Menu

ಕಲಬುರಗಿ ಡಿಸಿಗೆ ಅವಹೇಳನ: ಎಂಎಲ್‌ಸಿ ಎನ್. ರವಿಕುಮಾರ್ ಬಂಧನ ಸಾಧ್ಯತೆ

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ಅವರಿಗೆ ಬಂಧನ ಭೀತಿ ಎದುರಾಗಿದೆ. ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ರ‍್ಯಾಲಿ ವೇಳೆ  ಮಾತನಾಡುವಾಗ ರವಿಕುಮಾರ್‌, ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ರವಿಕುಮಾರ್‌ ಕೋರ್ಟ್‌ ಮೊರೆ ಹೋಗಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಾಳೆ

ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಹಾಳು ಮಾಡಿದ ಬಿಜೆಪಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಈ ಹಿಂದೆ ಅಪಾರ ಗಣಿ ಹಣದಿಂದ ಇಡೀ ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದಾರೋ ಅದೇ ಬಿಜೆಪಿ  ನಾಯಕರು ಕಲಬುರಗಿ ರಿಪಬ್ಲಿಕ್ ಆಗಿದೆ ಎಂದರೆ ಜನ ನಂಬುತ್ತಾರೆಯೇ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ

ಅಂಬೇಡ್ಕರ್‌ಗೆ ದ್ರೋಹ ಮಾಡಿದ ಕಾಂಗ್ರೆಸ್‌ ನಾಯಕರಿಂದ ಸಂವಿಧಾನ ಪುಸ್ತಕ ಹಿಡಿದು ಓಡಾಟ

ಬಾಬಾ ಸಾಹೇಬ್‌ ಅಂಬೇಡ್ಕರ್‌ಗೆ ದ್ರೋಹ ಮಾಡಿದ ಕಾಂಗ್ರೆಸ್‌ ನಾಯಕರು, ಈಗ ಸಂವಿಧಾನದ ಪುಸ್ತಕ ಹಿಡಿದು ಓಡಾಡುತ್ತಿದ್ದಾರೆ. ಈ ಆಟ ಬಹಳ ದಿನ ನಡೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು. ಕಲಬುರ್ಗಿ ಚಲೋ ಹೋರಾಟದಲ್ಲಿ ಮಾತನಾಡಿದ ಅವರು, ಕಲಬುರ್ಗಿಯ ಜನರನ್ನು

ಕಲಬುರಗಿಯಲ್ಲಿ ಶಾಲಾ ಪುಸ್ತಕ ದಾಸ್ತಾನಿಗೆ ಬೆಂಕಿ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಶಾಲೆಗಳಿಗೆ ಸರಬರಾಜು ಮಾಡಲು ಇಡಲಾಗಿದ್ದ ಪುಸ್ತಕ ದಾಸ್ತಾನಿಗೆ ಬೆಂಕಿ ಬಿದ್ದು ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಗೂ ಹಳೆಯ ಶಾಲಾ ಸಮವಸ್ತ್ರಗಳು ಬೆಂಕಿಗಾಹುತಿಯಾಗಿವೆ. 4ನೇ ತರಗತಿಯಿಂದ 8ನೇ ತರಗತಿ ಕನ್ನಡ ಮಾಧ್ಯಮದ ಪುಸ್ತಕಗಳು

ಜಾತಕದೋಷವೆಂದು ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿ ಅರೆಸ್ಟ್‌

ಜಾತಕದಲ್ಲಿ ದೊಡ್ಡ ದೋಷವಿದೆ, ಪೂಜೆ ಮಾಡಿ ಸರಿ ಮಾಡುವುದಾಗಿ ಹೇಳಿ ನಂಬಿಸಿ ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿಯನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ಪೊಲೀಸ್ ಕ್ವಾಟ್ರಸ್‌ನಲ್ಲಿದ್ದ ಮಹಿಳಾ ಕಾನ್‌ಸ್ಟೇಬಲ್‌ ಅನಾರೋಗ್ಯಕ್ಕೆ ಒಳಗಾದಾಗ ಸ್ನೇಹಿತರ ಮೂಲಕ ಕಲಬುರಗಿಯ ಜ್ಯೋತಿಷಿ

ಯಾದಗಿರಿಯಲ್ಲಿ ಸಾಲ ಮರಳಿಸು ಅಂದ ಅಳಿಯನ ಕೊಲೆಗೈದ ಮಾವ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್‌.ಕೆ) ಗ್ರಾಮದಲ್ಲಿ ಕೊಟ್ಟ ಸಾಲ ಮರಳಿ ಕೊಡುವಂತೆ ಕೇಳಿದ ಅಳಿಯನನ್ನು ಆತನ ಸೋದರ ಮಾವ ಕೊಲೆ ಮಾಡಿರುವ ಘಟನೆ ನಡೆದಿದೆ. ಲಕ್ಷ್ಮಣ ಚಿಗರಿಹಾಳ (25) ಹತ್ಯೆಗೀಡಾದ ಯುವಬಕ. ಆತನ ಸೋದರ ಮಾವ ಮಾನಪ್ಪ ಎಂಬಾತ ಕೊಲೆ

ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್‌ ಖರ್ಗೆ

ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ

ದ್ವೇಷ ಹರಡುವ ವೀಡಿಯೊ ಪೋಸ್ಟ್​: ಯಾದಗಿರಿಯ ಯುವಕನ ಬಂಧನ

ಧರ್ಮ ಹಾಗೂ ಸಮುದಾಯಗಳ ಮಧ್ಯೆ ದ್ವೇಷ ಹರಡುವ ವೀಡಿಯೊ ಪೋಸ್ಟ್​ ಮಾಡಿದ ಆರೋಪದಲ್ಲಿ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಮಾ ಪಠಣಕ್ಕೆ ಸಂಬಂಧಿಸಿದ ಬರಹ ಇತ್ತು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವೀಡಿಯೊ ಪೋಸ್ಟ್

ಲಿಫ್ಟ್‌ನಲ್ಲಿ ಸಿಲುಕಿದ ಬಿಮ್ಸ್‌ ಸಿಬ್ಬಂದಿ: ಗೋಡೆ ಒಡೆದ ಬಳಿಕ ಹೊರಕ್ಕೆ

ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಲಿಫ್ಟ್‌ ಸ್ಥಗಿತಗೊಂಡು ಆಸ್ಪತ್ರೆಯ 8 ಸಿಬ್ಬಂದಿ ಲಿಫ್ಟ್ ನಲ್ಲಿ ಸಿಲುಕಿ ಪರದಾಡುವಂತಾಗಿ, ಸ್ಥಳದಲ್ಲಿದ್ದವರಲ್ಲಿ ಆತಂಕ ಸೃಷ್ಟಿಸಿತ್ತು.  ಒಂದು ಗಂಟೆಗೂ ಹೆಚ್ಚು ಸಮಯ ಸಿಬ್ಬಂ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದು, ಲಿಫ್ಟ್ ಗೋಡೆ ಒಡೆದ ಬಳಿಕ ಹೊರಬಂದಿದ್ದಾರೆ. ಗಂಟೆಗೂ

ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ  ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ