾಡದಲ್ಲಿ ಅನಸ್ತೇಶಿಯಾ ತಜ್ಞನ ಕೊಲೆಗೈದ ನೇತ್ರ ವೈದ್ಯೆ ಪತ್ನಿ
ಧಾರವಾಡದ ಅಪಾರ್ಟ್ಮೆಂಟ್ನಲ್ಲಿ ಚಿರಾಯು ಆಸ್ಪತ್ರೆಯ ಅನಸ್ತೇಷಿಯಾ ತಜ್ಞ ಡಾ. ಕಿರಣ್ ಅವರನ್ನು ಕೊಲೆ ಮಾಡಲಾಗಿದ್ದು, ನೇತ್ರ ವೈದ್ಯೆಯಾಗಿರುವ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಆತನ ಸ್ಥತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ
ದಪ್ಪಗಿದ್ದಾಳೆ, ಮಗುವಾಗಲ್ಲವೆಂದು ನವಲಗುಂದದಲ್ಲಿ ಪತ್ನಿಯ ಕೊಲೆಗೈದ ಪತಿ
ದಪ್ಪಗಿದ್ದಾಳೆಂಬ ಕಾರಣಕ್ಕೆ ಪತಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ. ಪತಿ ಬಸವರಾಜ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ದಪ್ಪಗಿದ್ದಾಳೆ, ಆಕೆಗೆ ಮಗು ಆಗಲ್ಲ ಎಂದು ದೂಷಿಸುತ್ತಿದ್ದ ಪತಿ ವರದಕ್ಷಿಣೆ
ಗದಗದಲ್ಲಿ ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್ ಬಡ್ಡಿಕೋರರು: ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್
ಗದಗ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ವಾರದ ಬಡ್ಡಿ ಹಣ ನೀಡದಿದ್ದಕ್ಕೆ ಇಬ್ಬರು ಮಹಿಳೆಯರನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಮೀಟರ್ ಬಡ್ಡಿ ದಂಧಕೋರರು ಹಿಗ್ಗಾಮುಗ್ಗಾ ಥಳಿಸಿರುವ ಆರೋಪ ಕೇಳಿಬಂದಿದೆ. ದಂಧೆಕೋರರಿಂದ ತಪ್ಪಿಸಿಕೊಂಡು ಬಂದಿರುವ ಮಹಿಳೆಯರು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ
ಪತ್ನಿಯ ಕಿರುಕುಳ ಆರೋಪ: ಹುಬ್ಬಳ್ಳಿಯಲ್ಲಿ ಪತಿ ಸುಸೈಡ್
ಪತ್ನಿಯಿಂದ ಕಿರುಕುಳವೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಅಳ್ಳೂರು (39) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ಹೋಗಿದ್ದರು, ಆಕೆಯ




