Menu

ರಾಜ್ಯದ ಕರಾವಳಿಯಲ್ಲಿ ಮೇ 25ರಿಂದ ಭಾರಿ ಮಳೆ,ರೆಡ್ ಅಲರ್ಟ್

ರಾಜ್ಯದಲ್ಲಿ ಎರಡು ದಿನ ವಿರಾಮ ಪಡೆದಿರುವ ಮಳೆ  ಮತ್ತೆ ಸುರಿಯುವ ಲಕ್ಷಣವಿದ್ದು, ಕರಾವಳಿಯಲ್ಲಿ ಮೇ 25ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ  ಇಂದು ಹೆಚ್ಚು ಮಳೆ ಯಾಗುವ ಮುನ್ಸೂಚನೆ ಇದ್ದು,  ಈ ಜಿಲ್ಲೆಗಳಲ್ಲಿ  ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.   ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ,

ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತು ಬ್ಯಾನ್‌ ಮಾಡಿದ ಹೊನ್ನಾವರ ರೈತರು

ಪಹಲ್ಗಾಮ್​​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್‌ ನಡೆಸಿ ತಕ್ಕ ಉತ್ತರ ನೀಡಿದೆ. ಇದಾದ ಬಳಿಕ ದೇಶದಲ್ಲಿ ಪಾಕ್‌ ವಿರುದ್ಧ ಅಭಿಯಾನವೇ ಶುರುವಾಗಿದೆ. ದೇಶದ ಚಿತ್ರರಂಗವು ಪಾಕ್‌ಗೆ ನೆರವಾಗಿರುವ ಟರ್ಕಿಯಲ್ಲಿ ಇನ್ನು ಮುಂದೆ ಶೂಟಿಂಗ್‌ ನಡೆಸದಿರಲು ನಿರ್ಧರಿಸಿದೆ, ಕರ್ನಾಟಕದ ವಿಜಯಪುರ

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ

ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್‌ ಮಾಕ್‌ ಡ್ರಿಲ್‌

ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್

ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು

ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು ವಾಸವಿದ್ದು, ದೀರ್ಘಾವಧಿ ವೀಸಾ ಹೊಂದಿದ್ದು ಭಾರತದಲ್ಲೇ ಇರಲಿದ್ದಾರೆ. ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ, ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರದ ಗಡುವು ನೀಡಿದೆ. ಭಟ್ಕಳದಲ್ಲಿ

ಕಾರವಾರದಲ್ಲಿ ನಗರಸಭೆ ಮಾಜಿ ಅಧ್ಯಕ್ಷನ ಕೊಲೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್​ಎನ್​ಎಲ್​ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್

ದಾಂಡೇಲಿಯಲ್ಲಿ ನಕಲಿ ನೋಟು: ಆರೋಪಿ ಲಕ್ನೋದಲ್ಲಿ ಸೆರೆ

ಕಾರವಾರದ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣದ  ಆರೋಪಿಯನ್ನು ಪತ್ತೆ ಹಚ್ಚಿ  ಲಕ್ನೋದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಿ

ಕಾಸರಕೋಡದ ವಾಣಿಜ್ಯ ಬಂದರು ಯೋಜನೆ ಕೈಬಿಡಲು ಸಿಎಂಗೆ ಮೀನುಗಾರರ ಆಗ್ರಹ

ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡುವಂತೆ ರಾಷ್ಟ್ರೀಯ ಮೀನುಗಾರರ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಪರಿಸರ ಸೂಕ್ಷ್ಮ ಕಡಲತೀರದ 5 ಕಿಲೋಮೀಟರ್ ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪಥ ರಸ್ತೆ ಮತ್ತು

ದಾಂಡೇಲಿಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳ ಬಂಡಲ್‌ ಪತ್ತೆ

ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ನಂತೆ ಅಂದಾಜು ₹14 ಕೋಟಿ ಮೌಲ್ಯವೆಂದು ಲೆಕ್ಕಕ್ಕೆ ತೆಗೆದುಕೊಳ್ಳಬಹುದಾದ ನಕಲಿ ನೋಟುಗಳು ಸಿಕ್ಕಿವೆ. ಖಚಿತ ಮಾಹಿತಿ ಹಿನ್ನೆಲೆ ಯಲ್ಲಿ ನಗರ ಠಾಣೆಯ

ಇನ್ನೆರಡು ತಿಂಗಳಲ್ಲಿ ಕಾರವಾರದಲ್ಲಿ 450 ಹಾಸಿಗೆಯ ಆಸ್ಪತ್ರೆ 

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ  ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ