ಕಲಬುರಗಿ
ಜೇವರ್ಗಿಯಲ್ಲಿ ಲಾರಿಗೆ ಬಸ್ ಡಿಕ್ಕಿಯಾಗಿ ಐವರ ಸಾವು
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಶನಿವಾರ ನಸುಕಿನಜಾವ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ಘಟನೆ ನಡೆದಿದ್ದು,
ಕಲಬುರಗಿಯಲ್ಲಿ ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
ಕಲಬುರಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್ವೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ (35), ಮುನಿಶ್ (9), ಮೂರು ತಿಂಗಳ ಮಗು ಅನಿಶ್ರನ್ನು ಕೊಲೆ ಮಾಡಿದ ಬಳಿಕ ಸಂತೋಷ್ ಕೊರಳ್ಳಿ (45) ಆತ್ಮಹತ್ಯೆ
ಕಲಬುರಗಿ ಆಸ್ಪತ್ರೆಯಲ್ಲಿ ಬಾಣಂತಿ, ಶಿಶು ಸಾವು: ಕುಟುಂಬದ ದಾಂಧಲೆ
ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಮೃತಪಟ್ಟಿದ್ದಾರೆ. ಹೆರಿಗೆಗೂ ಮುನ್ನ ಗರ್ಭದಲ್ಲಿಯೇ ಮಗು ಸತ್ತಿರುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದು, ಲೋ ಬಿಪಿಯಿಂದ ತಾಯಿಯೂ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಕಲಬುರಗಿ ನಗರದ ಎಂಎಸ್ಕೆ ಮಿಲ್ ಬಡಾವಣೆಯಲ್ಲಿರುವ
ಠಾಣೆಯಲ್ಲೇ ಜೂಜಾಡಿದ ಕಲಬುರಗಿಯ ಐವರು ಪೊಲೀಸರ ಅಮಾನತು
ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಪೊಲೀಸ್ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್ಐ ಮಹಿಮೂದ್ ಮಿಯಾ, ಹೆಡ್ ಕಾನ್ಸ್ಟೇಬಲ್ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್ಟೇಬಲ್
ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ
“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38
ಯಡ್ರಾಮಿಯಲ್ಲಿ ಶಾಲಾ ಸಮವಸ್ತ್ರ ಧರಿಸಿಕೊಂಡೇ ಬಾಲ ಪ್ರೇಮಿಗಳ ಸುಸೈಡ್
ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾಗಿದ್ದ ಪ್ರೇಮಿಗಳಿಬ್ಬರು ಶಾಲೆಯ ಸಮವಸ್ತ್ರ ಧರಿಸಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ. ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಕೆಂಚಪ್ಪ (16) ಹಾಗೂ ಅದೇ
ಮಹಿಳಾ ಮೀಸಲು ಜಾರಿಯಾಗಲಿದೆ, ವಿಧಾನಸಭೆ, ಲೋಕಸಭೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿ: ಡಿ.ಕೆ.ಶಿವಕುಮಾರ್
“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು, ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಉದ್ಘಾಟಿಸಿ ಮಾತನಾಡಿ, ಈಗ ಪಂಚಾಯಿತಿಯಿಂದ
ವಿವಿಗಳ ನಕಲಿ ಅಂಕಪಟ್ಟಿ ಜಾಲ ಬೇಧಿಸಿ ಪ್ರಮುಖ ಆರೋಪಿಯ ಬಂಧಿಸಿದ ಕಲಬುರಗಿ ಪೊಲೀಸ್
ಕಲಬುರಗಿ ನಗರ ಪೊಲೀಸರು ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ. ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ರಾಜೀವ್ ಸಿಂಗ್ ಅರೋರಾ
ಕಲಬುರಗಿ ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಕಲಬುರಗಿ ನಗರದ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ ಲೋ ಬಿಪಿಯಿಂದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತಪಟ್ಟವರು. ಹೆರಿಗೆಗಾಗಿ ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದರು. ನಿರಂತರ ರಕ್ತ
ವಿಜಯಪುರದಿಂದ ಕುಂಭಮೇಳಕ್ಕೆ ಹೊರಟಿದ್ದ ಇಬ್ಬರು ಅಪಘಾತಕ್ಕೆ ಬಲಿ
ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್ರಾಜ್ ಗೆ ಪ್ರಯಾಣಿಸುತ್ತಿದ್ದಾಗ ಗುಜರಾತ್ನ ಪೋರ್ಬಂದರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟವರು. ಚಡಚಣ ಪಟ್ಟಣದಿಂದ