ಕೋಲಾರ
ಕೋಲಾರದಲ್ಲಿ ಕಾರು ಅಪಘಾತಕ್ಕೆ ತಾಯಿ ಬಲಿ , ಮಗನ ಸ್ಥಿತಿ ಗಂಭೀರ
ಕೋಲಾರದ ಮಾಲೂರು ತಾಲೂಕಿನ ಆನೇಪುರ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಕಾರು ಅಪಘಾತಗೊಂಡು ತಾಯಿ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡಿದ್ದಾರೆ. ಕೆಜಿಎಫ್ ಮೂಲದ ಪುಷ್ಪಲತಾ (70) ಮೃತ ಮಹಿಳೆ. ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಾಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ
ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ
ಜಾತಿಗಣತಿ ಜನತೆಗೆ ಖುಷಿಯಾದರೆ ಬಿಜೆಪಿಗೆ ಸಹಿಸಿಕೊಳ್ಳಕ್ಕೆ ಆಗುತ್ತಿಲ್ಲ: ಸಚಿವ ಬೈರತಿ ಸುರೇಶ್
ಕೋಲಾರ: ಜಾತಿಗಣತಿ ವರದಿ ಜಾರಿಗೆ ತಂದಿರುವುದು ರಾಜ್ಯದ ಜನತೆಗೆ ಖುಷಿ ಉಂಟು ಮಾಡಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ಮತ್ತೆ ಐವರು ಅರೆಸ್ಟ್
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ಪೊಲೀಸರು ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ. ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ ದೋಚಿದ್ದ
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ ಅರೆಸ್ಟ್
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ, ಕೆಜಿಎಫ್ ಕಾಂಗ್ರೆಸ್ ಮುಖಂಡ ಜಯಪಾಲ್ ಎಂಬವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನ್ನೈನಿಂದ ಕೆಜಿಎಫ್ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡವೊಂದು ಏಪ್ರಿಲ್
ಬಂಗಾರಪೇಟೆಯಲ್ಲಿ ವಾಕಿಂಗ್ ಮಾಡುತ್ತಿದ್ದವರಿಗೆ ಬೈಕ್ ಡಿಕ್ಕಿ: ನಿವೃತ್ತ ಉಪನ್ಯಾಸಕರಿಬ್ಬರು ಬಲಿ
ಕೋಲಾರದ ಬಂಗಾರಪೇಟೆ ಪಟ್ಟಣದ ಜೂನಿಯರ್ ಕಾಲೇಜು ಬಳಿ ಯು ವಿಹಾರಕ್ಕೆಂದು ತೆರಳಿದ್ದ ನಿವೃತ್ತ ಉಪನ್ಯಾಸಕರಿಗೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ನಿವೃತ್ತ ಕನ್ನಡ ಉಪನ್ಯಾಸಕ ಕೆ.ಬಿ.ಮೋಹನ್ (64), ನಿವೃತ್ತ ರಾಸಾಯನ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀ ನಾರಾಯಣ (62) ಮೃತಪಟ್ಟವರು. ಸಂಜೆ ವಾಯು
ಕೋಲಾರ ಹಾಲು ಉತ್ಪಾದಕರಿಗೆ 2 ರೂ. ಹೆಚ್ಚಳ: ಸಚಿವ ಬೈರತಿ ಸುರೇಶ
ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ ಎಸ್ ಸುರೇಶ (ಬೈರತಿ)
ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್ ಸಿಬಿಐಗೆ ನೀಡಿದ ಹೈಕೋರ್ಟ್
ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್
ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್ ಡಿಕ್ಕಿಯಾಗಿ ನಾಲ್ವರ ಸಾವು
ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ
ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ. ಘಟನೆಯಿಂದ ಸಾಕರಸನಹಳ್ಳಿ